ಮನೆ ಛಾವಣಿ ಕುಸಿತ: ಮಹಿಳೆ – ಮಗು ಅಪಾಯದಿಂದ ಪಾರು


Team Udayavani, Jun 17, 2018, 6:00 AM IST

q-18.jpg

ಮಂಗಳೂರು: ನಗರದ ಬೋಳಾರದಲ್ಲಿ ಶನಿವಾರ ಮಧ್ಯಾಹ್ನ ಹಳೆಯ ಮನೆಯೊಂದರ ಛಾವಣಿ ಕುಸಿದು ಬಿದ್ದ ಘಟನೆ ಸಂಭವಿಸಿದ್ದು, ಮಹಿಳೆ ಮತ್ತು ಮಗು ಅಪಾಯದಿಂದ ಪಾರಾಗಿದ್ದಾರೆ. 

ಬೋಳಾರದ ನಾಗಪ್ಪ ಕಂಪೌಂಡ್‌ನ‌ ಬಟ್ರಿ ಗಾರ್ಡನ್‌ನಲ್ಲಿರುವ ಈ ಹಂಚಿನ ಮನೆ ಮಣ್ಣಿನ ಗೋಡೆಯಿಂದ ನಿರ್ಮಾಣಗೊಂಡಿದ್ದು, ಸುಮಾರು ನೂರು ವರ್ಷಗಳಷ್ಟು ಹಳೆಯ ಕಟ್ಟಡ ಎನ್ನಲಾಗಿದೆ. ಇದರಲ್ಲಿ ಕಳೆದ 78 ವರ್ಷಗಳಿಂದ ನಾರಾಯಣ ಶೆಟ್ಟಿ, ಪ್ರಮೀಳಾ ಮತ್ತು ಹರೀಶ್‌ ಎಂಬ 3 ಕುಟುಂಬಗಳು ಬಾಡಿಗೆಗೆ ವಾಸವಾಗಿದ್ದವು.  ದೇವಕಿ ಎಂಬವರು ಈ ಮನೆಯ ಮಾಲಕರು ಎಂಬುದಾಗಿ ಬಾಡಿಗೆ ಮನೆಯಲ್ಲಿದ್ದವರು ಪಾಲಿಕೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

ಮನೆಯ ಛಾವಣಿ ಸಂಪೂರ್ಣವಾಗಿ ಕುಸಿದ ಕಾರಣ ಇದರಲ್ಲಿ ವಾಸಿಸುತ್ತಿದ್ದ ಮೂರೂ ಕುಟುಂಬಗಳು ಬೇರೆಡೆಗೆ ಸ್ಥಳಾಂತರಗೊಂಡಿವೆ. ಮನೆಯ ಕಟ್ಟಡ ಹಾಗೂ ಛಾವಣಿ ಶಿಥಿಲಗೊಂಡಿದ್ದು, ಶನಿವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಛಾವಣಿಯ ಒಂದು ಭಾಗದಲ್ಲಿ ಮರದ ರೀಪು ಮುರಿದು ಹಂಚುಗಳು ಕೆಳಗೆ ಬಿದ್ದವು. ಈ ಸಂದರ್ಭದಲ್ಲಿ ನಾರಾಯಣ ಶೆಟ್ಟಿ ಅವರ ಪತ್ನಿ ಮತ್ತು ಮಗು ಚಾವಡಿಯಲ್ಲಿ ಊಟ ಮಾಡುತ್ತಿದ್ದು, ಶಬ್ದ ಕೇಳಿ ಓಡಿ ಹೊರಗೆ ಬಂದಿದ್ದರು. ಹಾಗಾಗಿ ಅಪಾಯದಿಂದ ಪಾರಾದರು. ಎರಡು ಮನೆಗಳ ಭಾಗದಲ್ಲಿರುವ ಛಾವಣಿ ಸಂಪೂರ್ಣ ಉರುಳಿದೆ. 

ಘಟನೆಯ ಸುದ್ದಿ ತಿಳಿದು ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಮೇಯರ್‌ ಭಾಸ್ಕರ್‌ ಕೆ., ಕಾರ್ಪೊರೇಟರ್‌ ಕವಿತಾ ವಾಸು, ಪಾಲಿಕೆ ಕಮಿಷನರ್‌ ಮೊಹಮದ್‌ ನಝೀರ್‌, ಪಾಂಡೇಶ್ವರ ಪೊಲೀಸರು ಹಾಗೂ ಇತರರು ಸ್ಥಳಕ್ಕೆ ಭೇಟಿ ನೀಡಿದರು. 

ಸಂಜೆ ವೇಳೆಗೆ ಮತ್ತೆ ಮೇಯರ್‌, ಕಮಿಷನರ್‌, ಶಾಸಕ ವೇದವ್ಯಾಸ ಕಾಮತ್‌, ಕಾರ್ಪೊರೇಟರ್‌, ತಹಸೀಲ್ದಾರ್‌, ಪಾಲಿಕೆಯ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಈ ಮನೆಯಲ್ಲಿದ್ದ 3 ಕುಟುಂಬಗಳಿಗೆ ವಾಸ್ತವ್ಯಕ್ಕೆ ಪರ್ಯಾಯ ವ್ಯವಸ್ಥೆಗೆ ನೆರವಾದರು. 

ಮೂರೂ ಕುಟುಂಬಗಳಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ತಲಾ 1 ಲಕ್ಷ ರೂ. ಪರಿಹಾರಕ್ಕೆ ವ್ಯವಸ್ಥೆ ಮಾಡುವುದಾಗಿ ಮೇಯರ್‌ ಭಾಸ್ಕರ್‌ ಕೆ. ಅವರು ಭರವಸೆ ನೀಡಿದರು. ಕುಟುಂಬಗಳ ಪೈಕಿ ಒಬ್ಬರು ತಾತ್ಕಾಲಿಕವಾಗಿ ಸಂಬಂಧಿಕರ ಮನೆಗೆ ತೆರಳಿದ್ದು, ಉಳಿದ  ಕುಟುಂಬಗಳವರು ಬೇರೆ ಕಡೆ ಬಾಡಿಗೆ ಮನೆಗೆ ತೆರಳಿದ್ದಾರೆ. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.