ಯೋಗದಿಂದ ರೋಗ ನಿರೋಧಕ ಶಕ್ತಿ ವೃದ್ಧಿ


Team Udayavani, Jun 22, 2018, 10:51 AM IST

ballery-2.jpg

ಬಳ್ಳಾರಿ: ಯೋಗವನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗಲಿದೆ ಎಂದು ಎಸ್ಪಿ ಅರುಣ್‌ ರಂಗರಾಜನ್‌ ಹೇಳಿದರು.

ನಗರದ ಮುನಿಸಿಪಲ್‌ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್‌ ಇಲಾಖೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನ
ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇವಲ ದೈಹಿಕವಾಗಿ ಸದೃಢವಾಗಿದ್ದರೆ ಒಳ್ಳೆಯ ಆರೋಗ್ಯವಲ್ಲ. ಮನುಷ್ಯ ಮಾನಸಿಕವಾಗಿಯೂ ಮನೋಲ್ಲಾಸದಿಂದ ಇದ್ದಾಗ ಮಾತ್ರ ಮನುಷ್ಯ ಅತ್ಯುತ್ತಮ ಆರೋಗ್ಯ ಸ್ಥಿತಿ ಹೊಂದಿರಲು ಸಾಧ್ಯವಾಗಲಿದೆ. ಹೀಗಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡು ಸದೃಢರಾಗಬೇಕೆಂದು ಕರೆ ನೀಡಿದರು.

ಪ್ರತಿನಿತ್ಯ ಯೋಗಾಭ್ಯಾಸದಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ. ಯೋಗಾಭ್ಯಾಸವನ್ನು ಜೀವನದಲ್ಲಿ
ಅಳವಡಿಸಿಕೊಂಡಲ್ಲಿ ಆರೋಗ್ಯದ ಬಗ್ಗೆ ನಿರ್ಭಿತಿಯಿಂದ ಜೀವನ ನಡೆಸಲು ಈ ಯೋಗವು ಸಹಕಾರಿಯಾಗಲಿದೆ. ಹೀಗಾಗಿ ಆರೋಗ್ಯ ಪೂರ್ಣ ಬದುಕಿಗೆ ಯೋಗ ಅತ್ಯುತ್ತಮ ಸಾಧನವಾಗಲಿದೆ ಎಂದರು.

ಅಂತಾರಾಷ್ಟ್ರೀಯ ಯೋಗ ದಿನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಬೇಕಾದರೆ ಯೋಗವೊಂದೇ ಬಹುದೊಡ್ಡ ಸಾಧನವಾಗಿದೆ ಎಂದರು.

ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ ಮಾತನಾಡಿ, ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯು ಅತ್ಯಂತ ಲವಲವಿಕೆಯಿಂದ ಇರುತ್ತಾನೆ. ಹೀಗಾಗಿ ಎಲ್ಲರೂ ನಿರಂತರವಾಗಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ಸದೃಢ ಆರೋಗ್ಯಕ್ಕೆ ಯೋಗ ಸಾಧನವು ಬಹುಮುಖ್ಯವಾಗಿದೆ ಎಂದರು. ಜಿಪಂ ಅಧ್ಯಕ್ಷೆ ಸಿ.ಭಾರತಿ ಮಾತನಾಡಿದರು.

ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ನಿರ್ಮಲಾಜಿಯವರು ಯೋಗಾಭ್ಯಾಸದ ಕುರಿತು ಉಪನ್ಯಾಸ ನೀಡಿದರು. ನಂತರ ಮೈದಾನದಲ್ಲಿ ಕೆಲಹೊತ್ತು  ಯೋಗಾಭ್ಯಾಸ ನಡೆಯಿತು. ಶಿಬಿರದಲ್ಲಿ ಡಿಸಿ, ಎಸ್ಪಿ, ಸಿಇಒ, ಜಿಪಂ ಅಧ್ಯಕ್ಷೆ, ಉಪಾಧ್ಯಕ್ಷರು ಮೇಯರ್‌, ಉಪಮೇಯರ್‌ ಸೇರಿದಂತೆ ಈಶ್ವರೀಯ ವಿವಿಯ ನೂರಾರು ಯೋಗ ಸಾಧಕರು, ವಿದ್ಯಾರ್ಥಿಗಳೊಂದಿಗೆ ಕುಳಿತು ಯೋಗಾಭ್ಯಾಸದಲ್ಲಿ ತೊಡಗಿದ್ದರು. 

ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎನ್‌.ಬಸರೆಡ್ಡಿ, ಮೇಯರ್‌ ಆರ್‌.ಸುಶೀಲಾಬಾಯಿ, ಉಪಮೇಯರ್‌ ಉಮಾದೇವಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಪಿ.ಶೋಭಾ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಹಮತ್‌ ಉಲ್ಲಾ, ಡಾ| ಅನಿಲಕುಮಾರ್‌, ಜಿಲ್ಲಾ ಆಯುಷ್‌ ಇಲಾಖೆ ಅಧಿಕಾರಿ ಡಾ|
ವಂದನಾ ಗಾಳಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿ ಬಿ.ಕೆ.ನಿರ್ಮಲಾಜಿ, ಜಿಲ್ಲೆಯ ಆಯಾ ತಾಲೂಕಿನ ನೋಡಲ್‌ ಅಧಿಕಾರಿಗಳಾದ ಡಾ| ವಿಜಯಕುಮಾರ, ಡಾ| ರೂಪಸಿಂಗ್‌ ರಾಥೋಡ, ಡಾ| ವಿಜಯೇಂದ್ರಚಾರ್‌, ಡಾ| ಕೊಟ್ರೇಶ, ಡಾ| ಶಶಿಧರ ರಾಮದುರ್ಗ, ಡಾ| ರಾಜೇಶ್ವರಿ, ಡಾ| ಗುರುಬಸವರಾಜ, ಡಾ| ಉಮೇಶ ಕಾಖಂಡಕಿ ಇದ್ದರು. 

ಯೋಗ ತರಬೇತುದಾರರಾದ ರಾಜೇಂದ್ರರೆಡ್ಡಿ, ಉಷಾ ಹಾಗೂ ಜಗದೀಶ ಅವರು ನಾನಾ ಭಂಗಿಯ ಯೋಗಾಭ್ಯಾಸ ತಿಳಿಸಿಕೊಟ್ಟರು. ನಂತರ ಮೈದಾನದಲ್ಲಿ ಯೋಗ ಜಾಗೃತಿ ಶಿಬಿರದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಜಾಥಾವು ಮೈದಾನದಿಂದ ಡಾ| ರಾಜ್‌ ರಸ್ತೆ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಕೆ.ಸಿ.ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.