ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದರೆ ಸಾಬೀತುಪಡಿಸಲಿ:ಸಚಿವ ರೇವಣ್ಣ
Team Udayavani, Jun 16, 2018, 6:00 AM IST
ಹಾಸನ: ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತಿತರ ವಿಷಯಗಳಲ್ಲಿ ತಾವು ಹಸ್ತಕ್ಷೇಪ ಮಾಡಿರುವುದನ್ನು ಸಾಬೀತುಪಡಿಸಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸವಾಲು ಹಾಕಿದರು. ವಿವಿಧ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದೇನೆಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಥವಾ ರಾಜ್ಯದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ತಮ್ಮನ್ನು ಕರೆಸಿ ಕೇಳಿದ್ದರೆ ತಾನೇ ಸ್ಪಷ್ಟನೆ ನೀಡುತ್ತಿದ್ದೆ ಎಂದು ಹೇಳಿದರು.
ವರ್ಗಾವಣೆ ಸಹಿತ ಇತರ ವಿಷಯಗಳ ಕುರಿತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಕೇಳಿದ್ದರೂ ಸ್ಪಷ್ಟೀಕರಿಸುತ್ತಿದ್ದೆ. ಈ ವಿಷಯವನ್ನು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸುವ ಅಗತ್ಯವೇ ಇರಲಿಲ್ಲ ಎಂದರು. ತನಗೂ ಸ್ವಾಭಿಮಾನವಿದೆ. ಉಹಾಪೋಹದ ಸುದ್ದಿ ಆಧರಿಸಿ ತಮ್ಮನ್ನು ಬ್ಲಾಕ್ವೆುಲ್ ಮಾಡುವ ತಂತ್ರಗಳಿಗೆ ತಾನು ಬಗ್ಗುವುದಿಲ್ಲ. ನಾನು ವಿಪಕ್ಷದಲ್ಲಿದ್ದು, ಕೆಲಸ ಮಾಡಿರುವವನು ಎಂದ ಅವರು, ತನ್ನ ವಿರುದ್ಧ ಅಪಪ್ರಚಾರ ಮಾಡುವವರು ಈ ಸಂಗತಿ ಅರ್ಥ ಮಾಡಿಕೊಳ್ಳಬೇಕು ಎಂದರು.
ಸಮ್ಮಿಶ್ರ ಸರಕಾರಕ್ಕೆ ಕೆಟ್ಟ ಹೆಸರು ತರಬೇಕು. ಆ ಮೂಲಕ ಅಭದ್ರಗೊಳಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ. ಇಂಥ ಪಿತೂರಿಗಳಿಗೆಲ್ಲ ಜಗ್ಗುವುದಿಲ್ಲ ಎಂದರು.
ರಸ್ತೆಗಳ ಹಾನಿ ಪರಿಶೀಲನೆಗೆ ರಾಜ್ಯಾದಂತ ಪ್ರವಾಸ
ಅತಿವೃಷ್ಟಿಯಿಂದ ರಸ್ತೆಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು, ರವಿವಾರ ಹುಬ್ಬಳ್ಳಿಗೆ ಭೇಟಿ ನೀಡಿ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಮಾಹಿತಿ ಪಡೆಯುವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಎಂಜಿನಿಯರು ಗಳಿಗೆ ಸೂಚನೆ ನೀಡಿದ್ದೇನೆ. ಶನಿವಾರದಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸುವೆ. ದಕ್ಷಿಣ ಕನ್ನಡ, ಉಡುಪಿ. ಉತ್ತರ ಕನ್ನಡ ಮತ್ತಿತರ ಜಿಲ್ಲೆಗಳಿಗೂ ಭೇಟಿ ನೀಡುವೆ. ಶಿರಾಡಿ ಮತ್ತು ಚಾರ್ಮಾಡಿ ರಸ್ತೆಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