ಬಿಲ್‌ ಪಾವತಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jun 21, 2018, 4:14 PM IST

vijayapura-1.jpg

ವಿಜಯಪುರ: ಜಿಲ್ಲೆಯಲ್ಲಿ 2017-18ನೇ ಸಾಲಿನಲ್ಲಿ ರೈತರಿಂದ ಕಬ್ಬು ಬೆಳೆ ಪಡೆದಿರುವ ಜಿಲ್ಲೆಯ 9 ಸಕ್ಕರೆ ಕಾರ್ಖಾನೆಗಳು 229 ಕೋಟಿ ರೂ. ಹಿಂಬಾಕಿ ಪಾವತಿಸದೇ ತೊಂದರೆ ನೀಡುತ್ತಿವೆ. ಕೂಡಲೇ ಹಿಂಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಪ್ರತಿಭಟನೆ ನಡೆಸಿದ ಕಬ್ಬು ಬೆಳೆಗಾರರು, ಜಿಲ್ಲೆ ಸಕ್ಕರೆ ಕಾರ್ಖಾನೆಗಳು ನವೆಂಬರ್‌ ಮೊದಲ ವಾರದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿ,  ಮಾರ್ಚ್‌ ಅಂತ್ಯಕ್ಕೆ22 ಲಕ್ಷ ಟನ್‌ ಕಬ್ಬು ನುರಿಸಿವೆ.ಡಿಸೆಂಬರ್‌ ವೇಳೆಗೆ ನಿಯಮದ ಪ್ರಕಾರ ರೈತರಿಗೆ ಬಿಲ್‌ ಪಾವತಿಸಬೇಕು. 

ಮೊದಲ ಕಂತಿನ ಹಣ ಪಾವತಿಸಿದ ಬಳಿಕ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಬಿಲ್‌ ಪಾವತಿ ಮಾಡಿಲ್ಲ
ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ದುದ್ದಗಿ, ಪ್ರಧಾನ ಕಾರ್ಯದರ್ಶಿ ರಾಜು ಗುಂದಗಿ, ಬಾಬು
ಕೋತಂಬರಿ ದೂರಿದರು.

ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು 229 ಕೋಟಿ ರೂ. ಬಾಕಿ ಉಳಿಸಿಕೊಡಿದ್ದು, ಜಿಲ್ಲಾಧಿಕಾರಿಗಳು ವಾರದೊಳಗೆ ಸಕ್ಕರೆ ಕಾರ್ಖಾನೆಗಳ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಹಿಂಬಾಕಿ ಪಾವತಿಗೆ ಕ್ರಮ ಕೈಗೊಳ್ಳಬೇಕು. ಪಾವತಿ ಮಾಡದಿದ್ದಲ್ಲಿ ಸಕ್ಕರೆ ಕಾರ್ಖಾನೆಗಳ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗಬೇಕು. ಜಿಲ್ಲಾಡಳಿತ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಜಮಖಂಡಿ ಶುಗರ್ (ನಾದ) 58.54 ಕೋಟಿ ರೂ. ಜ್ಞಾನಯೋಗೇಶ ಶಿವುಕುಮಾರ 41.3 ಕೋಟಿ ರೂ. ಇಂಡಿಯನ್‌ ಶುಗರ್ ಲಿ 42.39 ಕೋಟಿ ರೂ. ನಂದಿ ಶುಗರ್ 26.3 ಕೋಟಿ ರೂ., ಕೆ.ಪಿ.ಆರ್‌. ಶುಗರ್ 30.7 ಕೋಟಿ ರೂ., ಮನಾಲಿ ಶುಗರ್ 6.50 ಕೋಟಿ ರೂ. ಬಸವೇಶ್ವರ ಶುಗರ್ 16.3 ಲಕ್ಷ, ಬಾಲಾಜಿ ಶುಗರ್ 6.59 ಕೋಟಿ ರೂ.,
ಭೀಮಾಶಂಕರ ಸಹಕಾರಿ ಶುಗರ್ 17.56 ಕೋಟಿ ರೂ. ಬಾಕಿ ಉಳಿಸಿಕೊಂಡಿವೆ ಎಂದು ದೂರಿದ್ದಾರೆ.

ಕಬ್ಬು ಬೆಳೆಗಾರರಿಗೆ ಏಕರೂಪದ ಬೆಲೆ ನೀಡದೇ ಹಾಗೂ ಏಕ ಸ್ವರೂಪದ ನಿಯಮ ಪಾಲಿಸದೇ ಕಳೆದ ಒಂದು ದಶಕದಿಂದ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೇಗಾರರನ್ನು ವಂಚಿಸುತ್ತಿವೆ. ಹೀಗಾಗಿ ರೈತರಿಗೆ ಮೋಸ ಮಾಡುವ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರಕಾರ ಕಬ್ಬು ಬೆಳೆದ ರೈತರಿಗೆ ಪ್ರೋತ್ಸಾಹ ನೀಡಲು 10 ಸಾವಿರ ಕೋಟಿ ರೂ. ಹಣ ನೀಡಿದ್ದರೂ ಸ್ವಾಗತಾರ್ಹ. ಅದೇ ರೀತಿ ರಾಜ್ಯ ಸರಕಾರ ಕಬ್ಬು ಬೆಳೆಗಾರರ ಪ್ರೋತ್ಸಾಹಕ್ಕಾಗಿ ಆರ್ಥಿಕ ನೆರವು ನೀಡಬೇಕು. ಮತ್ತೂಂದೆಡೆ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.