“ಯುವ ಸಾಹಿತಿಗಳಿಗೆ ಸಾಮಾಜಿಕ ಕಳಕಳಿ ಬೇಕು’


Team Udayavani, Jun 24, 2018, 6:00 AM IST

ss-0.jpg

ಮಂಗಳೂರು: ಯುವ ಸಾಹಿತಿಗಳಿಗೆ ಸಾಮಾಜಿಕ ಕಳಕಳಿ ಬೇಕು. ಅದನ್ನು ತಮ್ಮ ಲೇಖನ, ಕವನಗಳಲ್ಲಿ ವ್ಯಕ್ತಪಡಿಸಬೇಕು ಎನ್ನುತ್ತಾರೆ ಕೇಂದ್ರ ಸಾಹಿತ್ಯ ಅಕಾಡೆಮಿಯ 2018ರ ಯುವ ಸಾಹಿತ್ಯ ಪ್ರಶಸ್ತಿ ವಿಜೇತ ಕವಿ ವಿಲ್ಮಾ ಬಂಟ್ವಾಳ. ವಿಲ್ಮಾ ಅವರ “ಮುಖ್ಡಿ’ ಕೊಂಕಣಿ ಕವನ ಸಂಕಲನಕಕ್ಕೆ ಪ್ರಶಸ್ತಿಯನ್ನು ಶುಕ್ರವಾರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ್ದು, ಇದು ಕರ್ನಾಟಕಕ್ಕೆ ಸಿಕ್ಕಿದ ಮೊದಲ ಪ್ರಶಸ್ತಿ. ಈ ಹಿನ್ನೆಲೆಯಲ್ಲಿ ಅವರು ಉದಯವಾಣಿಯೊಂದಿಗೆ ಮಾತನಾಡಿದ್ದಾರೆ. 

ವಿಲ್ಮಾ ಪರಿಚಯ
ವಿಲ್ಮಾ ಲವಿನಾ ಡಿ’ಸೋಜಾ ಅವರು ಬಂಟ್ವಾಳದವರು. ವಲೇರಿಯನ್‌ ಮತ್ತು ಲಿಲ್ಲಿ ಡಿ’ಸೋಜಾ ಅವರ ಪುತ್ರಿ. ಮೊಡಂಕಾಪು ಚರ್ಚ್‌ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಬಳಿಕ ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಗಣಿತದಲ್ಲಿ ಎಂಎಸ್ಸಿ ಓದಿದ್ದರು. ಬೆಂಜನಪದವು ಕೆನರಾ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಅವರು ಎಂಜಿನಿಯರ್‌ ವಿಜಯ್‌ ಮೋನಿಸ್‌ ಜತೆ ವಿವಾಹವಾದ ಬಳಿಕ ಬೆಂಗಳೂರಿನಲ್ಲಿದ್ದಾರೆ. ಸದ್ಯ ಬೆಂಗಳೂರಿನ ಸೈಂಟ್‌ ಜೋಸೆಫ್‌ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಅವರು ಎರಡು ತಿಂಗಳ ಹಿಂದಷ್ಟೇ ಗಂಡು ಮಗುವಿನ ತಾಯಿಯಾಗಿದ್ದಾರೆ. ಸದ್ಯ ತವರು ಮನೆಯಲ್ಲಿದ್ದಾರೆ.

ಕೃತಿ ಪರಿಚಯ 
“ಮುಖ್ಡಿ’ ಕವನ ಸಂಕಲನದಲ್ಲಿ 50ರಷ್ಟು ಕೊಂಕಣಿ ಕವನಗಳಿವೆ. ಅದರಲ್ಲಿ ಒಂದು ಕವನದ ಹೆಸರು “ಮುಖ್ಡಿ’. ಅಂದರೆ ಕನ್ನಡದಲ್ಲಿ “ಮುಖವಾಡ’ ಎಂದರ್ಥ. ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ದುಷ್ಪರಿಣಾಮಗಳಿಂದ ಆಗಿರುವ ಅನಾಹುತವನ್ನು ವಿವರಿಸಲು “ಮುಖವಾಡ’ವನ್ನು ಒಂದು ರೂಪಕವಾಗಿ ಇಲ್ಲಿ ಬಳಸಲಾಗಿದೆ. 

“ಮುಖ್ಡಿ’ ಕವನ ಸಂಕಲನದ ಬಗ್ಗೆ ಏನು ಹೇಳುವಿರಿ?
ಇದು ನನ್ನ ಚೊಚ್ಚಲ ಹಾಗೂ ಏಕಮಾತ್ರ ಕವನ ಸಂಕಲನ. ನಾನು ಕನ್ನಡ ಲಿಪಿಯಲ್ಲಿ ಬರೆಯುತ್ತೇನೆ. ಗೋವಾ ಕೊಂಕಣಿ ಅಕಾಡೆಮಿ ಈ ಚೊಚ್ಚಲ ಕೊಂಕಣಿ ಕೃತಿ ಪ್ರಕಟನೆಗೆ ಪ್ರೋತ್ಸಾಹ ನೀಡಿದೆ. ನನ್ನ ಕವನಗಳನ್ನು ಕವಿ ಮೆಲ್ವಿನ್‌ ರೊಡ್ರಿಗಸ್‌ ಅವರು ದೇವನಾಗರಿಗೆ ಲಿಪ್ಯಂತರ ಮಾಡಿ ಅಕಾಡೆಮಿಗೆ ಕಳುಹಿಸಿದ್ದರು. ಬಳಿಕ 2014ರಲ್ಲಿ ಅದನ್ನು ಪ್ರಕಟಿಸಿತ್ತು. ಅದೇ ವರ್ಷ ಗೋವಾದ ಕಾಣಕೋಣದಲ್ಲಿ ನಡೆದ ಯುವ ಕೊಂಕಣಿ ಸಾಹಿತ್ಯ ಸಮ್ಮೇಳನದಲ್ಲಿ  ಈ ಕೃತಿ ಅನಾವರಣಗೊಂಡಿತ್ತು. 

