ಜನಸಾಮಾನ್ಯರ ಸಮಸ್ಯೆ ಪರಿಹಾರಕ್ಕೆ ಆದ್ಯತೆ


Team Udayavani, Jun 23, 2018, 11:26 AM IST

shivamoga.jpg

ಶಿವಮೊಗ್ಗ: ಇದು ಶಾಸಕರ ಕಚೇರಿಯಷ್ಟೇ ಅಲ್ಲ. ಜನ ಸಾಮಾನ್ಯರ ಕಚೇರಿ. ಜನ ಸಾಮಾನ್ಯರು ನೇರವಾಗಿ ಕಚೇರಿಗೆ ಆಗಮಿಸಿ ತಮ್ಮ ಸಮಸ್ಯೆಗಳಿಗೆ ಇಲ್ಲಿ ಪರಿಹಾರ ಪಡೆಯಬಹುದು ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಹೇಳಿದರು.

ನಗರದ ಶಿವಪ್ಪ ನಾಯಕ ಮಾರುಕಟ್ಟೆ ಸಂಕೀರ್ಣದ ಪಕ್ಕದ ಮಹಾನಗರ ಪಾಲಿಕೆ ಕಟ್ಟಡದಲ್ಲಿ ತಮ್ಮ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮನ್ನು ಭಾರೀ ಅಂತರದಿಂದ ಗೆಲ್ಲಿಸಿದ ಸಂಘಟನೆ ಹಾಗೂ ಮತದಾರರ ಋಣ ತೀರಿಸುವುದಾಗಿ ಹೇಳಿದರು.

ಸಂಘಟನೆಯ ಹಿರಿಯರ ಅಪೇಕ್ಷೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸುವೆ. ಮತ ನೀಡಿರುವ ಜನರಿಗೆ ಯಾವುದೇ ಕಾರಣಕ್ಕೂ ಬೇಸರವಾಗಬಾರದು. ಜನರ ಕೆಲಸ ಮಾಡುವುದು ತಮ್ಮ ಕರ್ತವ್ಯ. ಯಾವುದೇ ಸಂಕೋಚವಿಲ್ಲದೆ ಕಚೇರಿಗೆ ಬಂದು ಸಮಸ್ಯೆಗಳನ್ನು ತಿಳಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದರು. 

ಈ ಬಾರಿ ಕ್ಷೇತ್ರದ ಜನತೆ 1.04 ಲಕ್ಷ ಮತ ನೀಡಿದ್ದಾರೆ. ಇಷ್ಟೊಂದು ಮತ ದಿಢೀರ್‌ ಎಂದು ಬಂದಿಲ್ಲ, ಇದಕ್ಕೆ ಸಂಘದ ಹಿರಿಯರ ಸುಧೀರ್ಘ‌ ಶ್ರಮ ಇದೆ. ಹಿಂದೆ ಬಿಜೆಪಿಗೆ ಅಭ್ಯರ್ಥಿಗಳೇ ಸಿಗುತ್ತಿರಲಿಲ್ಲ, ಹಿರಿಯರ ಶ್ರಮದಿಂದ ಈಗ
ಪಕ್ಷಕ್ಕೆ ಭಾರೀ ಅಂತರದ ಗೆಲುವು ಸಿಗುತ್ತಿದೆ. ಈ ಬಾರಿ ಕ್ಷೇತ್ರದಲ್ಲಿ ಹಿಂದುತ್ವ, ಸಂಘಟನೆ ಹಾಗೂ ಮೋದಿಗಾಗಿ ಜನರು ಮತ ನೀಡಿದ್ದಾರೆ ಎಂದರು.

ಕಾರ್ಯಾಲಯ ಉದ್ಘಾಟಿಸಿ ಆರ್‌ಎಸ್‌ಎಸ್‌ ಹಿರಿಯ ಕಾರ್ಯಕರ್ತ ನಾಗಭೂಷಣ ಭಟ್‌ ಮಾತನಾಡಿ, ಈ ಬಾರಿಯ ಚುನಾವಣೆ ಗಮನಿಸಿದರೆ ಹಿಂದೂ ಸಮಾಜ ಒಂದಾಗಿದೆ, ಕೆಳ ಮಟ್ಟಕ್ಕೂ ಬಿಜೆಪಿ ತಲುಪಿದೆ ಎಂಬುದು ತಿಳಿದುಬರುತ್ತದೆ. ಈಶ್ವರಪ್ಪನವರು ಎಲ್ಲಾ ಜನರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಹಾರೈಸಿದರು.

ಆರ್‌ಎಸ್‌ಎಸ್‌ನ ಮತ್ತೋರ್ವ ಹಿರಿಯ ಕಾರ್ಯಕರ್ತ ಭ.ಮ. ಶ್ರೀಕಂಠಯ್ಯ ಮಾತನಾಡಿ, ದೇಶದ ಹಿತಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿ ಮತ್ತೂಮ್ಮೆ ದೇಶದ ಪ್ರಧಾನಿಯಾಗುವಂತೆ ಈಗಿಂದಲೇ ಕಾರ್ಯಕರ್ತರು ಕೆಲಸ ಮಾಡಬೇಕು. ಮುಂದಿನ ಮಹಾಯುದ್ಧಕ್ಕೆ ಸಿದ್ಧರಾಬೇಕು ಎಂದು ಕರೆನೀಡಿದರು.

ಎಂ.ಬಿ. ಭಾನುಪ್ರಕಾಶ್‌ ಮಾತನಾಡಿ, ಶಾಸಕರ ಕಚೇರಿ ಜನರ ಕೆಲಸ ಮಾಡುವ ದೇವಸ್ಥಾನವಾಗಲಿ.
ಜನ ಸಾಮಾನ್ಯರಿಗೆ ಸದಾ ಕಚೇರಿ ತೆರೆದಿರಲಿ. ಸಾಮಾನ್ಯರ ಪಕ್ಷ ನಮ್ಮದು. ಜನಸಾಮಾನ್ಯರ ನಾಯಕ ಈಶ್ವರಪ್ಪ. ತಮ್ಮ ಪ್ರಯತ್ನ ಹಾಗೂ ಸಂಘಟನೆ ಶ್ರಮದಿಂದ ಉನ್ನತ ಸ್ಥಾನಗಳನ್ನು ಪಡೆಯುತ್ತಾ ಬಂದಿದ್ದಾರೆ ಎಂದರು.
ವಿಧಾನ ಪರಿಷತ್‌ ಸದಸ್ಯ ಅರುಣ್‌ ಷಾಪುರ, ಶಾಸಕ ಅಶೋಕನಾಯ್ಕ, ಬಿಜೆಪಿ ಪ್ರಮುಖರಾದ ಎಸ್‌.ಎನ್‌. ಚನ್ನಬಸಪ್ಪ, ನಾಗರಾಜ್‌, ಈಶ್ವರಪ್ಪನವರ ಪತ್ನಿ ಜಯಲಕ್ಷ್ಮೀ ,ಪುತ್ರ ಹಾಗೂ ಜಿಪಂ ಸದಸ್ಯ ಕಾಂತೇಶ್‌, ಸೊಸೆ ಶಾಲಿನಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.