ಅಂಬಿ ಸ್ಟೈಲ್‌: ಖದರು, ಗದರು


Team Udayavani, Jun 22, 2018, 6:06 PM IST

ambarish-1.jpg

ಅಂಬರೀಶ್‌ ಎಲ್ಲಿರುತ್ತಾರೋ ಅಲ್ಲಿ ನಗುವಿನ ವಾತಾವರಣ, ಆತ್ಮೀಯತೆಯ ಬೈಗುಳ, ಗದರುವಿಕೆ, ಸಣ್ಣ ಸಿಟ್ಟು, ಮರುಕ್ಷಣ ಒಂದು ನಗೆ … ಇವಿಷ್ಟನ್ನು ನಿರೀಕ್ಷಿಸಬಹುದು. ಅವರ ಗುಣವೇ ಅಂತಹುದು ತಮಗೆ ಆಗದ್ದನ್ನು ನೇರವಾಗಿ ಹೇಳಿಬಿಡುವ, ಸಿಟ್ಟು ಬಂದಾಗ ಗದರುವ, ಮರುಕ್ಷಣವೇ “ಬಾರಯ್ಯ’ ಎಂದು ಹೆಗಲಿಗೆ ಕೈ ಹಾಕಿ ಮುಗುಳ್ನಗುವ ಗುಣವೇ ಅವರನ್ನು ಅಭಿಮಾನಿಗಳು ಇಷ್ಟಪಡುವಂತೆ ಮಾಡಿದ್ದು.

ಗುರುವಾರ ಚಿತ್ರರಂಗದ ವತಿಯಿಂದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರಿಗೆ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲೂ ಅಂಬರೀಶ್‌ ಅವರ ಖದರು, ಮ್ಯಾನರೀಸಂ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮ ತಡವಾದರೂ ವೇದಿಕೆಯಲ್ಲಿ ಅಂಬಿ ಅವರ ಸ್ಟೈಲ್‌ ನೋಡಿದವರು ಕಿರುನಗೆಯೊಂದಿಗೆ ಅದನ್ನು ಆಸ್ವಾಧಿಸಿದ್ದು ಸುಳ್ಳಲ್ಲ. ಸನ್ಮಾನ ಕಾರ್ಯಕ್ರಮದಲ್ಲಿನ ಅಂಬಿ ಸ್ಟೈಲ್‌ನ ಝಲಕ್‌ ಇಲ್ಲಿದೆ …

ಏಯ್‌ ಎದ್‌ ಬಾರಯ್ಯವೇದಿಕೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಒಬ್ಬೊಬ್ಬರನ್ನೇ ನಿರೂಪಕಿ ವೇದಿಕೆ ಕರೆಯಲಾರಂಭಿಸಿದರು. ಕಾರ್ಯಕ್ರಮಕ್ಕೆ ಬಂದಿದ್ದ ದರ್ಶನ್‌ ಸಾಮಾನ್ಯರಂತೆ ಹಿಂದುಗಡೆ ಕುಳಿತಿದ್ದರು. ದರ್ಶನ್‌ ಬಂದಿದ್ದನ್ನು ಗಮನಿಸಿದ ಅಂಬರೀಶ್‌, “ದರ್ಶನ್‌ನ ಕರೀರಿ’ ಎಂದರು. ಅಂತೆಯೇ ದರ್ಶನ್‌ ವೇದಿಕೆಗೆ ಬರಬೇಕೆಂದು ನಿರೂಪಕಿ ಕರೆದಾಗ, ದರ್ಶನ್‌ “ಬೇಡ ನಾನು ಇಲ್ಲೇ ಇರುತ್ತೇನೆ’ ಎಂದು ಕೈ ಸನ್ನೆ ಮಾಡಿದರು.

ಆಗ ಅಂಬಿ ವೇದಿಕೆಯಿಂದಲೇ “ಏಯ್‌ ಎದ್‌ ಬಾರಯ್ಯ’ ಎಂದು ತಮ್ಮ ಶೈಲಿಯಲ್ಲಿ ಗದರಿದರು. ಅಂಬರೀಶ್‌ ಅವರ ಪ್ರೀತಿಯ ಗದರಿಕೆಗೆ ಮಣಿದ ದರ್ಶನ್‌ ನೇರವಾಗಿ ವೇದಿಕೆಗೆ ಬಂದು ಮತ್ತೆ ಕೆಳಗೆ ಹೋಗುತ್ತೇನೆ ಎಂದರು. ಆಗ ಮತ್ತೆ ಅಂಬರೀಶ್‌ “ಏಯ್‌ ಸುಮ್ನೆ ಕೂತ್ಕೊಬೇಕು’ ಎಂದು ನಕ್ಕರು. ಅದರಂತೆ ದರ್ಶನ್‌ ಕಾರ್ಯಕ್ರಮ ಮುಗಿಯುವವರೆಗೆ ವೇದಿಕೆಯಲ್ಲೇ ಇದ್ದರು. 

