ಅನಗತ್ಯ ನೇಮಕ ಖಂಡಿಸಿ ಅಹೋರಾತ್ರಿ ಧರಣಿ


Team Udayavani, Jun 17, 2018, 11:26 AM IST

anagatya.jpg

ಬೆಂಗಳೂರು: ಒಕ್ಕಲಿಗರ ಸಂಘದ ಆಡಳಿತ ಮಂಡಳಿಯು ಅನಗತ್ಯವಾಗಿ ಸಿಬ್ಬಂದಿ ನೇಮಕ ಮಾಡಿಕೊಂಡಿದೆ ಎಂದು ಆರೋಪಿಸಿ ಒಕ್ಕಲಿಗರ ಸಂಘದ ಅಧೀನದಲ್ಲಿರುವ ಸಂಸ್ಥೆಗಳ ನೌಕರರ ಸಂಘ ಕಿಮ್ಸ್‌ ಆವರಣದಲ್ಲಿ ಆರಂಭಿಸಿರುವ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದು, ಶನಿವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಅಗತ್ಯವಿಲ್ಲದಿದ್ದರೂ ಸುಮಾರು 670 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಮೂಲಕ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸಂಘವು ಕಳೆದ ಮಂಗಳವಾರದಿಂದ ಧರಣಿ ಆರಂಭಿಸಿತ್ತು. ಇದಕ್ಕೆ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಶನಿವಾರ ಕಿಮ್ಸ್‌ ಹಾಗೂ ದಂತ ವೈದ್ಯ ಆಸ್ಪತ್ರೆಯ ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿದ್ದರು. ಇದರ ನಡುವೆಯೂ ನೇಮಕ ಮುಂದುವರಿದಿರುವ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದು, ಹೋರಾಟ ಗಂಭೀರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

ಒಕ್ಕಲಿಗರ ಸಂಘದಡಿ ಕಿಮ್ಸ್‌ ಆಸ್ಪತ್ರೆ, ಕೆಂಗಲ್‌ ಹನುಮಂತಯ್ಯ ಆಸ್ಪತ್ರೆ, ವೈದ್ಯಕೀಯ ಕಾಲೇಜು, ದಂತ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು, ಪ್ರಾಥಮಿಕ ಶಾಲೆ ಸೇರಿದಂತೆ ಒಟ್ಟು 18 ಸಂಸ್ಥೆಗಳಿವೆ. ಈ ಸಂಸ್ಥೆಗಳಲ್ಲಿ 2,500 ಕಾಯಂ ನೌಕರ, ಸಿಬ್ಬಂದಿಯಿದ್ದು, ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಯಾಗದೆ 23, 24ನೇ ತಾರೀಖೀನಂದು ವೇತನ ನೀಡಲಾಗುತ್ತಿದೆ. ವಾರ್ಷಿಕ ವೇತನ ಕೂಡ ಹೆಚ್ಚಳ ಮಾಡುತ್ತಿಲ್ಲ. ಹಾಗಿದ್ದರೂ ಅನಗತ್ಯವಾಗಿ ಸಿಬ್ಬಂದಿ ನೇಮಕಕ್ಕೆ ಮುಂದಾಗಿರುವುದು ಖಂಡನೀಯ ಎಂದು ರಾಜ್ಯ ಒಕ್ಕಲಿಗರ ಸಂಘದ ನೌಕರರ ಸಂಘದ ಅಧ್ಯಕ್ಷ ಡಾ.ವಿನೋದ್‌ ಕುಮಾರ್‌ ತಿಳಿಸಿದರು.

ನಾಲ್ಕು ತಿಂಗಳಿನಿಂದೀಚೆಗೆ ಸಹಾಯಕರು, ಕಂಪ್ಯೂಟರ್‌ ಆಪರೇಟರ್‌ಗಳು ಸೇರಿದಂತೆ ನಾನಾ ಹುದ್ದೆಗಳಿಗೆ 670ಕ್ಕೂ ಹೆಚ್ಚು ಸಿಬ್ಬಂದಿ ನೇಮಕ ನಡೆದಿದೆ. ವಾಸ್ತವಿಕವಾಗಿ ಸುಮಾರು 200 ಹುದ್ದೆಗಳಷ್ಟೇ ಅಗತ್ಯವಿದ್ದು, ಹೆಚ್ಚುವರಿ ನೇಮಕ ನಡೆದಿದೆ. ಒಂದೊಂದು ಹುದ್ದೆ ಭರ್ತಿಗೂ ಐದರಿಂದ ಎಂಟು ಲಕ್ಷ ರೂ. ಹಣ ಸಂಗ್ರಹಿಸಲಾಗಿದೆ ಎಂಬ ಮಾತು ಕೇಳಿಬಂದಿದೆ. ವಿಭಾಗವಾರು ಅಗತ್ಯ ಸಿಬ್ಬಂದಿ ವಿವರ ಪಡೆಯದೆ, ಆಯ್ಕೆ ಸಮಿತಿಯನ್ನೂ ರಚಿಸದೆ, ಮಾನದಂಡ, ಅರ್ಹತೆಯನ್ನೂ ನಿಗದಿಪಡಿಸದೆ ಹಣ ಪಡೆದು ಬೇಕಾದವರನ್ನು ನೇಮಕ ಮಾಡಲಾಗುತ್ತಿದೆ ಎಂದು ಹೇಳಿದರು.

ಅನಗತ್ಯವಾಗಿ ನೇಮಕ ಮಾಡಿಕೊಂಡವರನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ ಜೂ.12ರಿಂದ ಧರಣಿ ಆರಂಭಿಸಲಾಯಿತು. ಸ್ಪಂದನೆ ಸಿಗದ ಕಾರಣ ಶನಿವಾರದಿಂದ ಒಪಿಡಿ ಸೇವೆ ಸ್ಥಗಿತಗೊಳಿಸಲಾಗಿತ್ತು. ಹಾಗಿದ್ದರೂ ನೇಮಕ ಪ್ರಕ್ರಿಯೆ ನಡೆಯುತ್ತಲೇ ಇದ್ದು, ಹೊಸ ಆದೇಶಗಳನ್ನು ನೀಡುತ್ತಲೇ ಇದ್ದಾರೆ. ಹಾಗಾಗಿ ಶನಿವಾರದಿಂದ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ. ನೇಮಕ ರದ್ದುಪಡಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಒಪಿಡಿ ಸೇವೆಯಲ್ಲಿ ವ್ಯತ್ಯಯವಿಲ್ಲ: ವೈದ್ಯರು, ನೌಕರರ ಧರಣಿಯಿಂದ ರೋಗಿಗಳಿಗೆ ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಶನಿವಾರ ಸರ್ಕಾರಿ ರಜೆಯಿದ್ದ ಕಾರಣ ರೋಗಿಗಳ ಸಂಖ್ಯೆಯೂ ಕಡಿಮೆಯಿತ್ತು. ಹೊರ ರೋಗಿ ವಿಭಾಗದಲ್ಲಿ ಕಿರಿಯ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ತುರ್ತು ಪ್ರಕರಣಗಳಲ್ಲಿ ಪ್ರತಿಭಟನಾನಿರತ ವೈದ್ಯರೇ ಚಿಕಿತ್ಸೆ ನೀಡಿದ್ದಾರೆ. ಒಳ ರೋಗಿ ವಿಭಾಗದಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಕಿಮ್ಸ್‌ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಧುಶಂಕರ್‌ ತಿಳಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.