ಮಾಡಿದರೆ ಯೋಗ ಓಡುವುದು ರೋಗ
Team Udayavani, Jun 22, 2018, 5:32 PM IST
ಕನಕಗಿರಿ: ಚೈತನ್ಯ ಲವಲವಿಕೆಯಿಂದ ಪ್ರತಿಯೊಬ್ಬ ಮನುಷ್ಯ ಬದುಕಲು ಜೀವನದಲ್ಲಿ ಯೋಗ ಅತ್ಯವಶ್ಯಕತೆ ಇದೆ.
ಯೋಗ ಮಾಡಿದರೆ ರೋಗವು ಓಡಿ ಹೋಗುವುದು ಎಂದು ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದಿ ಆರ್ಟ್ ಆಫ್ ಲಿವಿಂಗ್
ಹಾಗೂ ಸುವರ್ಣಗಿರಿ ಯೋಗ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನಾದಿ ಕಾಲದಿಂದಲೂ ಋಷಿ ಮುನಿಗಳು ಯೋಗ ಅಭ್ಯಾಸವನ್ನು ಮಾಡುತ್ತಿದ್ದರು. ಕಳೆದ ನಾಲ್ಕು ವರ್ಷದಿಂದ
ಪ್ರಧಾನಿ ನರೇಂದ್ರ ಮೊದಿಯವರು ಇಡೀ ವಿಶ್ವವೇ ಯೋಗ ದಿನಾಚರಣೆಯನ್ನು ಮಾಡುವ ಮೂಲಕ ವಿಶ್ವಕ್ಕೆ ಭಾರತದ ಕೊಡೆಗೆಯನ್ನು ನೀಡಿದ್ದಾರೆ. ಪಟ್ಟಣದಲ್ಲಿ ಯೋಗ ಶಿಬಿರ ಕಟ್ಟಡಕ್ಕೆ ಶಾಸಕರ ಅನುದಾನದಲ್ಲಿ ಹಣ ನೀಡಲಾಗುವುದು, ಪ್ರತಿ ನಿತ್ಯ ಒಂದು ಗಂಟೆ ಕಾಲ ಯೋಗಕ್ಕೆ ಸಮಯವನ್ನು ಮೀಸಲಿಡುವುದರಿಂದ ಆರೋಗ್ಯದ ಕಡೆ ಗಮನ ಹರಿಸಿದಂತಾಗುತ್ತದೆ. ನಾನು ಪ್ರತಿ ನಿತ್ಯ ಯೋಗ ಮಾಡುವುದನ್ನು ರೂಢಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುವರ್ಣಗಿರಿ ಯೋಗ ಟ್ರಸ್ಟ ಅಧ್ಯಕ್ಷ ವಾಗೇಶ ಹಿರೇಮಠ, ಪ.ಪಂ ಅಧ್ಯಕ್ಷ ರವಿ ಭಜಂತ್ರಿ, ಎಪಿಎಂಸಿ ಸದಸ್ಯ ದೇವಪ್ಪ ತೋಳದ್, ಪಪಂ ಮುಖ್ಯಾಧಿಕಾರಿ ಶ್ರೀಶೈಲಗೌಡ, ವ್ಯಾಪಾರ ಸಮೀತಿ ಅಧ್ಯಕ್ಷ ಮಹಾಂತೇಶ ಸಜ್ಜನ್, ಯೋಗ ಗುರು ಶೇಖರಯ್ಯ ಸ್ವಾಮಿ, ಪ್ರಮುಖರಾದ ಪ್ರಕಾಶ ಹಾದಿಮನಿ, ಅನಂತಪ್ಪ ದಾಯಿಪುಲ್ಲೆ, ಶಿವಾನಂದ ಬೆಲ್ಲದ್, ಪರಸಪ್ಪ ಹೊರಪೆಟೆ, ಕೃಷ್ಣವೇಣಿ ಬೊಂದಾಡೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
MUST WATCH
ಹೊಸ ಸೇರ್ಪಡೆ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