ಬೆಳಂದೂರು ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಅಡಿಕೆ ನರ್ಸರಿ


Team Udayavani, Jun 14, 2018, 11:36 AM IST

14-june-5.jpg

ಬೆಳಂದೂರು: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಎನ್ನೆಸೆಸ್‌ ಘಟಕವು ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಈ ಮೂಲಕ ವಿದ್ಯಾರ್ಥಿಗಳನ್ನು ಸಮಾಜದ ಜತೆಗೆ ಬೆರೆಯಲು ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳಿಗೂ ಸಮಾಜಮುಖೀಯಾಗಿ ಬೆಳೆಯಲು ಪ್ರೇರಣೆ ನೀಡುತ್ತಿದೆ.

ಗ್ರಾಮ ದತ್ತು ಸ್ವೀಕಾರ
ಕಳೆದ ಶೈಕ್ಷಣಿಕ ಸಾಲಿನಲ್ಲಿ ಬೆಳಂದೂರು ಗ್ರಾಮವನ್ನು ಕಾಲೇಜಿನ ಎನ್ನೆಸೆಸ್‌ ಘಟಕವು ಹಸುರೀಕರಣಕ್ಕಾಗಿ ದತ್ತು ತೆಗೆದುಕೊಂಡಿದೆ. ಇದರನ್ವಯ ಪ್ರತೀ ಮನೆ ಆವರಣದಲ್ಲೂ ವಾಣಿಜ್ಯ ಬೆಳೆಗಳಾದ ಅಡಿಕೆ, ನೇಂದ್ರ ಬಾಳೆ ಕಂದು, ಕೊಕ್ಕೋ, ತೆಂಗು, ಕಸಿ ಗೇರು ಗಿಡಗಳನ್ನು ಎನ್ನೆಸೆಸ್‌ ಘಟಕದ ವಿದ್ಯಾರ್ಥಿಗಳೇ ನೆಟ್ಟು ಅದರ ಸಂಪೂರ್ಣ ಪೋಷಣೆಯ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ವಾಣಿಜ್ಯ ಬೆಳೆಗಳ ಗಿಡ ಕೊಡುವುದರಿಂದ ಮನೆಯವರೂ ಗಿಡಗಳ ಕುರಿತು ನಿಗಾ ವಹಿ ಸುತ್ತಾರೆ ಎಂಬ ದೃಷ್ಟಿಯಿಂದ ಅನುಷ್ಠಾನಗೊಳಿಸಲಾಗಿದೆ ಎಂದು ಎನ್ನೆಸೆಸ್‌ ಘಟಕದ ಯೋಜನಾಧಿಕಾರಿ ವೆಂಕಟೇಶ್‌ ಪ್ರಸನ್ನ ಹೇಳುತ್ತಾರೆ.

ಇದರೊಂದಿಗೆ ಪ್ರತೀ ಮನೆಯಲ್ಲೂ ಶುಚಿತ್ವ, ಜಲ ಸಂರಕ್ಷಣೆ, ಹಸುರೀಕರಣದ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಗಿಡ ನೆಡುವ ಕಾರ್ಯವನ್ನು ನಡೆಸಲಾಗುತ್ತಿದೆ.

ಕಲಿಕೆಯೊಂದಿಗೆ ಗಳಿಕೆ
ಕಳೆದ ವರ್ಷದಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಹಸುರೀಕರಣದ ಜತೆಗೆ ಕಲಿಕೆಯೊಂದಿಗೆ ಗಳಿಕೆ ಎಂಬ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಅವರ ವಿದ್ಯಾಭ್ಯಾಸಕ್ಕೆ ಪೂರಕವಾಗಿರುವ ಕ್ಷೇತ್ರದಲ್ಲಿ ಕೆಲಸ ಮಾಡುವ ಮೂಲಕ ಅನುಭವ ಹೊಂದುವಂತಾಗುತ್ತಾರೆ. ಇದಕ್ಕಾಗಿ ಎರಡು ಸಹಕಾರಿ ಸಂಘಗಳಲ್ಲಿ, ಮೊಬೈಲ್‌ ರಿಪೇರಿ ಸಂಸ್ಥೆಗಳಲ್ಲೂ ಮಾತುಕತೆ ನಡೆಸಲಾಗಿದೆ. ವಿದ್ಯಾರ್ಥಿನಿಯರಿಗೆ ಬ್ಯೂಟಿಷಿಯನ್‌ ತರಬೇತಿ ಕೇಂದ್ರದಲ್ಲೂ ಕಲಿಕೆಯೊಂದಿಗೆ ಗಳಿಕೆ ಕಲ್ಪನೆಯಡಿ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಬೇಕಾದ ಎಲ್ಲಾ ಪೂರಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳ ಹಾಗೂ ಪ್ರಾಚಾರ್ಯರ, ಉಪನ್ಯಾಸಕರ ಯೋಜನೆಗಳಿಗೆ ತಕ್ಕಂತೆ ಕಾಲೇಜು ಅಭಿವೃದ್ಧಿ ಸಮಿತಿಯೂ ಸಹಕಾರ ನೀಡುತ್ತಿದೆ ಎಂದು ಹೇಳುತ್ತಾರೆ ಕಾಲೇಜಿನ ಪ್ರಾಚಾರ್ಯ ಪ್ರೊ| ಕೆ. ಪದ್ಮನಾಭ ಅವರು.

ಅಡಿಕೆ ಸಸಿಗಳು ಸಿದ್ಧ
ಈ ಬಾರಿ ಕಾಲೇಜಿನಲ್ಲಿ ಅಡಿಕೆ ಸಸಿಗಳ ನರ್ಸರಿ ಮಾಡಲಾಗಿದೆ. ಉತ್ತಮ ತಳಿಯ ಸಾವಿರಕ್ಕೂ ಮಿಕ್ಕಿ ಅಡಿಕೆ ಗಿಡಗಳು ಲಭ್ಯವಿವೆ. ಕಾಲೇಜಿನಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ಬೇಕಾದ ತರಕಾರಿಗಳನ್ನು ಆವರಣದ ಕೈತೋಟದಲ್ಲಿಯೇ ಬೆಳೆಸ ಲಾಗಿದೆ. ಬಸಳೆ, ಬೆಂಡೆ, ಸೌತೆ, ಬದನೆ, ತೊಂಡೆಕಾಯಿ, ಅಲಸಂಡೆ ಕೃಷಿ ಸಮೃದ್ಧವಾಗಿ ಬೆಳೆದಿದ್ದು ಸ್ವಾವಲಂಬನೆಯತ್ತ ಹೆಜ್ಜೆ ಇಡುತ್ತಿದೆ. ಕಾಲೇಜಿನಲ್ಲಿ ಅಡಿಕೆ ಸಸಿಗಳ ನರ್ಸರಿ ಮಾಡಿರುವುದು. 

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.