ಸಾಹಿತ್ಯದ ಬಗ್ಗೆ ಆಸಕ್ತಿ ಹುಟ್ಟಿದ್ದು ಹೇಗೆ?
ಬಾಲ್ಯದಲ್ಲಿ  ಮನೋರಂಜನೆಗೆ ರೇಡಿಯೋ ಮತ್ತು ಪುಸ್ತಕಗಳು ಮಾತ್ರ ಲಭ್ಯವಾಗುತ್ತಿತ್ತು. ಕೊಂಕಣಿ ಪತ್ರಿಕೆಗಳನ್ನು ತಂದೆ ಮನೆಗೆ ತರಿಸುತ್ತಿದ್ದರು. ಹೀಗಾಗಿ ಹೆಚ್ಚು ಓದುತ್ತಿದ್ದೆ. ಕನ್ನಡ ಮಾಧ್ಯಮದಲ್ಲಿ ಕಲಿತಿದ್ದರಿಂದ ಕನ್ನಡ ಮತ್ತು ಕೊಂಕಣಿ ಪುಸ್ತಕಗಳನ್ನು ಓದುತ್ತಿದ್ದಂತೆ ಸಾಹಿತ್ಯದಲ್ಲಿ ಅಭಿರುಚಿ ಹುಟ್ಟಿತು. 8ನೇ ತರಗತಿಯಲ್ಲಿದ್ದಾಗಲೇ ಕವನ, ಲೇಖನ ಬರೆಯಲು ಆರಂಭಿಸಿದ್ದೆ. ಕೊಂಕಣಿಯಲ್ಲಿ ಹೆಚ್ಚು ಬರೆದಿದ್ದೇನೆ. 50ಕ್ಕೂ ಮಿಕ್ಕಿ ಕವನಗಳನ್ನು ಮತ್ತು ಅನೇಕ ಲೇಖನಗಳನ್ನು ಬರೆದಿದ್ದೇನೆ. 

ಸಾಹಿತ್ಯದಲ್ಲಿ ಆಸಕ್ತಿ ಇದ್ದರೂ ಗಣಿತದತ್ತ ಒಲವು ಹೇಗೆ ಹುಟ್ಟಿತು?
ಸಾಹಿತ್ಯದ ಜತೆಗೆ ಗಣಿತದಲ್ಲಿಯೂ ಆಸಕ್ತಿ ಇತ್ತು. ಹಾಗಾಗಿ ಗಣಿತದಲ್ಲಿ ಎಂಎಸ್ಸಿ ಓದಿದೆ. ಈಗ ಗಣಿತದಲ್ಲಿ ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದೇನೆ. ಇತ್ತೀಚೆಗೆ ಇಂಗ್ಲಿಷ್‌ ಮತ್ತು ಕನ್ನಡದ ಕೆಲವು ಆಯ್ದ ಕಥೆಗಳನ್ನು ಕೊಂಕಣಿಗೆ ಅನುವಾದಿಸಲು ಆರಂಭಿಸಿದ್ದೇನೆ. 

ಹೆಚ್ಚು ಆಸಕ್ತಿ ವಿಷಯ ಯಾವುದು?
ಮಹಿಳಾ ಸಶಕ್ತೀಕರಣ ಮತ್ತು ಸಾಮಾಜಿಕ ಕಳಕಳಿಯ ವಿಷಯಗಳ ಬಗ್ಗೆ ನನಗೆ ಹೆಚ್ಚು ಆಸಕ್ತಿ. ನನ್ನ ಬರವಣಿಗೆಯೂ ಈ ವಿಷಯಕ್ಕೆ ಕೇಂದ್ರೀಕೃತವಾಗಿವೆ.  

ಕುಟುಂಬ ಸದಸ್ಯರಿಂದ ಪ್ರೋತ್ಸಾಹ ಹೇಗಿದೆ?
ಪತಿ ನನ್ನ ಬರವಣಿಗೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಅಕಾಡೆಮಿ ಪ್ರಶಸ್ತಿ ಬಂದಿರುವುದು ಸಾಹಿತ್ಯ ಕ್ಷೇತ್ರದಲ್ಲಿ ಇನ್ನಷ್ಟು ಉತ್ಸಾಹದಿಂದ ಮುಂದುವರಿಯಲು ಪ್ರೇರಣೆ ಒದಗಿಸಿದೆ. 

ಯುವ ಲೇಖಕರಿಗೆ ಸಂದೇಶವೇನು? 
ಯುವ ಲೇಖಕರು ಸಮಾಜದ ಆಗುಹೋಗುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿ ತಮ್ಮ ಸಾಹಿತ್ಯದ ಮೂಲಕ ಸಾಮಾಜಿಕ ಜವಾಬ್ದಾರಿ ಪಾಲಿಸಬೇಕು. 

ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.