ತೋಡು ದಾಟಲು ಮರದ ಸಂಕವೇ ಗತಿ


Team Udayavani, Jun 14, 2018, 11:18 AM IST

14-june-4.jpg

ಕಂದಾವರ : ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೌಡೂರಿನಲ್ಲಿ ತೋಡು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು, ಈ ತೋಡಿಗೆ ಸರಿಯಾದ ಸೇತುವೆ ಇಲ್ಲದೆ ಅಪಾಯ ಕಾರಿಯಾದ ಅಡಿಕೆ ಮರದ ಸಂಕದ ಮೇಲೆ ಮಕ್ಕಳು, ಗ್ರಾಮಸ್ಥರು ನಡೆದು ಹೋಗಬೇಕಿದೆ. ಒಂದೆಡೆ ದುರ್ಗಮವಾದ ರಸ್ತೆ ಮತ್ತೂಂದೆಡೆ ಅಪಾಯಕಾರಿ ಸಂಕದಿಂದ ಗ್ರಾಮಸ್ಥರು ಭಯದಿಂದಲೇ ಸಂಚರಿಸಬೇಕಾಗಿದೆ.

ಕೌಡೂರು ಶ್ರೀ ಕಾಲಭೈರವೇಶ್ವರ ದೇವಸ್ಥಾನದ ಬಳಿ ಇರುವ ಈ ತೋಡು ಗಂಜಿಮಠ, ಸೂರಲ್ಪಾಡಿ, ಕಿನ್ನಿಕಂಬಳ, ಕೌಡೂರು, ಮೂಡುಕರೆ, ಕಂದಾವರವಾಗಿ ಗುರುಪುರ ನದಿಯನ್ನು ಸೇರುತ್ತದೆ. 

ಹಲವು ವರ್ಷಗಳ ಬೇಡಿಕೆ
ಈ ತೋಡಿಗೆ ಕಾಲುಸಂಕ ಅಥವಾ ಕಿರು ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಹಲವು ಬಾರಿ ಗ್ರಾಮ ಸಭೆಯಲ್ಲಿ ಮನವಿ ಮಾಡಿದ್ದಾರೆ. ಆದರೆ ಈ ತನಕ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಅಂಗನವಾಡಿ ಕೇಂದ್ರ ಹಾಗೂ ಕೌಡೂರು ಸೈಟ್‌ ಮನೆಗಳಿಗೆ ಇದು ಹತ್ತಿರದ ದಾರಿಯಾಗಿದೆ. ಅಂಗನವಾಡಿ ಕೇಂದ್ರದಲ್ಲಿ ಸುಮಾರು 30 ಮಕ್ಕಳಿದ್ದಾರೆ. ಅವರಿಗೂ ಈ ಸಂಕವೇ ಗತಿ. ಈ ಭಾಗದಲ್ಲಿರುವ ಸುಮಾರು 20 ಮನೆಗಳಿಗೆ ಈ ಕಾಲುಸಂಕ ಮುಖ್ಯ ಸಂಪರ್ಕ ಸಾಧನವಾಗಿದೆ. ಇಲ್ಲವಾದರೆ ಸುತ್ತು ಬಳಸಿ ರಸ್ತೆ ಮೂಲಕ ಬರಬೇಕಿದ್ದು, ಆ ರಸ್ತೆಯೂ ಕೆಸರುಮಯವಾಗಿದೆ.

ಅಪಾಯಕಾರಿ
ಮಳೆಗಾಲದಲ್ಲಿ ಈ ತೋಡಿನಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಇದರಿಂದ ಈ ಸಂಕದಲ್ಲಿ ಹಾದು ಹೋಗುವ ಅಂಗನವಾಡಿ ಮಕ್ಕಳು ನಿತ್ಯವೂ ಅಪಾಯ ಎದುರಿಸಬೇಕಾಗುತ್ತದೆ. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ದಿನನಿತ್ಯ ಮಕ್ಕಳನ್ನು ಇಲ್ಲಿ ನಿಂತು ನಿಗಾ ವಹಿಸಿ ಆವರನ್ನು ಒಂದು ಬದಿಯಿಂದ ಇನ್ನೊಂದು ಬದಿಗೆ ಹಾದುಹೋಗಲು ಸಹಕರಿಸಬೇಕಾಗುತ್ತದೆ.

