ಕೊಟ್ಟ ಮಾತು ತಪ್ಪಿದ ಕಾರ್ಗಿಲ್‌ ಕಂಪನಿ: ರಾಮಪ್ಪ


Team Udayavani, Jun 23, 2018, 9:56 AM IST

davanagere-2.jpg

ಹರಿಹರ: ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುವುದಾಗಿ ಹೇಳಿದ್ದ ಕಾರ್ಗಿಲ್‌ ಕಂಪನಿ ಅಧಿಕಾರಿಗಳು ಮಾತಿಗೆ ತಪ್ಪಿದ್ದಾರೆ ಎಂದು ಶಾಸಕ ಎಸ್‌. ರಾಮಪ್ಪ ಆರೋಪಿಸಿದರು.

ಮಲೆಬೆನ್ನೂರಿನಿಂದ ನಗರಕ್ಕೆ ಬರುವ ಮಾರ್ಗ ಮಧ್ಯೆ ಶುಕ್ರವಾರ ನಗರ ಹೊರವಲಯದ ಕಾರ್ಗಿಲ್‌ ಕಾರ್ಖಾನೆಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಹಿಂದೆ ಕಂಪನಿ ಉದ್ಘಾಟನೆಗೆ ಬಂದಿದ್ದ ಅಂದಿನ ಸಿಎಂ ಸಿದ್ದರಾಮಯ್ಯ ಸ್ಥಳೀಯರಿಗೆ ಉದ್ಯೋಗ ನೀಡಲು ಸೂಚಿಸಿದ್ದಕ್ಕೆ ತಲೆಯಾಡಿಸಿ ಒಪ್ಪಿಕೊಂಡಿರಿ. ಆದರೆ ಈಗ ನಮ್ಮವರನ್ನು ಕಡೆಗಣಿಸಿ ಹೊರ ರಾಜ್ಯದವರಿಗೆ ಮಣೆ ಹಾಕುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ಪ್ರದೇಶದಲ್ಲಿ ಯಾವುದೆ ಕಾರ್ಖಾನೆ ಆರಂಭಿಸಿದರೆ ಕೈಗಾರಿಕೆ ನಿಯಮಾವಳಿ ಪ್ರಕಾರ ಸ್ಥಳೀಯರಿಗೆ ಶೇ. 60ರಷ್ಟು ಉದ್ಯೋಗ ನೀಡುವುದು ಕಡ್ಡಾಯ. ಆದರೂ ಸಹ ನೀವು ಕಾನೂನು, ಮಾಜಿ ಸಿಎಂ ಸೂಚನೆಯನ್ನು ಗಾಳಿಗೆ ತೂರಿ ಸ್ಥಳೀಯರಿಗೆ ಅನ್ಯಾಯ ಮಾಡುತ್ತಿದ್ದೀರಲ್ಲ ಎಂದು ಕಂಪನಿ ಅಧಿಕಾರಿಗಳನ್ನು ತೀಕ್ಷ್ಣವಾಗಿ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಂಪನಿ ಅಧಿಕಾರಿಗಳಾದ ಬಲ್ಲಾಳ್‌ ಹಾಗೂ ಮತ್ತಿತರರು, ಕಾರ್ಖಾನೆಯ ಒಟ್ಟು ಕಾರ್ಮಿಕರಲ್ಲಿ ಸ್ಥಳೀಯರ ಸಂಖ್ಯೆಯೇ ಹೆಚ್ಚಿದೆ. ಹೊರ ರಾಜ್ಯದವರು ಕಡಿಮೆ ಸಂಖ್ಯೆಯಲ್ಲಿದ್ದು, ಅಗತ್ಯ ಕೌಶಲ ಹೊಂದಿರುವುದರಿಂದ ಅನಿವಾರ್ಯವಾಗಿ ಅವರನ್ನು ನೇಮಿಸಿಕೊಂಡಿದ್ದೇವೆ ಎಂದು ಸ್ಪಷ್ಟೀಕರಣ ನೀಡಿದರು.

