ಬೆಳೆ ರಕ್ಷಣೆಗೆ ಹಾರಿಸುತ್ತಾರೆ ಗುಂಡು


Team Udayavani, Jun 21, 2018, 3:45 PM IST

kalaburgi-1.jpg

ವಾಡಿ: ನೂರಾರು ಕಲ್ಲು ಗಣಿಗಳು ಮತ್ತು ಎತ್ತೆತ್ತಲೂ ಗುಡ್ಡಗಾಡು ಅರಣ್ಯ ಪ್ರದೇಶ ಹೊಂದಿರುವ ನಗರ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ 126 ಬಂದೂಕುಗಳು ಪ್ರತಿನಿತ್ಯ ರಾತ್ರಿಯಾಗುತ್ತಿದ್ದಂತೆ ಸದ್ದು ಮಾಡಲು ಶುರುಮಾಡುತ್ತವೆ. ಹಾಗಂತ ಇದು ಪಾತಕಿಗಳ ಊರಲ್ಲ.. ಬಿತ್ತಿದ ಬೆಳೆ ರಕ್ಷಣೆಗೆ ಈ ಸದ್ದು.

ಚಿತ್ತಾಪುರ ತಾಲೂಕಿನ ಸಿಮೆಂಟ್‌ ನಗರಿ ವಾಡಿ ಪಟ್ಟಣದ ಪೊಲೀಸ್‌ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಕೈಗಳಲ್ಲಿ ಪರವಾನಗಿ ಹೊಂದಿದ ನೂರಾರು ಬಂದೂಕುಗಳು ಸಿಡಿಮದ್ದಿನ ಸದ್ದಿನಾಟದಲ್ಲಿ ತೊಡಗಿವೆ. ಗುಡ್ಡ ಬೆಟ್ಟಗಳಿಂದ ಕೂಡಿದ ಯಾಗಾಪುರ, ಬೆಳಗೇರಾ, ಚೌಕಂಡಿ ತಾಂಡಾ, ಶಿವನಗರ ತಾಂಡಾ, ಹೀರಾಮಣಿ ತಾಂಡಾ, ಲಾಡ್ಲಾಪುರ ಹಾಗೂ ಕುಂಬಾರಹಳ್ಳಿ ಸೇರಿದಂತೆ ಹತ್ತಾರು ಗ್ರಾಮಗಳ ರೈತರು ಬೆಳೆ ನಾಶಪಡಿಸುವ ಕಾಡು ಪ್ರಾಣಿಗಳಿಂದ ಬೇಸತ್ತಿದ್ದಾರೆ. 

ಪರಿಣಾಮ ಕಳೆದ 20 ವರ್ಷಗಳ ಹಿಂದೆ ಪೊಲೀಸ್‌ ಇಲಾಖೆ ನೀಡಿದ ಅಧಿಕೃತ ಪರವಾನಿಗೆಯುಳ್ಳ ಬಂದೂಕುಗಳನ್ನು
ಹೊಂದಿದ್ದಾರೆ. ರೈತರು ಬಳಸುವ ಎಸ್‌ಬಿಎಂಎಲ್‌ ಬಂದೂಕುಗಳ ಸಂಖ್ಯೆ 96, ಡಿಬಿಬಿಎಲ್‌-17,
ಎಸ್‌ಬಿಬಿಎಲ್‌-03, ಡಿಬಿಎಂಎಲ್‌-02. ಆತ್ಮ ರಕ್ಷಣೆಗೆಂದು ಸ್ಥಳೀಯರು ಒಟ್ಟು ಎಂಟು ಅಂದರೆ ಪಿಸ್ತೂಲ್‌-03,
ರಿವಾಲ್ವಾರ್‌-04 ಹಾಗೂ ಒಂದು ರೈಫಲ್‌ಗಳನ್ನು ಹೊಂದಿದ್ದಾರೆ. ಒಟ್ಟಾರೆ 126 ಬಂದೂಕುಗಳಿವೆ.