ಕೌಡೂರು ರಸ್ತೆ ಕೆಸರುಮಯ
ಈ ಪ್ರದೇಶದ ರಸ್ತೆ ಕೆಸರುಮಯವಾಗಿದ್ದು, ಈ ರಸ್ತೆಯಲ್ಲಿ ಕೌಡೂರು ಸೈಟ್‌ಗೆ ಹೋಗುವುದು ಕಷ್ಟಕರವಾಗಿದೆ. ಈ ರಸ್ತೆಯನ್ನು ಜೇಸಿಬಿಯ ಮೂಲಕ ಸರಿಪಡಿಸುವ ಕಾರ್ಯ ನಡೆಯುತ್ತಿದೆ. 

ಕಾಲು ಸೇತುವೆಯ ಬೇಡಿಕೆ ಬಂದಿಲ್ಲ
ಕೌಡೂರು ತೋಡಿಗೆ ಕಾಲು ಸೇತುವೆಯ ಬೇಡಿಕೆ ಬಂದಿಲ್ಲ. ಗ್ರಾಮಸ್ಥರು ಮನವಿ ಮಾಡಿದ್ದಲ್ಲಿ ಕಾಲು ಸೇತುವೆಗೆ ಕ್ರಮ ತೆಗೆದುಕೊಳ್ಳಲಾಗುವುದು. ನರೇಗಾ ಯೋಜನೆಯಡಿಯಲ್ಲಿ ಕಾಲು ಸೇತುವೆ ನಿರ್ಮಾಣ ಮಾಡಲು ಅವಕಾಶವಿದೆ.
– ರೋಹಿಣಿ, ಗ್ರಾಮ
ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಕಂದಾವರ 

ನಾಲ್ಕು ಅಡಿಕೆ ಮರ ಬೇಕು
ಕಿರು ಸೇತುವೆಗೆ ಪಂಚಾಯತ್‌ ಸ್ಪಂದಿಸದ ಕಾರಣ ಕಂದಾವರ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಪ್ರಕಾಶ್‌ ರೈ ಅವರ ನೇತೃತ್ವದಲ್ಲಿ, ಫ್ರೆಂಡ್‌ ಕ್ರಿಕೆಟರ್ ಕೌಡೂರು ಮತ್ತು ಗ್ರಾಮಸ್ಥರಿಂದ ಅಡಿಕೆ ಮರದ ಸಂಕ ಹಾಕಲಾಗಿದೆ. ತೋಡು 22ಅಡಿ ಅಗಲ ಇದ್ದು ಸುಮಾರು 27 ಅಡಿ ಉದ್ದವಿರುವ ಅಡಿಕೆ ಮರವನ್ನು ಹುಡುಕಿ ತಂದು ಇಲ್ಲಿನ ತೋಡಿಗೆ ಅಡ್ಡ ಹಾಕಬೇಕಾಗುತ್ತದೆ. ಕಡಿಮೆ ಪಕ್ಷ ನಾಲ್ಕು ಅಡಿಕೆ ಮರ ಅಡ್ಡಕ್ಕೆ ಹಾಕಬೇಕಾಗುತ್ತದೆ. ಹಾದು ಹೋಗುವಾಗ ಸಮತೋಲನಕ್ಕಾಗಿ ಕೈ ಹಿಡಿ ಯಲು ಬೇಕಾದ ಮರವನ್ನು ಅಡ್ಡ ಕಟ್ಟಬೇಕಾಗುತ್ತದೆ.
– ಯಶವಂತ, ಸ್ಥಳೀಯ

ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.