180 ಶಾಲೆಗಳಲ್ಲಿ 524 ಶಿಕ್ಷಕರ ಕೊರತೆ


Team Udayavani, Jun 18, 2018, 2:37 PM IST

ballery-1.jpg

ಸಿರುಗುಪ್ಪ: ತಾಲೂಕಿನ ಹಲವು ಶಾಲೆಗಳಲ್ಲಿ ಮಕ್ಕಳಿಗನುಗುಣವಾಗಿ ಶಿಕ್ಷಕರು ಇಲ್ಲದೆ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳದಿರುವುದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಯಾವೊಬ್ಬ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮಧ್ಯಾಹ್ನದ ಬಿಸಿಯೂಟ, ಕ್ಷೀರ, ಶೂ, ಸಾಕ್ಸ್‌, ಉಚಿತ ಸಮವಸ್ತ್ರ, ಸೈಕಲ್‌ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿಯೇ ಸಾವಿರಾರು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಮುಖಮಾಡುವಂತಾಗಿದೆ.

ಆದರೆ, ಶಿಕ್ಷಕರ ಕೊರತೆ ಮಾತ್ರ ಹಾಗೆ ಇದೆ. ತಾಲೂಕಿನಲ್ಲಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 180 ಶಾಲೆಗಳಿವೆ. ಪ್ರತಿ ಶಾಲೆಯಲ್ಲೂ ಕನಿಷ್ಠ 100 ರಿಂದ ಗರಿಷ್ಠ 400ರಷ್ಟು ವಿದ್ಯಾರ್ಥಿಗಳಿದ್ದಾರೆ. 180 ಶಾಲೆಗಳ ವಿದ್ಯಾರ್ಥಿಗಳಿಗೆ ಒಟ್ಟು 980 ಶಿಕ್ಷಕರು ಬೇಕು. ಈ ತಾಲೂಕಿನಲ್ಲಿ ಕೇವಲ498 ಶಿಕ್ಷಕರು ಮಾತ್ರ ಕಾರ್ಯ  ನಿರ್ವಹಿಸುತ್ತಿದ್ದು, 524 ಶಿಕ್ಷಕರ ಅಗತ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಇಬ್ಬರು ಶಿಕ್ಷಕರು ನಿರ್ವಹಿಸಬೇಕಾದ ಕೆಲಸವನ್ನು ಒಬ್ಬ ಶಿಕ್ಷಕನೇ ಮಾಡುವಂತಾಗಿದೆ.

ರಾಂಪುರ, ಕೆ.ಸೂಗೂರು, ಬಾಗೇವಾಡಿ ಕ್ಯಾಂಪ್‌, ಹಿರೇಹಾಳು, ತೆಕ್ಕಲಕೋಟೆಯ ಸಿಂಧೋಳು ಕಾಲೋನಿ, ಕಿ.ಪ್ರಾ.ಶಾಲೆ ಹೆರಕಲ್ಲು ಗ್ರಾಮಗಳ ಶಾಲೆಗಳಲ್ಲಿ ಕಾಯಂ ಶಿಕ್ಷಕರಿಲ್ಲದೆ ಇತರೆ ಶಾಲೆಗಳಿಂದ ನಿಯೋಜನೆ ಮೇಲೆ ಶಿಕ್ಷಕರನ್ನು ಕಳುಹಿಸಲಾಗುತ್ತದೆ.

ಈ ಶಿಕ್ಷಕ ಶಾಲೆಗೆ ಬರದಿದ್ದರೆ ಶಾಲೆಗೆ ಬೀಗ, ಮಕ್ಕಳಿಗೆ ರಜೆ ಎನ್ನುವಂತ ಪರಿಸ್ಥಿತಿಯಿದೆ.  ತಾಲೂಕಿನ 21 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿ ಮಾರ್ಪಟ್ಟಿದ್ದು, ಈ ಶಾಲೆಗಳಲ್ಲಿನ  ವಿದ್ಯಾರ್ಥಿಗಳಿಗೆ ಪಾಠ ಪ್ರವಚನ, ಬಿಸಿಯೂಟ, ದಾಖಲಾತಿ, ವರ್ಗಾವಣೆ ಪ್ರಮಾಣ ಪತ್ರ ವಿತರಣೆ, ಮೇಲಾಧಿಕಾರಿಗಳ ಸಭೆ ಸಮಾರಂಭಗಳಿಗೆ ಇನ್ನು
ಅನೇಕ ಜವಾಬ್ದಾರಿಯ ಕೆಲಸಗಳನ್ನು ಇರುವ ಒಬ್ಬ ಶಿಕ್ಷಕರೇ ನಿರ್ವಹಿಸಬೇಕಿದೆ. ಇಲ್ಲಿನ ಶಿಕ್ಷಕರು ಕ್ಷೇತ್ರ
ಶಿಕ್ಷಣಾಧಿಕಾರಿಗಳ ಕಚೇರಿಗೆ ಬಂದರೆ ಶಾಲೆಯಲ್ಲಿನ ಕೆಲಸಗಳನ್ನು ಯಾರಿಗೆ ವಹಿಸಿರಬೇಕು ಎನ್ನುವುದು
ಅಲ್ಲಿನ ಶಿಕ್ಷಕರಿಗೆ ಯಕ್ಷಪ್ರಶ್ನೆಯಾಗಿದೆ. 

ಕೆಲ ಶಿಕ್ಷಕರು ತಮ್ಮ ಶಾಲೆಯಲ್ಲಿ ಈ ಹಿಂದೆ ಅತಿಥಿ ಶಿಕ್ಷಕರಾಗಿ ಕೆಲಸ ಮಾಡಿದ ಶಿಕ್ಷಕರನ್ನು ಅಥವಾ ಶಾಲೆಯ ಅಕ್ಕ ಪಕ್ಕದ ವಿದ್ಯಾವಂತರನ್ನೋ ಇಲ್ಲದೇ ಹೋದಲ್ಲಿ ಬಿಸಿಯೂಟದ ಅಡುಗೆ ತಯಾರಕರನ್ನು ವಿದ್ಯಾರ್ಥಿಗಳನ್ನು ಕಾಯುವ ಕೆಲಸಕ್ಕೆ ನೇಮಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಸರ್ಕಾರದ ಸುತ್ತೋಲೆಯೂ ಇಲ್ಲದೆ ಶಾಲೆಗೆ ರಜೆ ನೀಡಿ ಕಚೇರಿಗಳಿಗೆ ಹೋಗಬೇಕಾದ ಪರಿಸ್ಥಿತಿ ಏಕೋಪಾಧ್ಯಾಯ ಶಾಲೆಗಳ ಶಿಕ್ಷಕರಿಗೆ ಬಂದೊದಗಿದೆ.

ತಾಲೂಕಿನಲ್ಲಿರುವ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವಲ್ಲಿ ಅಲ್ಲಿನ ಶಿಕ್ಷಕರ ಅವಶ್ಯಕತೆಗೆ ಅನುಗುಣವಾಗಿ ಒಂದು ವಾರದಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುವುದು. ಈ ಮೂಲಕ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು.

 ಪಿ.ಡಿ. ಭಜಂತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಸಿರುಗಪ್ಪ

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.