2 ದಿನದಲ್ಲಿ ಮುಗಿದ ಟೆಸ್ಟ್‌: ಅಫ್ಘಾನಿಸ್ಥಾನಕ್ಕೆ ಇನ್ನಿಂಗ್ಸ್‌ ಸೋಲು


Team Udayavani, Jun 16, 2018, 6:00 AM IST

2.jpg

ಬೆಂಗಳೂರು: ಮೊದಲ ಟೆಸ್ಟ್‌ ಪಂದ್ಯದ ಖುಷಿಯಲ್ಲಿದ್ದ ಅಫ್ಘಾನಿಸ್ಥಾನಕ್ಕೆ ಮರ್ಮಾಘಾತವಾಗಿದೆ. ಆತಿಥೇಯ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ಅಫ್ಘಾನ್‌ ಪಡೆ ಎರಡೇ ದಿನದಲ್ಲಿ ಇನ್ನಿಂಗ್ಸ್‌ ಹಾಗೂ 262 ರನ್‌ ಅಂತರದ ಭಾರೀ ಸೋಲಿಗೆ ತುತ್ತಾಗಿದೆ. 

ಶುಕ್ರವಾರ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಸಂಭವಿಸಿದ್ದೊಂದು ನಾಟಕೀಯ ಕುಸಿತ. ಒಂದೇ ದಿನದಲ್ಲಿ 24 ವಿಕೆಟ್‌ಗಳ ಪತನ! 6 ವಿಕೆಟಿಗೆ 347 ರನ್‌ ಗಳಿಸಿದ್ದ ಭಾರತ ದ್ವಿತೀಯ ದಿನದಾಟ ಮುಂದುವರಿಸಿ 474ರ ತನಕ ಸಾಗಿತು. ಜವಾಬಿತ್ತ ಅಫ್ಘಾನಿಸ್ಥಾನ 109 ರನ್ನಿಗೆ ಆಲೌಟ್‌ ಆಯಿತು. ಫಾಲೋಆನ್‌ಗೆ ಸಿಲುಕಿದ ಬಳಿಕವೂ ಪ್ರವಾಸಿಗರ ಬ್ಯಾಟಿಂಗ್‌ ಕುಸಿತ ನಿಲ್ಲಲಿಲ್ಲ; 103 ರನ್ನಿಗೆ ದ್ವಿತೀಯ ಇನ್ನಿಂಗ್ಸ್‌ ಮುಗಿಯಿತು! ಇದರೊಂದಿಗೆ ಭಾರತ ತನ್ನ ಕ್ರಿಕೆಟ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಎರಡೇ ದಿನದಲ್ಲಿ ಟೆಸ್ಟ್‌ ಪಂದ್ಯವನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರವಾಯಿತು.

ಅಫ್ಘಾನಿಸ್ಥಾನ ಮೊದಲ ಇನ್ನಿಂಗ್ಸ್‌ನಲ್ಲಿ 27.5 ಓವರ್‌ ಎದುರಿಸಿದರೆ, ದ್ವಿತೀಯ ಸರದಿ ಯಲ್ಲಿ 38.4 ಓವರ್‌ಗಳನ್ನಷ್ಟೇ ನಿಭಾಯಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 24 ರನ್‌ ಮಾಡಿದ ಮೊಹಮ್ಮದ್‌ ನಬಿ, ದ್ವಿತೀಯ ಇನ್ನಿಂಗ್ಸ್‌ ನಲ್ಲಿ 36 ರನ್‌ ಮಾಡಿದ ಹಶ್ಮತುಲ್ಲ ಶಾಹಿದಿ ಅವರದೇ ಸರ್ವಾಧಿಕ ಗಳಿಕೆ. 

ಭಾರತದ ಮಿಂಚಿನ ದಾಳಿ
ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಅಮೋಘ ಸಾಧನೆಯೊಂದಿಗೆ ಗುರುತಿಸಿ ಕೊಂಡಿದ್ದ ಅಫ್ಘಾನಿಸ್ಥಾನ ಟೆಸ್ಟ್‌ನಲ್ಲಿ ಇಷ್ಟೊಂದು ಕಳಪೆ ಪ್ರದರ್ಶನ ನೀಡೀತೆಂಬ ನಿರೀಕ್ಷೆ ಇರಲಿಲ್ಲ. ಪ್ರವಾಸಿ ಪಡೆ ಭಾರತದ ಮಿಂಚಿನ ಬೌಲಿಂಗ್‌ ದಾಳಿಗೆ ಸಿಲುಕಿ ತತ್ತರಿಸಿತು; ನಿಂತು ಆಡುವುದನ್ನು ತಾನಿನ್ನೂ ಕಲಿತಿಲ್ಲ ಎಂಬುದನ್ನು ತೋರ್ಪಡಿಸಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿ‌ನ್‌ 4, ಜಡೇಜ ಮತ್ತು ಇಶಾಂತ್‌ ತಲಾ 2 ವಿಕೆಟ್‌ ಉರುಳಿಸಿದರು. ಎರಡನೇ ಸರದಿಯಲ್ಲಿ ಜಡೇಜ 4, ಉಮೇಶ್‌ ಯಾದವ್‌ 3, ಇಶಾಂತ್‌ 2 ವಿಕೆಟ್‌ ಹಾರಿಸಿದರು. ಮೊದಲ ದಿನದಾಟದಲ್ಲಿ ಲಂಚ್‌ ಒಳಗೆ ಶತಕ ಸಿಡಿಸಿದ ಶಿಖರ್‌ ಧವನ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ಭಾರತ-474 (ಧವನ್‌ 107, ವಿಜಯ್‌ 105, ಪಾಂಡ್ಯ 71, ರಾಹುಲ್‌ 54, ಅಹ್ಮದ್‌ಜಾಯ್‌ 51ಕ್ಕೆ 3, ವಫಾದಾರ್‌ 100ಕ್ಕೆ 2, ರಶೀದ್‌ ಖಾನ್‌ 154ಕ್ಕೆ 2). ಅಫ್ಘಾನಿಸ್ಥಾನ-109 (ನಬಿ 24, ಮಜೀಬ್‌ 15, ಅಶ್ವಿ‌ನ್‌ 27ಕ್ಕೆ 4, ಜಡೇಜ 18ಕ್ಕೆ 2, ಇಶಾಂತ್‌ 28ಕ್ಕೆ 2) ಮತ್ತು 103 (ಶಾಹಿದಿ 36, ಸ್ತಾನಿಕ್‌ಜಾಯ್‌ 25, ಜಡೇಜ 17ಕ್ಕೆ 4, ಯಾದವ್‌ 26ಕ್ಕೆ 3, ಇಶಾಂತ್‌ 17ಕ್ಕೆ 2). 

ಪಂದ್ಯಶ್ರೇಷ್ಠ: ಶಿಖರ್‌ ಧವನ್‌

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.