ತಾಳ್ಮೆ ಕೊಟ್ಟ ಅವಕಾಶ; ಹರಿಪ್ರಿಯಾ ಆರರ ಕನಸು


Team Udayavani, Jun 14, 2018, 4:26 PM IST

haripriya-3.jpg

ಒಂದು ಕಡೆ ಪ್ಯಾಶನೇಟ್‌ ಗರ್ಲ್, ಮತ್ತೂಂದು ಕಡೆ ಮಧ್ಯಮ ವರ್ಗದ ಹುಡುಗಿ, ಇನ್ನೊಂದು ಕಡೆ ಪೊಲೀಸ್‌ ಆಫೀಸರ್‌, ಡ್ಯಾನ್ಸರ್‌ … ಒಂದಕ್ಕಿಂತ ಒಂದು ವಿಭಿನ್ನ ಪಾತ್ರ. ಬಹುಶಃ ಹರಿಪ್ರಿಯಾ ಖುಷಿಯಾಗಲು ಇದಕ್ಕಿಂತ ಇನ್ನೊಂದು ಬೇರೇನು ಕಾರಣ ಬೇಕಿಲ್ಲ. ಸದ್ಯ ಹರಿಪ್ರಿಯಾ ಕೈಯಲ್ಲಿ ಆರು ಸಿನಿಮಾಗಳಿವೆ. “ಲೈಫ್ ಜೊತೆಗೊಂದ್‌ ಸೆಲ್ಫಿ’, “ಸೂಜಿದಾರ’, “ಡಾಟರ್‌ ಆಫ್ ಪಾರ್ವತಮ್ಮ’, “ಕಥಾಸಂಗಮ’, “ಬೆಲ್‌ ಬಾಟಮ್‌’ ಹಾಗೂ “ಕುರುಕ್ಷೇತ್ರ’ ಚಿತ್ರಗಳಲ್ಲಿ ಹರಿಪ್ರಿಯಾ ನಟಿಸಿದ್ದಾರೆ. ಆರಕ್ಕೆ ಆರು ಸಿನಿಮಾಗಳಲ್ಲೂ ಹರಿಪ್ರಿಯಾ ಅವರ ಪಾತ್ರ ಭಿನ್ನವಾಗಿದೆಯಂತೆ. ಇದರಲ್ಲಿ ನಾಲ್ಕು ಸಿನಿಮಾಗಳ ಚಿತ್ರೀಕರಣ ಮುಗಿದು ಹೋಗಿದೆ. ಸದ್ಯ ಆ ಸಿನಿಮಾಗಳು ಚಿತ್ರೀಕರಣೋತ್ತರ ಕೆಲಸಗಳಲ್ಲಿ ಬಿಝಿ. 

“ಒಂದಕ್ಕಿಂತ ಒಂದು ಸಿನಿಮಾದಲ್ಲಿ ಪಾತ್ರಗಳು ಭಿನ್ನವಾಗಿವೆ. “ಲೈಫ್ ಜೊತೆಗೊಂದ್‌ ಸೆಲ್ಫಿ’ ಚಿತ್ರದಲ್ಲಿ ಸ್ವತಂತ್ರವಾಗಿ ಓಡಾಡುವ, ನಿರ್ಧಾರ ತೆಗೆದುಕೊಳ್ಳುವ ಪ್ಯಾಶನೇಟ್‌ ಗರ್ಲ್ ಆಗಿ ಕಾಣಿಸಿಕೊಂಡರೆ, “ಸೂಜಿದಾರ’ದಲ್ಲಿ ತುಂಬಾ ಗಂಭೀರವಾದ ಪಾತ್ರ ಸಿಕ್ಕಿದೆ. ಪರ್‌ಫಾರ್ಮೆನ್ಸ್‌ಗೆ ಅವಕಾಶವಿರುವ ಪಾತ್ರ. ಇನ್ನು, “ಕಥಾ ಸಂಗಮ’ ಏಳು ಕಥೆಯಲ್ಲಿನ ಒಂದು ಕಥೆಯಲ್ಲಿ ನಟಿಸಿದ್ದೇನೆ. “ಡಾಟರ್‌ ಆಫ್ ಪಾರ್ವತಮ್ಮ’ದಲ್ಲಿ ವೈದೇಹಿ ಪಾತ್ರ. ನನ್ನ ಸಿನಿ ಕೆರಿಯರ್‌ನಲ್ಲಿ ಈ ತರಹದ ಪಾತ್ರ ಮಾಡಿಲ್ಲ. ಖಡಕ್‌ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದೇನೆ. ಇನ್ನು, “ಕುರುಕ್ಷೇತ್ರ’ದ ಅದ್ಧೂರಿ ಹಾಡಿನಲ್ಲಿದ್ದೇನೆ. ಎಲ್ಲಾ ಸಿನಿಮಾಗಳ ಬಗ್ಗೆ ನಾನಂತು ತುಂಬಾ ಎಕ್ಸೆ„ಟ್‌ ಆಗಿದ್ದೇನೆ’ ಎಂದು ತಮ್ಮ ಪಾತ್ರದ ಬಗ್ಗೆ ಹೇಳುತ್ತಾರೆ ಹರಿಪ್ರಿಯಾ. 