ಆಗ ಶಾಸಕ ರಾಮಪ್ಪ ಸ್ಥಳೀಯರ ವಿವರ ಕೇಳಿದಾಗ, ಕಾರ್ಖಾನೆ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳ ಸಿಬ್ಬಂದಿ ಮಾಹಿತಿ ನೀಡತೊಡಗಿದರು. ಕೂಡಲೆ ರಾಮಪ್ಪ, ಸ್ಥಳೀಯರು ಎಂದರೆ ನಮ್ಮ ರಾಜ್ಯದವರು ಎಂದಲ್ಲ. ಕಂಪನಿಗೆ ಭೂಮಿ ನೀಡಿದವರು, ಸುತ್ತಮುತ್ತಲಿನವರು ಹಾಗೂ ಈ ತಾಲೂಕಿನವರು ಎಂದು ಸ್ಪಷ್ಟಪಡಿಸಿ, ಕಿರ್ಲೋಸ್ಕರ್‌ ಕಾರ್ಖಾನೆ ಮುಚ್ಚಿ ನಿರುದ್ಯೋಗ ಕಾಡುತ್ತಿದ್ದು, ತಾಲೂಕಿನ ಜನತೆಗೆ ಆದ್ಯತೆ ನೀಡಿರಿ ಎಂದು ತಾಕೀತು ಮಾಡಿದರು.

ಕಾರ್ಖಾನೆಯನ್ನು ಇನ್ನೂ 30-40 ಎಕರೆ ಪ್ರದೇಶದಲ್ಲಿ ವಿಸ್ತರಣೆ ಮಾಡಲಿದ್ದೇವೆ. ಆ ಸಂದರ್ಭದಲ್ಲಿ ತಾಲೂಕಿನ ಜನತೆಗೆ ಉದ್ಯೋಗ ನೀಡುವಲ್ಲಿ ಆದ್ಯತೆ ನೀಡಲಾಗುವುದೆಂದು ಅಧಿಕಾರಿಗಳು ನುಡಿದರು. ಕಂಪನಿ ಸುತ್ತಲಿನ ಗ್ರಾಮಗಳ ಜನರು ದುರ್ವಾಸನೆ ಕುರಿತು ದೂರುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ದುರ್ವಾಸನೆ ಬೀರದಂತೆ, ಪರಿಸರ ಮಾಲಿನ್ಯವಾಗದಂತೆ ಕ್ರಮ ಕೈಗೊಳ್ಳಿ ಎಂದು ಶಾಸಕರು ಸೂಚಿಸಿದರು.

ಈ ಮುಂಚೆ ದುರ್ವಾಸನೆ ಇತ್ತು. ಆದರೆ ಈಗ ಕ್ರಮ ಕೈಗೊಳ್ಳಲಾಗಿದೆ. ಪರಿಸರ ಮಾಲಿನ್ಯ ಮಂಡಳಿ ಅಧಿಕಾರಿಗಳು ಪರಿಶೀಲಿಸಿ ನಾವು ಕೈಗೊಂಡ ಸುರಕ್ಷತಾ ಕ್ರಮಗಳಿಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದರು. ನಂತರ ಶಾಸಕರು ಕಾರ್ಖಾನೆ ವೀಕ್ಷಿಸಿ ಮಾಲಿನ್ಯ ನಿಯಂತ್ರಣ ಕ್ರಮಗಳ ಮಾಹಿತಿ ಪಡೆದರು.

ನಗರಸಭಾ ಸದಸ್ಯ ಕಿರಣ್‌ ಭೂತೆ, ನಾಗೇನಹಳ್ಳಿ ರೇವಣಸಿದ್ದಪ್ಪ, ವಿಜಯ್‌ ಮಹಾಂತೇಶ್‌ ಇತರರಿದ್ದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.