ಕಾಮಗಾರಿ ಆರಂಭಕ್ಕೆ ಮುನ್ನ ಸ್ಥಳ ಪರಿಶೀಲಿಸಿ: ಕುಮಾರ್
Team Udayavani, Jun 20, 2018, 1:15 PM IST
ಸೊರಬ: ಯಾವುದೇ ಇಲಾಖೆಯ ಮುಖ್ಯಸ್ಥರು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ ನಂತರವೇ ಕಾಮಗಾರಿ ಪ್ರಾರಂಭಿಸುವಂತೆ ಶಾಸಕ ಕುಮಾರ್ ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಪಂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನಸ್ಸಿಗೆ ಬಂದಂತೆ ಯೋಜನೆ ರೂಪಿಸಿ ಗುತ್ತಿಗೆದಾರರಿಗೆ ಕಾಮಗಾರಿ ಪ್ರಾರಂಭಿಸಲು ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಾಮಗಾರಿ ಪ್ರಾರಂಭಿಸುವ ಮುನ್ನ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಪ್ರಾರಂಭಿಸಲು ಅನುಮತಿ ನೀಡಬೇಕು ಎಂದು ಎಚ್ಚರಿಸಿದರು.
ಜನರ ಆರೋಗ್ಯಕ್ಕೆ ಸಂಚಕಾರ ತರುವ ನಕಲಿ ವೈದ್ಯರ ಬಗ್ಗೆ ಪಟ್ಟಿ ಮಾಡಿ, ಯಾರು ನಕಲಿ ವೈದ್ಯರು ಎನ್ನುವುದನ್ನು ಮಾಹಿತಿ ಸಂಗ್ರಹಿಸಿ ಕೂಡಲೇ ಅಂತಹ ಕ್ಲಿನಿಕ್ಗಳನ್ನು ಮುಚ್ಚಿಸಬೇಕು. ನಕಲಿ ವೈದ್ಯರ ಬಗ್ಗೆ 15 ದಿನದೊಳಗೆ ವರದಿ
ನೀಡುವಂತೆ ತಾಲೂಕು ವೈದ್ಯಾಧಿಕಾರಿ ಗಾಯತ್ರಿ ಅವರಿಗೆ ಸೂಚಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರಿವಳಿಕೆ ವೈದ್ಯರ ಹುದ್ದೆಗೆ ರಾಜೀನಾಮೆ ನೀಡಿರುವುದರಿಂದ ಹೆರಿಗೆ ಹಾಗೂ ಶಸ್ತ್ರ ಚಿಕಿತ್ಸೆಗೆ ತೊಂದರೆಯಾಗುತ್ತಿದೆ. ತಾಲೂಕಿನ ಹೊಸಬಾಳೆ, ಬಾರಂಗಿ, ಕೆರೆಹಳ್ಳಿ ಹಾಗೂ ಉಳವಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿನ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂದು ತಾಲೂಕು ವೈದ್ಯಾಧಿಕಾರಿ ಗಾಯತ್ರಿ ಸಭೆಗೆ ಮಾಹಿತಿ ನೀಡುತ್ತಿದ್ದಂತೆ, ಮಧ್ಯೆ ಪ್ರವೇಶಿಸಿದ ಶಾಸಕರು, ಕಟ್ಟಡದ ದುರಸ್ತಿಗೆ ಕ್ರಮ ಕೈಗೊಂಡಿರುವ ಬಗ್ಗೆ ಜಿಪಂ ಎಂಜಿನಿಯರ್ ಕೇಳಿದಾಗ ಆರೋಗ್ಯ ಇಲಾಖೆಯ ಅಧಿಕಾರಿಗಳು ಕಟ್ಟಡದ ದುರಸ್ತಿಗೆ ಸಂಬಂಧಪಟ್ಟಂತೆ ಮಾಹಿತಿ ನೀಡದಿರುವುದು ಜೊತೆಗೆ ಕ್ರಿಯಾ ಯೋಜನೆ ಸಿದ್ಧಪಡಿಸದಿರುವ ಬಗ್ಗೆ ಆಕ್ರೋಶಗೊಂಡ ಶಾಸಕರು, ಜನರು ಆರೋಗ್ಯದ ಬಗ್ಗೆ ಕಾಳಜಿ ಇರುವ ಇಲಾಖೆ ಉತ್ತಮ ಕಟ್ಟಡ, ಕುಡಿಯುವ ನೀರು ಸೇರಿದಂತೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವಂತೆ ತಾಕೀತು ಮಾಡಿದರು.
ಪಟ್ಟಣದ ಮುಖ್ಯರಸ್ತೆ ವಿಸ್ತರಣೆಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಸಿಕ್ಕಿರುವಾಗ ಸ್ಥಳೀಯ ಅಧಿಕಾರಿಗಳು ವಿಳಂಬ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಬಹಳಷ್ಟು ನಿವಾಸಿಗಳು 10 ವರ್ಷಗಳ ಹಿಂದೆಯೇ
ಸರ್ಕಾರದಿಂದ ಪರಿಹಾರ ಪಡೆದು ರಸ್ತೆ ವಿಸ್ತರಣೆಗೆ ಅನುಕೂಲ ಮಾಡಿ ಕೊಟ್ಟಿದ್ದಾರೆ.
ಆದರೆ ಕೆಲವರು ಮಾತ್ರ ಹೆಚ್ಚಿನ ಪರಿಹಾರಕ್ಕೆ ತಡೆ ಉಂಟು ಮಾಡುತ್ತಿದ್ದು, ಈಗಾಗಲೇ ಅವರನ್ನು ಕರೆದು ಮನವೊಲಿಸಲಾಗಿದೆ. ರಸ್ತೆ ವಿಸ್ತರಣೆಗೆ ಒಂದು ವಾರದಲ್ಲಿ ಲೋಕೋಪಯೋಗಿ ಇಲಾಖೆ ಮುಂದಾಗಬೇಕು ಎಂದು ಎಂಜಿನಿಯರ್ ರೇವಣಸಿದ್ದಯ್ಯ ಅವರಿಗೆ ಸೂಚಿಸಿದರು.
ಪಟ್ಟಣದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಪಪಂ ಮುಖ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ನೂರಾರು ಸಂಖ್ಯೆಯಲ್ಲಿ ದನಗಳ ಹಾವಳಿ ಇದೆ. ಅವುಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಏಕೆ ಗಮನ ನೀಡಿಲ್ಲ. ಕೂಡಲೇ ಹಸುಗಳ ಮಾಲೀಕರ ಹೆಸರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದರು.
ತಾಪಂ ಅಧ್ಯಕ್ಷೆ ನಯನಾ ಶ್ರೀಪಾದ ಹೆಗಡೆ, ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಜಿಪಂ ಸದಸ್ಯರಾದ ಶಿವಲಿಂಗೇಗೌಡ, ತಾರಾ ಶಿವಾನಂದಪ್ಪ, ಸತೀಶ್ ಅರ್ಜುನಪ್ಪ, ವೀರೇಶ್ ಕೊಟಗಿ, ತಹಶೀಲ್ದಾರ್ ಸಿ.ಪಿ. ನಂದಕುಮಾರ್, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ್, ಸಮಾಜ ಕಲ್ಯಾಣಾಧಿಕಾರಿ ರವಿಕುಮಾರ್,
ಬಿಇಒ ಮಂಜುನಾಥ, ಪಪಂ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಲೋಕೋಪಯೋಗಿ ಇಂಜಿನಿಯರ್ ರೇವಣಸಿದ್ದಯ್ಯ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ
BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