ಎಲ್ಲಾ ಓಕೆ, ಏಕಾಏಕಿ ಹರಿಪ್ರಿಯಾ ಅವರಿಗೆ ಇಷ್ಟೊಂದು ವಿಭಿನ್ನ ಪಾತ್ರಗಳು ಸಿಗಲು ಕಾರಣವೇನು ಎಂದರೆ ತಾಳ್ಮೆ ಎನ್ನುತ್ತಾರೆ. “”ನೀರ್‌ದೋಸೆ’ ನಂತರ ನಾನು ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ಐದಾರು ತಿಂಗಳು ಬರೀ ಕಥೆ ಕೇಳುವುದರಲ್ಲೇ ಸಮಯ ಕಳೆದೆ. ಯಾವ ಕಥೆ ಒಪ್ಪಿಕೊಂಡರೆ ಮುಂದೆ ವಕೌìಟ್‌ ಆಗಬಹುದು ಎಂದು ಯೋಚಿಸಿದೆ. ಆ ನಿಟ್ಟಿನಲ್ಲಿ ಸಾಕಷ್ಟು ಕಥೆ ಕೇಳಿದೆ. ಒಬ್ಬ ಸಾಮಾನ್ಯ ಪ್ರೇಕ್ಷಕಳಾಗಿ ನಾನು ಇಷ್ಟಪಟ್ಟು, ತೃಪ್ತಿಯಾದ ನಂತರ ಆ ಸಿನಿಮಾವನ್ನು ಒಪ್ಪಿಕೊಂಡೆ. ಅದೇ ಕಾರಣದಿಂದ ಒಂದಷ್ಟು ಹೊಸ ಬಗೆಯ ಪಾತ್ರಗಳು ಸಿಗುತ್ತಿವೆ’ ಎಂದು ತಮ್ಮ ಸಿನಿಮಾ ಆಯ್ಕೆಯ ಬಗ್ಗೆ ಹೇಳುತ್ತಾರೆ. 

ಐದು ಸಿನಿಮಾಗಳ ಚಿತ್ರೀಕರಣ ಬಹುತೇಕ ಮುಗಿದಿದೆ. ಆದರೆ, ಹರಿಪ್ರಿಯಾ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಸಹಜವಾಗಿ ಬರುತ್ತದೆ. ಆದರೆ, ಇಲ್ಲಿವರೆಗೆ ಯಾವುದೇ ಸಿನಿಮಾವನ್ನು ಅವರು ಒಪ್ಪಿಕೊಂಡಿಲ್ಲ. ಒಮ್ಮೆ ಒಪ್ಪಿಕೊಂಡ ಸಿನಿಮಾದ ಚಿತ್ರೀಕರಣ ಮುಗಿಸದೇ ಮತ್ತೆ ಬೇರೆ ಸಿನಿಮಾ ಒಪ್ಪಿಕೊಂಡರೆ ಡೇಟ್ಸ್‌ ಹೊಂದಾಣಿಕೆ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಸದ್ಯ ಕಥೆ ಕೇಳುತ್ತಿದ್ದಾರಂತೆ. “ನನ್ನ ಡೇಟ್ಸ್‌ ಅನ್ನು ನಾನೇ ನೋಡಿಕೊಳ್ಳುತ್ತೇನೆ. ಹಾಗಾಗಿ, ಯಾವುದೇ ಸಿನಿಮಾಕ್ಕೆ ತೊಂದರೆಯಾಗದಂತೆ ಸಿನಿಮಾ ಒಪ್ಪಿಕೊಳ್ಳುತ್ತಿದ್ದೇನೆ’ ಎನ್ನುವುದು ಹರಿಪ್ರಿಯಾ ಮಾತು.

ಹರಿಪ್ರಿಯಾ ನಟಿಸುತ್ತಿರುವ ಸಿನಿಮಾಗಳು
1)ಲೈಫ್ ಜೊತೆಗೊಂದ್‌ ಸೆಲ್ಫಿ 2) ಸೂಜಿದಾರ 3) ಕುರುಕ್ಷೇತ್ರ 4)ಡಾಟರ್‌ ಆಫ್ ಪಾರ್ವತಮ್ಮ 5)ಕಥಾ ಸಂಗಮ 6)ಬೆಲ್‌ ಬಾಟಮ್‌

ಟಾಪ್ ನ್ಯೂಸ್

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.