ಪ್ರಕೃತಿ ವಿಕೋಪಗಳಿಗೆ ಪರಿಸರ ನಾಶ ಕಾರಣ


Team Udayavani, Jun 23, 2018, 3:33 PM IST

bidar-2.jpg

ಬಸವಕಲ್ಯಾಣ: ಆಧುನಿಕತೆ ಹೆಸರಿನಲ್ಲಿ ಪ್ರತಿನಿತ್ಯ ನಡೆಯುತ್ತಿರುವ ಪರಿಸರ ನಾಶವೇ ಪ್ರಕೃತಿ ವಿಕೋಪಗಳಿಗೆ ಮೂಲ ಕಾರಣ ಎಂದು ಖೇರ್ಡಾದ ಶಿವಲಿಂಗೇಶ್ವರ ಸಂಸ್ಥಾನ ಮಠದ ಶ್ರೀ ವಿಶ್ವನಾಥ ಮರಿದೇವರು ಹೇಳಿದರು.

ಖೇರ್ಡಾ ಗ್ರಾಮದ ಶ್ರೀ ಶಿವಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಬಸವಕಲ್ಯಾಣ, ಪರಿಸರ ವಾಹಿನಿ ಬೀದರ ಮತ್ತು ಚಾಲುಕ್ಯ ಶಿಕ್ಷಣ ಸಂಸ್ಥೆಯಿಂದ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಕುರಿತ ಜನಜಾಗೃತಿ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಅವರು, ನೈಸರ್ಗಿಕ ಸಂಪತ್ತು ಸಂರಕ್ಷಣೆಯಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದರು.

ಅಗತ್ಯಕಿಂತ ಹೆಚ್ಚು ಪ್ರಮಾಣದಲ್ಲಿ ವಾಹನ ಬಳಕೆಯಿಂದ ವಾಯು ಮಾಲಿನ್ಯವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಗತ್ಯವಿದ್ದಾಗ ಮಾತ್ರ ವಾಹನ ಬಳಸಬೇಕು. ಆಮ್ಲಜನಕ ಬಿಡುಗಡೆ ಮಾಡುವ ಬೇವು, ಅರಳಿ ಮರಗಳನ್ನ ಅಧಿಕ ಪ್ರಮಾಣದಲ್ಲಿ ಬೆಳಸಬೇಕು. ಮನೆ ಸೇರಿದಂತೆ ಸುತ್ತಲಿನ ಪರಿಸರದಲ್ಲಿ ಸಸಿಗಳನ್ನು ನೆಡುವ ಮೂಲಕ ಖೇರ್ಡಾ ಗ್ರಾಮವನ್ನು ಹಸಿರಿನಿಂದ ಸಮೃದ್ಧ ಗ್ರಾಮವಾನ್ನಾಗಿ ಮಾಡಲು ಪ್ರತಿಯೊಬ್ಬರು ವಿಶೇಷ
ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಪರಿಸರವಾದಿ ಶೈಲೇಂದ್ರ ಕಾವಡಿ ಮಾತನಾಡಿ, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಪ್ರತಿ ವರ್ಷ 80 ಲಕ್ಷ ಟನ್‌ಗಳಷ್ಟು ಪ್ಲಾಸ್ಟಿಕ್‌ ಕಸ ಸಮುದ್ರಗಳಿಗೆ ಸೇರಿ ಸಮುದ್ರದಲ್ಲಿರುವ ಜಲಚರಗಳ ವಿನಾಶಕ್ಕೆ ಕಾರಣವಾಗುತ್ತಿದೆ. ಪ್ಲಾಸ್ಟಿಕ್‌ ವಸ್ತುಗಳ ಬಳಕೆಯಿಂದ ದೂರವಿದ್ದು ಪ್ರತಿಯೊಬ್ಬರು ಪರಿಸರ ಸ್ನೇಹಿ ವಸ್ತುಗಳನ್ನು ಉಪಯೋಗಿಸಬೇಕು ಎಂದರು.

ಪರಿಸರ ವಾಹಿನಿಯಿಂದ ಖೇರ್ಡಾ ಗ್ರಾಮವನ್ನು ದತ್ತು ತೆಗೆದುಕೊಳ್ಳಲಾಗಿದ್ದು, ಪ್ರತಿವರ್ಷ ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಅರಣ್ಯ ರಕ್ಷಕರಾದ ಪ್ರಶಾಂತ ಗುರುಪಾದಯ್ಯ, ಸೂರ್ಯಕಾಂತ ಪಾಟೀಲ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಶಿವಲಿಂಗೇಶ್ವರ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಕುರಿತು ಅಭಿಯಾನ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಸವೇಶ್ವರ ಯುವಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಮಗುವಿಗೊಂದು ಮರ ಶಾಲೆಗೊಂದು ವನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಸಸಿ
ವಿತರಿಸಲಾಯಿತು.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.