ಐಟಿಐ ಕಾಲೇಜು ದತ್ತು ಪಡೆಯಲು ಆಹ್ವಾನ
Team Udayavani, Jun 22, 2018, 6:20 AM IST
ಬೆಂಗಳೂರು: ಗುಣಮಟ್ಟದ ಕೌಶಲ್ಯಾಭಿವೃದ್ಧಿ ಜತೆಗೆ ನಿರುದ್ಯೋಗ ನಿವಾರಣೆಗಾಗಿ ಐಟಿಐ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ದತ್ತು ಪಡೆಯುವಂತೆ ಉದ್ಯಮಿಗಳಿಗೆ ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಆಹ್ವಾನ ನೀಡಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಿಎಸ್ಆರ್ (ಕಾರ್ಪೋ ರೇಟ್ ಸಾಮಾಜಿಕ ಹೊಣೆಗಾರಿಕೆ) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ,
ಹಾಗೊಂದು ವೇಳೆ ಈ ನಿಟ್ಟಿನಲ್ಲಿ ಕೈಗಾರಿಕೋದ್ಯಮಿಗಳು ಮುಂದೆ ಬಂದರೆ, ಸರ್ಕಾರ ಕೂಡ ಇದಕ್ಕೆ ಮುಕ್ತಮನಸ್ಸು ಹೊಂದಿದೆ ಎಂದರು.
ಎಫ್ಕೆಸಿಸಿಐನಂತಹ ಸಂಸ್ಥೆಗಳು ರಾಜ್ಯದಲ್ಲಿರುವ ಐಟಿಐ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ದತ್ತು ಪಡೆಯಬೇಕು.
ಇದರಿಂದ ಕೌಶಲ್ಯದ ಗುಣಮಟ್ಟ ಹೆಚ್ಚಲಿದೆ. ಕೈಗಾರಿಕೆಗಳಿಗೆ ಅಗತ್ಯ ಇರುವ ಕೌಶಲ್ಯ ಹೊಂದಿದ ಮಾನವ ಸಂಪನ್ಮೂಲವೂ ದೊರೆಯುತ್ತದೆ. ಆ ಮೂಲಕ ನಿರುದ್ಯೋಗ ಸಮಸ್ಯೆ ಕೂಡ ತಕ್ಕಮಟ್ಟಿಗೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.
ಪ್ರಸ್ತುತ ಕೈಗಾರಿಕೆ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ , ಕಾರ್ಮಿಕ ಸೇರಿದಂತೆ ವಿವಿಧ ವಿಭಾಗಗಳಿಂದಕೌಶಲ್ಯ ತರಬೇತಿ ನಡೆಯುತ್ತಿದೆ. ಇದಕ್ಕಾಗಿ ಹಣವೂ ವ್ಯಯ ಆಗುತ್ತಿದೆ.ಆದರೆ, ಫಲಿತಾಂಶ ತೃಪ್ತಿಕರವಾಗಿಲ್ಲ. ಈ ಹಿನ್ನೆಲೆಯಲ್ಲಿ ಉದ್ಯಮಿಗಳು ದತ್ತು ಪಡೆಯಲು ಮುಂದೆ ಬಂದರೆ, ಸರ್ಕಾರ ಕೂಡ ಇದಕ್ಕೆ ಪೂರಕವಾಗಿ ಸ್ಪಂದಿಸಲಿದೆ. ಆಯಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯ ಬೋಧಿಸಬಹುದು ಎಂದು ಹೇಳೀದರು.
ಶಿಕ್ಷಣ ನೀತಿಯಲ್ಲಿ ಲೋಪ
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮಾತನಾಡಿ, ನಾಲ್ಕು ಲಕ್ಷಕ್ಕೂ ಅಧಿಕ ನಿರುದ್ಯೋಗಿ ಪದವೀಧರರು
ನಮ್ಮಲ್ಲಿದ್ದಾರೆ. ಮತ್ತೂಂದೆಡೆ ಪ್ರತಿಯೊಬ್ಬರನ್ನೂ ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹಿಸುತ್ತಿದ್ದೇವೆ. ಈ ದೃಷ್ಟಿಯಿಂದ
ನಮ್ಮ ಶಿಕ್ಷಣ ನೀತಿಯಲ್ಲಿ ಲೋಪ ಇದ್ದಂತೆ ಕಾಣಿಸುತ್ತಿದೆ. ಇದನ್ನು ಸರಿಪಡಿಸುವ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.
ನಮ್ಮಲ್ಲಿ ಶಿಕ್ಷಣ ಸಂಸ್ಥೆಗಳು ಸಾಕಷ್ಟಿವೆ. ಆದರೆ, ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಶಿಕ್ಷಣ ಮತ್ತು ಕೈಗಾರಿಕೋದ್ಯಮದ ನಡುವಿನ ಕಂದಕ ನಿವಾರಣೆ ಮಾಡಬೇಕು. ಅಂದಾಗ, ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಬಲ್ಲದು ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