ಹೋಗ್ರೋ ಎಲ್ಲಾ ಕೆಳಗೆ ಹೋಗ್ರೋಕಾರ್ಯಕ್ರಮ ಆರಂಭವಾಗಿ ಕೆಲಹೊತ್ತಿನ ನಂತರ ಮುಖ್ಯಮಂತ್ರಿವರಿಗೆ ಸನ್ಮಾನ ನಡೆಯಿತು. ಆ ವೇಳೆಗೆ ಮುಖ್ಯಮಂತ್ರಿಯವರಿಗೊಂದು ಹೂಗುಚ್ಛ ನೀಡಬೇಕೆಂದು ತಂದಿದ್ದವರೆಲ್ಲಾ ಒಮ್ಮೆಲೇ ವೇದಿಕೆ ಏರಿದರು. ಇದರಿಂದ ವೇದಿಕೆ ಒಂದು ಕ್ಷಣ ದೊಂಬಿಯಾಗಿದ್ದು ಸುಳ್ಳಲ್ಲ.

ನಾ ಮುಂದು ತಾ ಮುಂದು ಎಂದು ಸಿಎಂಗೆ ಶುಭಕೋರಿ ಫೋಟೋಗೆ ಫೋಸ್‌ ಕೊಡಲು ನುಗ್ಗುತ್ತಲೇ ಇದ್ದಾರೆ. ಇದರಿಂದ ಸಿಟ್ಟಾದ ಅಂಬರೀಶ್‌ ಮೈ ಎತ್ತಿಕೊಂಡು, “ಏಯ್‌ ಹೋಗ್ರೋ ಸಾಕು, ಎಲ್ಲಾ ಹೋಗ್ರೋ, ಹೇ ನೀನ್ಯಾಕೆ ನುಗ್ತಿಯಾ, ಬಾ ಕೆಳಗಡೆ … ಏಯ್‌ ಕಳಿಸ್ರೋ ಅವನ್ನ ಆಚೆಗೆ … ಚಿನ್ನೇಗೌಡ್ರೆ ಬನ್ನಿ ನೀವು ಓಟಿಗೆ ನಿಂತಿದ್ದೀರೆಂದು ಗೊತ್ತು …’ ಎಂದು ನಗುತ್ತಲೇ ಗದರುತ್ತಾ ವೇದಿಕೆಯಲ್ಲಿದ್ದ ಅಷ್ಟೂ ಮಂದಿಯನ್ನೂ ಕೆಳಗಿಳಿಸಿದರು.

ಅಂಬಿ ಸ್ಟೈಲ್‌ ನೋಡಿ, ಸಿಎಂ ಕುಮಾರಸ್ವಾಮಿ ನಗುತ್ತಿದ್ದರು. ಇಷ್ಟಕ್ಕೆ ಅಂಬಿ ಸಿಟ್ಟು ನಿಲ್ಲಲಿಲ್ಲ. ತಾನು ಭಾಷಣ ಮಾಡಲಾರಂಭಿಸಿದಾಗ ಪಕ್ಕದ ಹಾಲ್‌ನಿಂದ ಮೈಕ್‌ ಸೌಂಡ್‌ ಜೋರಾಗಿ ಕೇಳಿಬರುತ್ತಿತ್ತು. ಆಗ “ಯಾವನೋ ಅವ್ನು ಡೋರ್‌ ಕ್ಲೋಸ್‌ ಮಾಡಲೇ … ಹೇ ನೀನ್ಯಾಕೆ ಮೇಲೆ ಬಂದೆ, ಹೋಗ್‌’ ಎಂದು ಗದರುತ್ತಲೇ ಭಾಷಣ ಮುಗಿಸಿದರು.

ಯಾರ್‌ ಏನೇ ಅಂದರೂ ಕಿವಿಗೆ ಹಾಕ್ಕೋಬೇಡಹಿರಿಯ ನಟಿ ಜಯಮಲಾ ಈಗ ಸಂಪುಟದಲ್ಲಿ ಸಚಿವೆಯಾಗಿರುವುದು, ವಿಧಾನ ಪರಿಷತ್‌ ನಾಯಕಿಯಾಗಿರುವುದು ಗೊತ್ತೇ ಇದೆ. ಈ ಬಗ್ಗೆಯೂ ಅಂಬಿ ತಮ್ಮದೇ ಶೈಲಿಯಲ್ಲಿ ಮಾತನಾಡಿದರು. “ಇಷ್ಟು ದಿನ ರೀಲ್‌ ನಾಯಕಿಯಾಗಿದ್ದೆ. ಈಗ ರಿಯಲ್‌ ನಾಯಕಿಯಾಗಿದ್ದೀಯಾ. ಖುಷಿಯ ವಿಚಾರ. ಜನ ನೂರು ಮಾತನಾಡಿಕೊಳ್ಳಬಹುದು,