ಚುನಾವಣೆಗಳು ಘೋಷಣೆಯಾದಾಗ ರೈತರು ಹಾಗೂ ಪ್ರತಿಷ್ಠಿತರು ತಮ್ಮ ಬಂದೂಕುಗಳನ್ನು ಠಾಣೆಗೆ ತಂದು ಜಮೆ ಮಾಡುತ್ತಾರೆ. ಹೀಗೆ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಗೂ ಮುಂಚೆ ಪೊಲೀಸರಿಗೆ ಒಪ್ಪಿಸಲಾಗಿದ್ದ ನೂರಾರು ಬಂದೂಕುಗಳನ್ನು ನಾಲ್ಕು ತಿಂಗಳ ನಂತರ ಜೂ.18 ರಂದು ಠಾಣೆಗೆ ಹಾಜರಾಗಿ ವಾಪಸ್‌ ಪಡೆದುಕೊಂಡಿದ್ದಾರೆ.

ಈ ವೇಳೆ ಉದಯವಾಣಿಯೊಂದಿಗೆ ಮಾತನಾಡಿದ ಅನೇಕ ರೈತರು, ಅರಣ್ಯ ಪ್ರದೇಶದಲ್ಲಿ ನಮ್ಮ ಜಮೀನುಗಳಿವೆ.
ರಾತ್ರಿ ವೇಳೆ ಹೊಲಗಳಿಗೆ ನುಗ್ಗುವ ಕಾಡು ಹಂದಿಗಳು ನೆಲದೊಳಗಿನ ಬೀಜಗಳನ್ನು ಸಾಲುಗಟ್ಟಿ ಹೆಕ್ಕಿ ತಿನ್ನುತ್ತವೆ. ಬೆಳೆ ಸಾಲುಗಳನ್ನು ಕತ್ತರಿಸಿ ಹಾಕುತ್ತವೆ. ನಷ್ಟದ ಬದುಕು ನಮ್ಮದಾಗಿದೆ. ಬಂದೂಕುಗಳು ಸದ್ದು ಮಾಡಿದರೆ ಪ್ರಾಣಿಗಳು ದಿಕ್ಕೆಟ್ಟು ಓಡುತ್ತವೆ. ಬಂದೂಕುಗಳು ಯಾವುದೇ ಪ್ರಾಣಿಯ ಪ್ರಾಣ ತೆಗೆಯುವುದಿಲ್ಲ. ಬದಲಿಗೆ ನಮ್ಮ ಅನ್ನ
ರಕ್ಷಿಸುತ್ತಿವೆ ಎನ್ನುತ್ತಾರೆ.

ಜೀವ ರಕ್ಷಣೆಗಾಗಿ ಬಂದೂಕು ಮತ್ತು ಪಿಸ್ತೂಲ್‌ಗ‌ಳನ್ನು ಕಾನೂನು ಬದ್ಧವಾಗಿ ಪರವಾನಗಿ ಸಹಿತ ನೀಡಲಾಗುತ್ತದೆ. ಹೀಗೆ ಠಾಣೆ ವ್ಯಾಪ್ತಿಯಲ್ಲಿ ಕೆಲವರು ಆತ್ಮ ರಕ್ಷಣೆಗಾಗಿ ಪಿಸ್ತೂಲ್‌ಗ‌ಳನ್ನು ಹೊಂದಿದ್ದಾರೆ. ಹೊಲಗಳಲ್ಲಿ ಬೆಳೆ ರಕ್ಷಣೆಗೆ
ಗುಂಡಿನ ಸದ್ದು ಮಾಡಿ ಪ್ರಾಣಿಗಳನ್ನು ಓಡಿಸಲು ನೂರಾರು ರೈತರು ಇಲಾಖೆಯ ಪರವಾನಗಿಯೊಂದಿಗೆ ಬಂದೂಕುಗಳನ್ನು ಹೊಂದಿದ್ದಾರೆ. ಆಯುಧ ಹೊಂದಿದವರು ನಿಗದಿತ ದಿನಾಂಕದಂದು ಅವುಗಳ ನವೀಕರಣ ಮಾಡಿಸಬೇಕಾಗುತ್ತದೆ. ಹೀಗೆ ಪರವಾನಗಿ, ನವೀಕರಣ ಮಾಡಿಸದ 48 ಬಂದೂಕುಗಳನ್ನು ಈಗಾಗಲೇ ಜಿಲ್ಲಾ
ಆಯುಧ ಕೋಣೆಗೆ ಜಮೆ ಮಾಡಿದ್ದೇವೆ.
 ವಿಜಯಕುಮಾರ ಬಾವಗಿ, ಪಿಎಸ್‌ಐ ವಾಡಿ ಠಾಣೆ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.