ಸೀಟು ಹಂಚಿಕೆ ವಿಳಂಬ: 180 ಮಕ್ಕಳು ಆರ್‌ಟಿಇ ವಂಚಿತ!


Team Udayavani, Jun 17, 2018, 6:00 AM IST

q-24.jpg

ಮಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಕನಸು ಕಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಅದೆಷ್ಟೋ ಪೋಷಕರಿಗೆ ಈ ಬಾರಿಯೂ ನಿರಾಶೆಯಾಗಿದೆ. ಶಿಕ್ಷಣ ಇಲಾಖೆಯ ಸೀಟು ಹಂಚಿಕೆ ವಿಳಂಬ ನೀತಿಯಿಂದಾಗಿ ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸಿದ ಬಳಿಕ ಆರ್‌ಟಿಇ ಸೀಟುಗಳು ಘೋಷಣೆಯಾಗುತ್ತಿವೆ!

ಇಂಥ ನಿರ್ಲಕ್ಷ್ಯದಿಂದಾಗಿ ಜಿಲ್ಲೆಯಲ್ಲಿ ಈಗಾಗಲೇ 180 ಅರ್ಹ ವಿದ್ಯಾರ್ಥಿಗಳು ಆರ್‌ಟಿಇ ವ್ಯವಸ್ಥೆಯಡಿ ಉನ್ನತ ಗುಣ ಮಟ್ಟದ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಅವಕಾಶದಿಂದ ವಂಚಿತರಾಗಿ ದ್ದಾರೆ. ಜಿಲ್ಲೆಯಲ್ಲಿ 2ನೇ ಹಂತದ ಸೀಟು ಹಂಚಿಕೆ ಬಳಿಕ 180 ಮಂದಿ ವಿದ್ಯಾರ್ಥಿ ಗಳು ಆರ್‌ಟಿಇನಡಿ ಅವಕಾಶವಿದ್ದರೂ ದಾಖಲಾತಿಯನ್ನೇ ಮಾಡಿಕೊಂಡಿಲ್ಲ.

ಇದಕ್ಕೆ ಮುಖ್ಯ ಕಾರಣ ಸರಕಾರ ಹಂತ ಹಂತವಾಗಿ ಸೀಟು ಹಂಚಿಕೆ ಮಾಡುತ್ತಿರುವುದು. ಆರ್‌ಟಿಇ ಸೀಟಿಗೆ ಕಾದು ಕುಳಿತರೆ ಸಿಗುತ್ತದೆ ಎಂಬ ಖಾತರಿ ಇಲ್ಲ; ಅದು ಘೋಷಣೆಯಾಗುವ ಹೊತ್ತಿಗೆ ಇತರ ಶಾಲೆಗಳ ಪ್ರವೇಶಾತಿ ಮುಗಿದಿರುತ್ತದೆ. ಹೀಗಾಗಿ ಅದೂ ಇಲ್ಲ, ಇದೂ ಇಲ್ಲ ಎಂಬಂತಾಗುವ ಸಾಧ್ಯತೆ ಇರುವುದರಿಂದ ಹೆತ್ತವರು ಅನ್ಯ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುತ್ತಿದ್ದಾರೆ. ಹಾಗಿದ್ದರೂ ಆರ್‌ಟಿಇ ಸೀಟು ಲಭಿಸಿದಾಗ ಶಾಲೆಯನ್ನು ಬದಲಾಯಿಸಿಕೊಳ್ಳಬಹುದು. ಆದರೆ ಹಿಂದೆ ದಾಖಲು ಮಾಡಿದ ಶಾಲೆಯಲ್ಲಿ ಭರಿಸಿದ ಶುಲ್ಕ ಮರುಪಾವತಿ ಆಗುತ್ತ ದೆಯೇ ಎಂಬುದು ಪೋಷಕರ ಪ್ರಶ್ನೆ. ಒಟ್ಟು 1,424 ದಾಖಲಾತಿ