ಆದರೆ ಅದನ್ನು ಕಿವಿ ಒಳಗೆ ಬಿಟ್ಟುಕೊಳ್ಳದೇ ಒಳ್ಳೆಯ ಕೆಲಸ ಮಾಡು. ಡಾ.ರಾಜ್‌ಕುಮಾರ್‌ ಹೇಳ್ಳೋರು, “ನಾನು ಮೇಕಪ್‌ಗೆ ಕೂತರೆ, ಅವಳು ಹಂಗೆ, ಇವನು ಹಿಂಗೆ ಮತ್ತೊಂದು ಇನ್ನೊಂದು ಅಂತ ಹೇಳ್ಳೋರು. ಆದರೆ, ಅದು ಯಾವುದು ನನ್ನ ಕಿವಿಯೊಳಗೆ ಹೋಗುತ್ತಿರಲಿಲ್ಲ. ಎಲ್ಲವನ್ನು ಅಲ್ಲಿಂದಲೇ ಆಚೆ ಕಳುಹಿಸುತ್ತಿದ್ದೆ. ಅದೇ ರೀತಿ ಜಯಮಾಲಾ ಕೂಡಾ ಯಾರು ಏನೇ ಅಂದರೂ ಕಿವಿಗೆ ಹಾಕಿಕೊಳ್ಳದೇ ಒಳ್ಳೆಯ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು. 

ಚಿತ್ರರಂಗದ ಇಂಚಿಂಚು ಗೊತ್ತುಚಿತ್ರರಂಗದ ಸಮಸ್ಯೆ, ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳ ಮುಂದೆ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಇಟ್ಟರು. ಆ ನಂತರ ಮಾತನಾಡಿದ ಅಂಬರೀಶ್‌, “ನಾನು ಚಿತ್ರರಂಗದಲ್ಲಿ 49 ವರ್ಷ ಕಳೆದಿದ್ದೇನೆ. ಇಲ್ಲಿನ ಸಣ್ಣ ಸಣ್ಣ ಅಂಶಗಳೂ ಗೊತ್ತು. ಚಿತ್ರರಂಗದ ಒಂದೊಂದು ಸೆಂಟಿಮೀಟರ್‌ ಕೂಡಾ ಗೊತ್ತು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ.

ಕಲಾವಿದರಿಂದ ಹಿಡಿದು ಸಿನಿಮಾ ಬಿಡುಗಡೆವರೆಗೆ ಸಮಸ್ಯೆ ಇದೆ’ ಎಂದ ಅಂಬಿ ಹಿಂದೆ ಕೆ.ಜಿ.ರಸ್ತೆಯಲ್ಲಿದ್ದ ಚಿತ್ರಮಂದಿರಗಳನ್ನು ನೆನಪಿಸುತ್ತಾ, “ಆಗ ಕೆ.ಜಿ.ರಸ್ತೆಯಲ್ಲಿ ಅಷ್ಟೊಂದು ಚಿತ್ರಮಂದಿರಗಳಿದ್ದರೂ ಸರಿಯಾಗಿ ಕನ್ನಡಕ್ಕೆ ಥಿಯೇಟರ್‌ ಸಿಗುತ್ತಿರಲಿಲ್ಲ. ಒಂದರಲ್ಲಿ ಹಿಂದಿ ಸಿನಿಮಾ ಹಾಕಿದರೆ, ಇನ್ನೊಂದರೆ ಸೆಕ್ಸ್‌ ಪಿಕ್ಚರ್‌ ಹಾಕುತ್ತಿದ್ದರು. ಮತ್ತೊಂದರಲ್ಲಿ ತಮಿಳು..

ಈ ತರಹದ ಸ್ಪರ್ಧೆಯಲ್ಲೇ ಬಿಡುಗಡೆ ಮಾಡಬೇಕಿತ್ತು. ಮೂರನೇ ಕ್ಲಾಸ್‌ ಓದಿದ ಡಾ.ರಾಜ್‌ಕುಮಾರ್‌ ಇತಿಹಾಸನೇ ಬರೆದುಬಿಟ್ಟರು. ಆದರೆ, ಕರ್ನಾಟಕದ, ಈ ಬೆಂಗಳೂರಿನ ಹೃದಯ ಭಾಗವಾಗಿದ್ದ ಎಂ.ಜಿ.ರಸ್ತೆಯಲ್ಲಿ ಅವರ ಒಂದು ಪೋಸ್ಟರ್‌ ಹಾಕಲಾಗಲಿಲ್ಲ. ಆ ತರಹದ ಸನ್ನಿವೇಶದಲ್ಲಿ ಕನ್ನಡ ಚಿತ್ರರಂಗ ಬೆಳೆದು ಬಂದಿದೆ’ ಎನ್ನುತ್ತಾ ಚಿತ್ರರಂಗ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.