ಭಾರೀ ಮಳೆ ಭೂ ಕುಸಿತ, ಮನೆಗಳಿಗೆ ಹಾನಿ


Team Udayavani, Jun 15, 2018, 2:40 AM IST

bhukusita-14-6.jpg

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಭಾರೀ ಮಳೆಯಿಂದಾಗಿ ಭೂ ಕುಸಿತ ಹಾಗೂ ಮನೆಗಳಿಗೆ ಹಾನಿ ಉಂಟಾಗಿದ್ದು, ಶಾಸಕ ಹರೀಶ್‌ ಪೂಂಜ ಅವರು ಸಂಬಂಧಿತ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ, ಸಮಸ್ಯೆ ಬಗೆಹರಿಸುವ ಭರವಸೆಯಿತ್ತರು. ರೆಂಕೆದ ಗುತ್ತು ಬಳಿ ಮಹಿಳೆಯರು ವಾಸವಿದ್ದ ಮನೆಗೆ ಹಾನಿಯಾಗಿದೆ. ಇಂದಬೆಟ್ಟು ಗ್ರಾಮದ ಫಾತಿಮಾ ಹಾಗೂ ಬಂಗಾಡಿಯ ಮಹಮದ್‌ ಅವರ ಮನೆಗೆ ಹಾನಿಯಾಗಿದೆ. ಲಾೖಲ ಗ್ರಾಮದ ಕಾವಟೆ ನಿವಾಸಿ ನಟರಾಜ್‌ ಗೌಡ ಅವರ ಮನೆ ಮೇಲೆ ಗುಡ್ಡ ಕುಸಿದಿದ್ದು, ಕಿಟಕಿ ಮೂಲಕ ಮಣ್ಣು ಮನೆಯ ಒಳಗೆ ಬಂದಿದೆ. ಇದರಿಂದಾಗಿ ಮನೆ ಪೂರ್ತಿ ಕೆಸರಿನಿಂದ ಆವೃತವಾಗಿದೆ. ಅಂಕಾಜೆಯ ಉಮೇಶ್‌ ಗೌಡ ಅವರ ಮನೆ ಬಳಿ ಗುಡ್ಡ ಕುಸಿದು ಹಾನಿಯಾಗಿದೆ. ಪ್ರಕಾಶ್‌, ಆನಂದ್‌, ಕಲಾವತಿ, ಲಲಿತಾ ಅವರ ಮನೆಗಳೂ ಅಪಾಯದ ಸ್ಥಿತಿಯಲ್ಲಿದ್ದು, ಶಾಸಕ ಹರೀಶ್‌ ಪೂಂಜ ಭೇಟಿ ನೀಡಿದರು.

ಸಂಚಾರ ಸ್ಥಗಿತ
ಲಾೖಲ – ಅಗರಿ ಸಡಕ್‌ ರಸ್ತೆಯಲ್ಲಿ ಕಾವಟೆ ಬಳಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಆಗಮಿ ಸಿದ ಶಾಸಕ ಹರೀಶ್‌ ಪೂಂಜ ಕ್ರಮ ಕೈಗೊಳ್ಳಲು ಸೂಚಿಸಿದರು.

ಹೊಳೆ: ನಿವಾಸಿಗಳಿಗೆ ಜಾಗ
ಲಾೖಲ ಗಾಂಧಿನಗರ ಬಳಿ ಹೊಳೆ ಬದಿ ವಾಸಿಸುತ್ತಿದ್ದ ವಸಂತಿ, ಜಗನ್ನಾಥ, ಶ್ರೀಧರ, ಜಗನ್ನಾಥ್‌, ಶಾರದಾ, ಚಂದ್ರಶೇಖರ ಅವರ ಜಾಗ ಹೆಚ್ಚು ಮಳೆ ಬಂದಾಗ ಮುಳುಗಡೆಯಾಗುತ್ತಿದ್ದು, ಸಮೀಪದಲ್ಲಿದ್ದ ಡಿಸಿ ಮನ್ನಾ ಭೂಮಿ ಗುರುತಿಸಿ 6 ಕುಟುಂಬಗಳಿಗೂ ತಲಾ 2.5 ಸೆಂಟ್ಸ್‌ ಜಾಗ ನೀಡಲು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಸ್ಥಳದಲ್ಲಿ ಕಂದಾಯಾಧಿಕಾರಿ ರವಿ, ಪಿಡಿಒ ಪ್ರಕಾಶ್‌ ಶೆಟ್ಟಿ, ಕಾನಿಷ್ಕಾ, ಗ್ರಾ.ಪಂ ಉಪಾಧ್ಯಕ್ಷ ಗಿರೀಶ್‌ ಡೋಂಗ್ರೆ, ತಾ.ಪಂ. ಸದಸ್ಯ ಸುಧಾಕರ, ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಪೂಂಜ ಅಭಯ
ಶಾಸಕ ಹರೀಶ್‌ ಪೂಂಜ ಅವರು ಫೇಸ್‌ ಬುಕ್‌ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ. ತಾಲೂಕಿನಲ್ಲಿ ಸಮಸ್ಯೆಗಳಾದಲ್ಲಿ ನೇರವಾಗಿ ಸಂಪರ್ಕಿಸಲು ದೂರವಾಣಿ ಸಂಖ್ಯೆಯನ್ನು ನೀಡಿದ್ದಾರೆ. ಜಾಗರೂಕರಾಗಿರಿ, ನಿಧಾನವಾಗಿ ವಾಹನ ಚಲಾಯಿಸಿ ಎನ್ನುವ ಮೂಲಕ ಕಾಳಜಿ ಮೆರೆದಿದ್ದಾರೆ. ತಮ್ಮ ಊರುಗಳಲ್ಲಿ ಜನರಿಗೆ ಸಹಾಯ ಬೇಕಾಗಬಹುದು, ಅಗತ್ಯ ವಸ್ತುಗಳು, ಔಷಧ ಮೊದಲಾದ ವ್ಯವಸ್ಥೆ ಬೇಕಾದವರಿಗೆ ಸಹಾಯ ಮಾಡುವಂತೆ ಸ್ವಯಂ ಸೇವಕರು, ಬಿಜೆಪಿ ಕಾರ್ಯಕರ್ತರು, ಯುವ ಮೋರ್ಚಾ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

10 ಕೋ. ರೂ. ಬಿಡುಗಡೆ ಮಾಡಿ
ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿದ್ದು, ಸೂಕ್ತ ಕ್ರಮಕೈಗೊಳ್ಳಲು ಹಾಗೂ ಪರ್ಯಾಯ ವ್ಯವಸ್ಥೆಗೆ ಸೂಚಿಸಲಾಗಿದೆ. ತಾಲೂಕಿನಲ್ಲಿ ಗರಿಷ್ಠ ಹಾನಿಯಾಗಿದ್ದು, ರಾಜ್ಯ ಸರಕಾರದ ಕಂದಾಯ ಸಚಿವರು ಕೂಡಲೇ ತಾಲೂಕಿಗೆ ವಿಶೇಷ ನಿಧಿಯಾಗಿ 10 ಕೋಟಿ ರೂ. ಬಿಡುಗಡೆ ಮಾಡಬೇಕಿದೆ. ಸುರಕ್ಷತಾ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದು, ಸಮಸ್ಯೆ ಕುರಿತು ತತ್‌ ಕ್ಷಣ ವರದಿ ನೀಡುವಂತೆ ಸೂಚಿಸಲಾಗಿದೆ.
– ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.