ಮೇಯರ್‌ ವಿರುದ್ಧ ಸದಸ್ಯರ ಸಿಡಿಮಿಡಿ


Team Udayavani, Jun 19, 2018, 3:31 PM IST

vijayapura-1.jpg

ವಿಜಯಪುರ: ನಗರದ ಮಾಸ್ಟರ್‌ಪ್ಲಾನ್‌ ಅನುಷ್ಠಾನಕ್ಕೆ ಮಹಾನಗರ ಪಾಲಿಕೆ 14ನೇ ಹಣಕಾಸು ಯೋಜನೆ ಅನುದಾನ ಬಳಸಿಕೊಳ್ಳುವ ಚಿಂತನೆಗೆ ಮಹಾನಗರ ಪಾಲಿಕೆ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹೊರ ಹಾಕಿದ ಘಟನೆ ಜರುಗಿತು.

ಸೋಮವಾರ ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮೇಯರ್‌ ಸಂಗೀತಾ ಪೋಳ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಮೇಯರ್‌ ಅವರು ನಿಯಮಿತವಾಗಿ ಸಭೆ ಕರೆಯುವುದಿಲ್ಲ. ಈಗ ಕೇವಲ ಸಣ್ಣ ವಿಷಯಕ್ಕೆ ಸಭೆ ಕರೆದಿರುವ ನಡೆ ಎಷ್ಟು ಸರಿ, ಸಾಮಾನ್ಯ ಸಭೆಯಲ್ಲಿ ನಗರದ ಸಮಗ್ರ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ನೀಡಬೇಕಿತ್ತು ಎಂದು ಸದಸ್ಯ ಗೋಪಾಲ ಘಟಕಾಂಬಳೆ, ಸಜ್ಜಾದೇಪೀರಾ ಮುಶ್ರೀಫ್‌, ಪ್ರಕಾಶ ಮಿರ್ಜಿ ಸೇರಿದಂತೆ ಇತರರು ಆಕ್ಷೇಪಿಸಿದರು.

ಹೀಗಾಗಿ ಸಂಡೇ ಬಜಾರ್‌ ಗುತ್ತಿಗೆ ಮುಂದುವರಿಸುವ ವಿಷಯದ ಬದಲಾಗಿ ಮಾಸ್ಟರ್‌ಪ್ಲಾನ್‌ ಅನುಷ್ಠಾನವೇ
ಹೆಚ್ಚಿನ ಸಮಯ ನುಂಗಿ ಹಾಕಿತು. 14ನೇ ಹಣಕಾಸು ಯೋಜನೆಯ ಅನುದಾನ ಮಾಸ್ಟರ್‌ಪ್ಲಾನ್‌ ಯೋಜನೆಗೆ
ಬಳಕೆ ಮಾಡುವುದು ಸೂಕ್ತ. ಇದಲ್ಲದೇ 100 ಕೋಟಿ ರೂ. ಮಾಸ್ಟರ್‌ಪ್ಲಾನ್‌ಗಾಗಿಯೇ ವಿಶೇಷ ಅನುದಾನ
ತರುತ್ತೇವೆ, ಯಾರೂ ಚಿಂತೆ ಮಾಡಬೇಡಿ ಎಂದು ಉಪ ಮೇಯರ್‌ ರಾಜೇಶ ದೇವಗಿರಿ, ಪರಶುರಾಂ
ರಜಪೂತ, ರಾಹುಲ್‌ ಜಾಧವ, ಮೊದಲಾದವರು ಒಪ್ಪಿಗೆ ಸೂಚಿಸಿ ಸಮರ್ಥನೆ ಮಾಡಿಕೊಂಡರು.

ರಾಹುಲ್‌ ಜಾಧವ ಮಾತನಾಡಿ, ಮಾಸ್ಟರ್‌ಪ್ಲಾನ್‌ ಕಾಮಗಾರಿ ಮುಗಿಸಲು ತ್ವರಿ ಕ್ರಮ ಕೈಗೊಳ್ಳುವುದರಿಂದ
ನಗರ ನಾಗರಿಕರಿಗೆ ಅನುಕೂಲವಾಗಲಿದೆ. ನಗರದ ಅಭಿವೃದ್ಧಿಗೆ ಪಾಲಿಕೆ ಅನುದಾನ ಬಳಸಿದರೆ ತಪ್ಪೇನು
ಎಂದು ಸಮರ್ಥಿಸಿದರು. 

