ಕಳಪೆ ಕಾಮಗಾರಿಗೆ ಬಿಲ್‌ಪಾವತಿ ಬೇಡ: ತಿಪ್ಪಾರೆಡ್ಡಿ


Team Udayavani, Jun 20, 2018, 11:55 AM IST

chitradurga-1.jpg

ಚಿತ್ರದುರ್ಗ: ನಗರದಲ್ಲಿ ನಡೆದಿರುವ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿ ಕಳಪೆಯಾಗಿದೆ. ಲೋಪದೋಷ ಸರಿಪಡಿಸುವವರೆಗೂ ಬಿಲ್‌ ಪಾವತಿ ಮಾಡಬಾರದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ನಗರಸಭೆ
ಪೌರಾಯುಕ್ತ ಚಂದ್ರಪ್ಪ ಅವರಿಗೆ ಸೂಚಿಸಿದರು.

ನಗರದ ಕೆಳಗೋಟೆಯ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ನಡೆಯುತ್ತಿರುವ ಉದ್ಯಾನವನ ಅಭಿವೃದ್ಧಿ ಪರಿಶೀಲಿಸಿದ ನಂತರ ಮಾತನಾಡಿದ ಶಾಸಕರು, ಚಿತ್ರದುರ್ಗ ನಗರಕ್ಕೆ ಅಮೃತ್‌ ನಗರ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ.

ಗುಣಮಟ್ಟದ ಕಾಮಗಾರಿಗೆ ಸೂಚಿಸಲಾಗಿದೆ. ಆದಾಗ್ಯೂ ಕಾಮಗಾರಿ ಕಳಪೆಯಾಗಿದೆ. ಇಲ್ಲಿನ ಉದ್ಯಾನವನದಲ್ಲಿ 50 ಲಕ್ಷ  ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ನಗರದ ಐಯುಡಿಪಿ ಲೇಔಟ್‌ನ ಎರಡನೇ ಕ್ರಾಸ್‌ನ
ಉದ್ಯಾನವನಕ್ಕೆ 50 ಲಕ್ಷ, 11ನೇ ಕ್ರಾಸ್‌ನ ಉದ್ಯಾನವನಕ್ಕೆ 70 ಲಕ್ಷ, ರಾಜೇಂದ್ರ ನಗರದಲ್ಲಿನ ಪಾರ್ಕ್‌ಗೆ 50 ಲಕ್ಷ ಹಾಗೂ ಯೂನಿಯನ್‌ ಪಾರ್ಕ್‌ಗೆ 70 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಚಿತ್ರದುರ್ಗ ನಗರಕ್ಕೆ ದಿನದ 24 ಗಂಟೆ ಕುಡಿಯುವ ನೀರು ಸರಬರಾಜಿಗೆ 112 ಕೋಟಿ ರೂ. ಬಿಡುಗಡೆಯಾಗಿದೆ.
ಈ ಅನುದಾನದಲ್ಲಿ ವಾಣಿವಿಲಾಸ ಸಾಗರ,  ತಿಸಾಗರದಿಂದ ನೀರು ಪೂರೈಕೆ ಪೈಪ್‌ಲೈನ್‌ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ತಿಳಿಸಿದರು.

ಯೂನಿಯನ್‌ ಪಾರ್ಕ್‌ನಲ್ಲಿ ಎಂಬತ್ತರ ದಶಕದಲ್ಲಿ ಸಂಜೆ ಸಮಯದಲ್ಲಿ ಸಾವಿರಾರು ಜನರು ವಾಯುವಿಹಾರಕ್ಕೆ ಬರುತ್ತಿದ್ದರು. ಅಲ್ಲಿ ಉತ್ತಮ ಹುಲ್ಲು ಹಾಸು, ಕಲರ್‌ ಫೌಂಟೈನ್‌ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಸಂಜೆ 5ರಿಂದ ರಾತ್ರಿ 9 ಗಂಟೆವರೆಗೆ ರೇಡಿಯೋ ಕಾರ್ಯಕ್ರಮಗಳು ಬಿತ್ತರವಾಗುತ್ತಿದ್ದವು. ಇದನ್ನು ಕೇಳಿಕೊಂಡು ಜನರು
ಸಂಭ್ರಮಿಸುತ್ತಿದ್ದರು ಎಂದು ನೆನಪಿಸಿಕೊಂಡರು.

ಯೂನಿಯನ್‌ ಪಾರ್ಕಿನಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸಲಾಗಿದೆ. ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪಾರ್ಕ್‌ನ ವಾತಾವರಣವೇ ಹಾಳಾಗಿದೆ. ಹಾಗಾಗಿ ಈಗ ಅಮೃತ್‌ ಸಿಟಿ ಯೋಜನೆಯಡಿ
ಬಿಡುಗಡೆಯಾಗಿರುವ ಅನುದಾನದಲ್ಲಿ ಸಮಗ್ರ ಅಭಿವೃದ್ಧಿ ಮಾಡಬೇಕು ಎಂದರು.

ನಗರದ ನಿವಾಸಿಗಳಿಗೆ ನಿವೇಶನಗಳ ಹಕ್ಕುಪತ್ರ ನೀಡಿದ್ದರೂ ನಿವೇಶನಗಳು ದೊರೆತಿಲ್ಲ ಎಂಬ ಆರೋಪ ಕೇಳಿಬಂದಿದೆ. ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ಯಾರಿಗೂ ನಿವೇಶನ ಅಥವಾ ಮನೆಗಳನ್ನು ನೀಡಿಲ್ಲ.  ಮುಂದಿನ ದಿನಗಳಲ್ಲಿ ಈ ಕುರಿತು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಭರವಸೆ ನೀಡಿದರು.

ಇಂಜಿನಿಯರ್‌ಗಳಾದ ವಿಶ್ವನಾಥ್‌, ಕೃಷ್ಣಮೂರ್ತಿ, ರೇವಣಸಿದ್ದಪ್ಪ, ಗುತ್ತಿಗೆದಾರ ಜಯಣ್ಣ ಮತ್ತಿತರರು ಇದ್ದರು

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.