ಪತ್ನಿಯನ್ನು ಕೊಂದು ಪರಾರಿಯಾದ ಉದ್ಯಮಿಯಿಂದ ಮಕ್ಕಳ ಮೇಲೂ ಗುಂಡು !


Team Udayavani, Jun 22, 2018, 10:07 AM IST

firing.jpg

ಬೆಂಗಳೂರು:  ಗುರುವಾರ ರಾತ್ರಿ  ಜಯನಗರದ ನಾಲ್ಕನೇ ಬ್ಲಾಕ್‌ನ ನಿವಾಸದಲ್ಲಿ  ಪತ್ನಿಯ ಎದೆಗೆ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದು ಮಕ್ಕಳಿಬ್ಬರೊಂದಿಗೆ ಪರಾರಿಯಾಗಿದ್ದ ಉದ್ಯಮಿ ಶುಕ್ರವಾರ ಬೆಳಗ್ಗೆ  ಪೊಲೀಸರು ಬಂಧಿಸಲು ತೆರಳಿದ್ದ ವೇಳೆ ಮಕ್ಕಳಿಬ್ಬರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೆಚ್ಚಿ ಬೀಳಿಸುವ ನಡೆದಿದೆ. ಪೊಲೀಸರು ಸ್ಥಳದಲ್ಲೇ ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಗಣೇಶ್‌ ಎಂಬ ರಿಯಲ್‌ ಎಸ್ಟೇಟ್‌ ಉದ್ಯಮಿ ಪತ್ನಿ ಸಹನಾರೊಂದಿಗೆ ಜಗಳವಾಡಿ ಮನೆಯಲ್ಲಿದ್ದ ರಿವಾಲ್ವರ್‌ನಿಂದ ಗುಂಡಿಕ್ಕಿ ಹತ್ಯೆಗೈದು ಇಬ್ಬರು ಮಕ್ಕಳ ಸಮೇತ ಪರಾರಿಯಾಗಿದ್ದ. 

ಹಣಕಾಸು ವಿಚಾರಕ್ಕೆ ಸಂಬಂಧಿಸಿ ಗಂಡ ಹೆಂಡತಿ ನಡುವೆ ನಿರಂತರ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. 

ಜಯನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಣೇಶ್‌ ಬಂಧನಕ್ಕಾಗಿ ಕಾರ್ಯಾಚರಣೆಗಿಳಿದಿದ್ದರು. 

ಗಣೇಶ್‌ ಮಕ್ಕಳೊಂದಿಗೆ ಬಿಡದಿ ಬಳಿಯ ಬನಗಿರಿ ಯಲ್ಲಿ ಇರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಮಕ್ಕಳ ಮೇಲೆ ಗುಂಡು ಹಾರಿಸಿ ರಾಕ್ಷಸನಂತೆ ವರ್ತಿಸಿದ್ದಾನೆ. 

ಹೆಣ್ಣು ಮಗುವಿನ ಹೊಟ್ಟೆ ಭಾಗಕ್ಕೆ ಗುಂಡು ತಗುಲಿದ್ದು, ಗಂಡು ಮಗುವಿನ ತೊಡೆ ಮತ್ತು ಕೈ ಗೆ ಗುಂಡು ತಾಗಿದೆ, ಇಬ್ಬರೂ ಪ್ರಾಣಾಪಾಯಿದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದ್ದು, ಕೋಣನಕುಂಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಪೊಲೀಸರು ಸ್ಥಳದಲ್ಲಿ ರಿವಾಲ್ವರ್‌ ಸಹಿತ ಗಣೇಶ್‌ನನ್ನು  ವಶಕ್ಕೆ ಪಡೆದಿದ್ದು , ವಿಚಾರಣೆ ನಡೆಸುತ್ತಿದ್ದಾರೆ. 

ನಾನು ಅಪಾರ ಸಾಲದ ಸುಳಿಯಲ್ಲಿ ಸಿಲುಕಿದ್ದೆ, ಆಸ್ತಿ ಮಾರಾಟ ಮಾಡಿ ಸಾಲ ಮುಕ್ತನಾಗಲು ಮುಂದಾಗಿದ್ದೆ . ಆದರೆ ಹೆಂಡತಿ ಸಹನಾ ಅದಕ್ಕೆ ಅಡ್ಡಿಯಾಗಿದ್ದಳು, ಹೀಗಾಗಿ ಹೆಂಡತಿಯನ್ನು ಕೊಲೆಗೈದೆ , ಮಕ್ಕಳನ್ನೂ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ತಿರ್ಮಾನಿಸಿದ್ದೆ ಎಂದು ಪೊಲೀಸರ ಬಳಿ ಹೇಳಿಕೊಂಡಿರುವ ಬಗ್ಗೆ  ವರದಿಯಾಗಿದೆ. 

ಬಂಧಿತ ಗಣೇಶ್‌ ರೆಸಾರ್ಟ್‌ವೊಂದರ ಮಾಲೀಕನಾಗಿದ್ದು ಮೂರ್‍ನಾಲ್ಕು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು , ಆಪಾರ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದ ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.