ಹಿರಿಯ ಸದಸ್ಯ ವಿಜಯಕುಮಾರ ಮಂಗಳವೇಡೆ ಮಾತನಾಡಿ, ಯಾವ ವಿಷಯಕ್ಕೇ ಆಗಲಿ ಸಭೆಯನ್ನಂತೂ ಕರೆದಿದ್ದೀರಿ. ಹೀಗಾಗಿ ನಗರದ ಸಮಗ್ರ ಸಮಸ್ಯೆ ಚರ್ಚೆಗೆ ಅವಕಾಶ ನೀಡಿ ಎಂದು ಆಗ್ರಹಿಸಿದರು. ಸಂಡೇ ಬಜಾರ್‌ ಟೆಂಡರ್‌ನ್ನು ಮೂರು ವರ್ಷಗಳ ಅವಧಿಗೆ ಮುಂದುವರಿಕೆ ನಿರ್ಧಾರಿದಂದ ಪಾಲಿಕೆಗೆ ನಷ್ಟವಾಗುತ್ತದೆ. ಇದೊಂದೆ ವಿಷಯದ ಚರ್ಚೆಗೆ ಸಭೆ ಕರೆಯಲಾಗಿದೆ.

ಮತ್ತೆ ಮೂರು ವರ್ಷಕ್ಕೆ ಟೆಂಡರ್‌ ಮುಂದುವರಿಸುವ ನಿರ್ಧಾರದ ಹಿಂದಿನ ಉದ್ದೇಶ, ಸಭೆಯಲ್ಲಿ ಇಂತ ನಿರ್ಣಯ ಕೈಗೊಡರೆ ಪಾಲಿಕೆಗೆ ಆರ್ಥಿಕ ನಷ್ಟ ಹಾಗೂ ಹಿನ್ನಡೆ ಆಗಲಿದೆ. ಭವಿಷ್ಯದಲ್ಲಿ ಕಿತ್ತುಹೋದ ಶೌಚಾಲಯದ ಚೇಂಬರ್‌
ಅಳವಡಿಕೆಗೂ ಹಣ ಇಲ್ಲದ ದುಸ್ಥಿತಿ ಬಂದೀತು ಎಂದು ಆಕ್ಷೇಪಿಸಿದ ರವೀಂದ್ರ ಲೋಣಿ, ಸಭೆ ಭಹಿಷ್ಕರಿಸಿ ಹೊರ
ನಡೆದರು.

ಸಂಡೇ ಬಜಾರ್‌ ಟೆಂಡರ್‌ ನೀಡುವ ಬದಲು ಪಾಲಿಕೆಯೇ ನೇರವಾಗಿ ವ್ಯಾಪಾರಿಗಳಿಂದ ಕಡಿಮೆ ಶುಲ್ಕ ಪಡೆಯಲು ಮುಂದಾಗಿ, ಅದಕ್ಕಾಗಿ ಓರ್ವ ಸಿಬ್ಬಂದಿಯನ್ನು ನೇಮಿಸಿಕೊಂಡರೆ ಪಾಲಿಕೆಗೆ ಆದಾಯವಾಗಲಿದೆ ಎಂದು ವಿಜಯಕುಮಾರ ಮಂಗಳವೇಡೆ ಸಲಹೆ ನೀಡಿದರು.

ಒಂದೇ ವಿಷಯಕ್ಕೆ ಸಭೆ ಕರೆದಿರುವ ಮೇಯರ್‌ ಅವರು ಎಂದಾದರೂ ತಮ್ಮ ವಾರ್ಡ್‌ಗೆ ಭೇಟಿ ನೀಡಿ
ಸಾರ್ವಜನಿಕರ ಸಮಸ್ಯೆ ಆಲಿಸಿದ್ದಾರೆಯೇ ಎಂದು ಪ್ರಶ್ನಿಸಿದ ಪ್ರಮಾನಂದ ಬಿರಾದಾರ, ನಮ್ಮ ಬಡಾವಣೆ ನಿವಾಸಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡಲು ಸಾಧ್ಯವಾಗುತ್ತಿಲ್ಲ. ನಮ್ಮ ವಾರ್ಡ್‌ಗೆ ಭೇಟಿ ನೀಡುವಂತೆ ಹತ್ತಾರು ಬಾರಿ ಮಾಡಿಕೊಂಡ ಮನವಿಗೆ ಮೇಯರ್‌ ಸ್ಪಂದಿಸಿಲ್ಲ ಎಂದು ಆಕ್ಷೇಪಿಸಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ವಾರ್ಡ್‌ಗಳ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಿಮ್ಮ ವಾರ್ಡ್‌ಗೆ ಸಾಕಷ್ಟು ಅನುದಾನ ನೀಡಿ, ಅಭಿವೃದ್ಧಿ ಮಾಡಲಾಗುತ್ತಿದೆ. ಸಾಯಿಬಾಬಾ ಗುಡಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದ್ದೇನೆ ಎಂದು ಮೇಯರ್‌ ಸಮಜಾಯಿಸಿ ನೀಡಿದಾಗ, ದೇವರ ದರ್ಶನಕ್ಕೆ ನನ್ನ ವಾರ್ಡ್‌ಗೆ ಬರದೆ ಸಮಸ್ಯೆ
ಪರಿಹಾರಕ್ಕೆ ನನ್ನ ವಾರ್ಡ್‌ಗೆ ಬನ್ನಿ ಎಂದು ಕುಟಿಕದರು.

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.