2018-19ನೇ ಸಾಲಿನಲ್ಲಿ ದ.ಕ. ಜಿಲ್ಲೆಗೆ ಒಟ್ಟು 2,727 ಸೀಟುಗಳು ಮಂಜೂರಾಗಿವೆ. ಈ ಪೈಕಿ ಇದುವರೆಗೆ ಮೊದಲ ಹಂತದಲ್ಲಿ 1,491 ಹಾಗೂ 2ನೇ ಹಂತದಲ್ಲಿ 113 ಸೀಟುಗಳು ಮಂಜೂರಾಗಿವೆ. ಆದರೆ ಒಟ್ಟು ದಾಖಲಾಗಿರುವುದು 1,424 ಮಕ್ಕಳು ಮಾತ್ರ. ಮೊದಲ ಹಂತದಲ್ಲಿ 1,345 ಸೀಟು ಮತ್ತು 2ನೇ ಹಂತದಲ್ಲಿ 79 ಸೀಟು ದಾಖಲಾಗಿವೆ. ಅಂದರೆ 180 ಮಂದಿ ಆರ್‌ಟಿಇ ಸೀಟು ಲಭಿಸಿಯೂ ಬಳಸಿಕೊಂಡಿಲ್ಲ. ಸರಕಾರವು 3ನೇ ಹಂತದ ಸೀಟು ಹಂಚಿಕೆ ಪ್ರಕ್ರಿಯೆಯನ್ನೂ ಮುಗಿಸಿದ್ದು, ಜೂ. 8 ವಿದ್ಯಾರ್ಥಿಗಳ ದಾಖಲಾ ತಿಗೆ ಕೊನೆಯ ದಿನಾಂಕವಾಗಿತ್ತು. ಆದರೆ ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. 

6.66 ಕೋ.ರೂ. ಅನುದಾನ 
2012ರಲ್ಲಿ ಆರ್‌ಟಿಇ ಸೀಟು ಹಂಚಿಕೆ ಆರಂಭಗೊಂಡ ಬಳಿಕ ಈ ತನಕ ಒಟ್ಟು 8,493 ವಿದ್ಯಾರ್ಥಿಗಳು ಇದರಡಿ ಖಾಸಗಿ ಶಾಲೆಗಳಿಗೆ ದಾಖಲುಗೊಂಡಿದ್ದಾರೆ. ಇದಕ್ಕಾಗಿ ಒಟ್ಟು 6,66,84,669 ರೂ. ಅನುದಾನ ಬಿಡುಗಡೆಗೊಂಡಿದ್ದು, ಈ ಹಣ ಆಯಾಶಾಲೆಗಳ ಖಾತೆಗಳಿಗೆ ಜಮೆಯಾಗುತ್ತದೆ. ಈ ಶೈಕ್ಷಣಿಕ ವರ್ಷದಿಂದ ಅನು ದಾನಿತ ಶಾಲೆಗಳಿಗೂ ಆರ್‌ಟಿಇನಡಿ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ 196 ಖಾಸಗಿ ಶಾಲೆಗಳ ಜತೆಗೆ 88 ಅನುದಾನಿತ ಶಾಲೆಗಳು ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅರ್ಹತೆ ಪಡೆದಿವೆ.

ಇಲಾಖೆ ಏನೂ ಮಾಡುವಂತಿಲ್ಲ
ಈಗಾಗಲೇ 3ನೇ ಹಂತದ ಸೀಟು ಹಂಚಿಕೆ ನಡೆದಿದ್ದು, ದಾಖಲಾತಿ ನಡೆಯುತ್ತಿದೆ. ವಿದ್ಯಾರ್ಥಿಗಳನ್ನು ಬೇರೆಡೆ ದಾಖಲಿಸಿದ್ದರೂ ಆರ್‌ಟಿಇ ಸೀಟು ಲಭಿಸಿದಾಗ ಬದಲಾಯಿಸಿಕೊಳ್ಳಬಹುದಾಗಿದೆ. ಆದರೆ ಶುಲ್ಕ ಮರುಪಾವತಿಯ ಕುರಿತು ಅವರು ಶಾಲೆಯ ಆಡಳಿತ ಮಂಡಳಿಯ ಜತೆಯೇ ಮಾತನಾಡಬೇಕಾಗುತ್ತದೆ; ಇಲಾಖೆ ಏನೂ ಮಾಡುವಂತಿಲ್ಲ.
ವೈ. ಶಿವರಾಮಯ್ಯ ಡಿಡಿಪಿಐ, ದ.ಕ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.