ವಿಎಚ್‌ಪಿ, ಬಜರಂಗ ದಳ ಉಗ್ರ ಸಂಘಟನೆ : ಅಮೆರಿಕದ CIAಯಿಂದ ವಿವಾದ


Team Udayavani, Jun 16, 2018, 2:47 AM IST

cia-600.jpg

ಹೊಸದಿಲ್ಲಿ: ಅಮೆರಿಕದ ಗುಪ್ತಚರ ಸಂಸ್ಥೆ (CIA) ವಿಶ್ವಹಿಂದೂ ಪರಿಷತ್‌ (VHP) ಹಾಗೂ ಬಜರಂಗ ದಳವನ್ನು ‘ಧಾರ್ಮಿಕ ಉಗ್ರ ಸಂಘಟನೆ’ಗಳು ಎಂದು  ಹೆಸರಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಅಮೆರಿಕ ಗುಪ್ತಚರ ಇಲಾಖೆ (CIA) ವಾರ್ಷಿಕವಾಗಿ ಬಿಡುಗಡೆ ಮಾಡುವ ‘ವರ್ಲ್ಡ್ ಫ್ಯಾಕ್ಟ್ ಬುಕ್‌’ನಲ್ಲಿ ಈ ಅಂಶ ಪ್ರಸ್ತಾಪಿಸಲಾಗಿದೆ.  ಈ ಎರಡೂ ಸಂಘಟನೆಗಳನ್ನು ‘ರಾಜಕೀಯವಾಗಿ ಒತ್ತಡ ಹೇರುವ’ ಸಂಘಟನೆಗಳೂ ಎಂದೂ ಪ್ರಸ್ತಾವಿಸಲಾಗಿದೆ. RSS, ಹುರ್ರಿಯತ್‌ ಕಾನ್ಫರೆನ್ಸ್‌, ಜಮೀಯತ್‌ ಉಲೇಮಾ-ಇ-ಹಿಂದ್‌ ಸೇರಿದಂತೆ ದೇಶದ ಹಲವು ಸಂಘಟನೆಗಳನ್ನು ಈ ಗುಂಪಿಗೆ ಸೇರಿಸಲಾಗಿದೆ. RSS ಅನ್ನು ರಾಷ್ಟ್ರೀಯವಾದಿ ಸಂಘಟನೆ, ಹುರ್ರಿಯತ್‌ ಕಾನ್ಫರೆನ್ಸ್‌ಗೆ ಪ್ರತ್ಯೇಕತಾವಾದಿ ಸಂಘಟನೆ, ಜಮೀಯತ್‌ ಉಲೇಮಾವನ್ನು ಧಾರ್ಮಿಕ ಸಂಘಟನೆ ಎಂದು ವರ್ಗೀಕರಿಸಲಾಗಿದೆ.

ಕ್ಷಮೆ ಕೇಳಿ- VHP: ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ VHP, ‘ಈ ಕೂಡಲೇ CIA ಭಾರತೀಯರ ಕ್ಷಮೆ ಕೇಳಬೇಕು. ಇಲ್ಲವಾದರೆ, ಜಾಗತಿಕ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದೆ.

ಟ್ವಿಟರ್‌ ನಲ್ಲಿ ಆಕ್ರೋಶ: CIA ಕ್ರಮದ ಬಗ್ಗೆ ಟ್ವಿಟರ್‌ ನಲ್ಲಿ ಟೀಕಾ ಪ್ರಹಾರ ನಡೆಸಲಾಗಿದೆ. ಜಾಗೃತಿ ಶುಕ್ಲಾ ಎಂಬುವರು, ‘VHP, ಬಜರಂಗದಳಗಳು ಯಾಕೆ ಭಯೋತ್ಪಾದಕ ಸಂಘಟನೆಗಳೆನಿಸಿಕೊಂಡವು? ಮೋದಿ ಸರ್ಕಾರದ ಮೇಲೆ ಒತ್ತಡ ಹೇರಲಿಕ್ಕೋ?’ ಎಂದು ಪ್ರಶ್ನಿಸಿದ್ದಾರೆ. ಹಲವಾರು ಮಂದಿ ತಮ್ಮದೇ ಆದ ರೀತಿಯಲ್ಲಿ ಅಮೆರಿಕವನ್ನು ಟೀಕಿಸಿದ್ದಾರೆ.

ಏನಿದು ಫ್ಯಾಕ್ಟ್ ಬುಕ್‌?  
ಅಮೆರಿಕದ ಗುಪ್ತಚರ ಇಲಾಖೆ ತಾನು ಕ್ರೋಡೀಕರಿಸಿದ ಅನೇಕ ಗುಪ್ತ ಮಾಹಿತಿಗಳ ಸಂಗ್ರಹಗಳನ್ನು ‘ವರ್ಲ್ಡ್ ಫ್ಯಾಕ್ಟ್ ಬುಕ್‌’ ಎಂಬ ಹೆಸರಿನಲ್ಲಿ ವಾರ್ಷಿಕವಾಗಿ ಪ್ರಕಟಿಸುತ್ತದೆ. ಇದರಲ್ಲಿ ಜಗತ್ತಿನ 267 ದೇಶಗಳ ಬಗ್ಗೆ ಮಾಹಿತಿ ಇರುತ್ತದೆ. ಈ ಪುಸ್ತಕ ಸಾರ್ವಜನಿಕರ ಬಳಕೆಗಾಗಿ ಅಲ್ಲದೆ, ಅಮೆರಿಕದ ಸಂಸದರ ಅವಗಾಹನೆಗಾಗಿ ಮಾತ್ರವೇ ಮುದ್ರಿಸಲಾಗುತ್ತದೆ. ವಿವಿಧ ತನಿಖಾ ಸಂಸ್ಥೆಗಳು ಹೆಚ್ಚುವರಿ ಮಾಹಿತಿಗಾಗಿ ಈ ಪುಸ್ತಕವನ್ನು ಬಳಸಿಕೊಳ್ಳುತ್ತವೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.