ಲಾರಿಗಳು ಮುಖಾಮುಖಿ ಢಿಕ್ಕಿ, ಹೆದ್ದಾರಿ ಬಂದ್‌


Team Udayavani, Jun 24, 2018, 6:00 AM IST

ss-34.jpg

ಮಡಂತ್ಯಾರು: ಮಂಗಳೂರು – ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಅರ್ತಿಲ ಸಮೀಪ ಶನಿವಾರ ಬೆಳಗ್ಗೆ ಲಾರಿಗಳು  ಢಿಕ್ಕಿಯಾಗಿ  ಸುಮಾರು 3 ಗಂಟೆ ಸಂಚಾರ ಸ್ಥಗಿತವಾಗಿತ್ತು. ಬೆಳ್ತಂಗಡಿ ಕಡೆಯಿಂದ ಮಂಗ ಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಮಂಗಳೂರಿನಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ಲಾರಿ  ಢಿಕ್ಕಿಯಾಗಿತ್ತು.   ಒಂದು ಲಾರಿಯಲ್ಲಿ ಚಾಲಕ, ಇನ್ನೊಂದರಲ್ಲಿ ಚಾಲಕ ಮತ್ತು ಕ್ಲೀನರ್‌ ಇದ್ದರು. ಚಾಲಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾರಿಗಳೆರಡೂ ನಜ್ಜು ಗುಜ್ಜಾಗಿ ರಸ್ತೆಯ ಮಧ್ಯೆ  ಬಾಕಿ ಯಾದ ಕಾರ ಣ ಸಂಚಾರಕ್ಕೆ  ತಡೆಯಾಗಿತ್ತು. ಪುಂಜಾಲ ಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕ್ರೇನ್‌ ಮೂಲಕ ಲಾರಿಗಳನ್ನು ತೆರವುಗೊಳಿಸಿದರು.

ರಸ್ತೆಯಲ್ಲೇ ಸಿಲುಕಿಕೊಂಡರು
ಸಂಚಾರ ವ್ಯತ್ಯಯವಾದ ಕಾರಣ ಕಚೇರಿಗೆ ಹೋಗುವವರು ಮತ್ತು ವಿದ್ಯಾರ್ಥಿಗಳು ತೀವ್ರ ತೊಂದರೆಗೊಳಗಾದರು.  ಬೆಳ್ತಂಗಡಿಯಿಂದ ಮಡಂತ್ಯಾರು ಪುಂಜಾಲಕಟ್ಟೆ ಶಾಲೆಗೆ ಹೋಗುವ ಕೆಲವು ಮಕ್ಕಳು ನಡೆದು ಕೊಂಡು ಹೋದರು. ಬೆಳ್ತಂಗಡಿ ವಾಣಿ ವಿದ್ಯಾಸಂಸ್ಥೆಯ ವಾಹನ ಬ್ಲಾಕ್‌ ಮಧ್ಯೆ ಸಿಲುಕಿದ್ದು, ಅದರಲ್ಲಿದ್ದ ವಿದ್ಯಾರ್ಥಿಗಳನ್ನು ಮರಳಿ ಮನೆಗೆ  ಬಿಟ್ಟು ಬರಲು ಪ್ರಾಂಶುಪಾಲರು ತಿಳಿಸಿದರು.  

ಶಿರಾಡಿ ರಸ್ತೆ ಬಂದ್‌ನಿಂದ ಸಂಚಾರ ಹೆಚ್ಚು ಶಿರಾಡಿ ರಸ್ತೆ ಬಂದ್‌ ಆದ ಕಾರಣ ಬೆಂಗಳೂರು – ಮಂಗಳೂರು ಹೋಗುವ ವಾಹನಗಳು ಚಾರ್ಮಾಡಿ ರಸ್ತೆಯನ್ನು ಬಳಸುತ್ತಿವೆ. ಪರಿಣಾಮ ಬಿ.ಸಿ. ರೋಡ್‌ – ಉಜಿರೆ ರಸ್ತೆಯಲ್ಲಿ ವಾಹನ ಸಂಚಾರ  ಭಾರೀ  ಹೆಚ್ಚಾಗಿದೆ. ರಾ. ಹೆ.ಆಗಿದ್ದರೂ  ಕೆಲವೆಡೆ  ತುಂಬಾ ಇಕ್ಕಟ್ಟಾಗಿದೆ. ಅರ್ತಿಲ ಸಮೀಪವೂ ರಸ್ತೆ ಕಿರಿದಾಗಿದ್ದು, ಎರಡು ವಾಹನ ಸಂಚರಿಸುವಷ್ಟೇ ಜಾಗವಿದೆ. ಇದರಿಂದಾಗಿ ಇಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಬದಲಿ ರಸ್ತೆ ಬಳಕೆ ಅರ್ತಿಲದಿಂದ ಮದ್ದಡ್ಕವರೆಗೆ ಮತ್ತು ಅರ್ತಿಲದಿಂದ ಕೊಲ್ಪೆದಬೈಲುವರೆಗೆ ಬ್ಲಾಕ್‌ ಆಗಿತ್ತು. ಮಂಗಳೂರಿನಿಂದ ಬರುತ್ತಿದ್ದ ವಾಹನಗಳು ಮಡಂತ್ಯಾರು ಬಳ್ಳಮಂಜ ಕಲ್ಲೇರಿ ರಸ್ತೆಯಾಗಿ ಗುರುವಾಯನಕೆರೆಗೆ ಹೋಗುತ್ತಿತ್ತು. ಬೆಳ್ತಂಗಡಿ ಕಡೆಯ ವಾಹನಗಳು ಕೂಡ ಇದೇ ಮಾರ್ಗವನ್ನು ಬಳಸುತ್ತಿದ್ದವು. 

ವಿದೇಶಕ್ಕೆ ಹೋಗಬೇಕಿದ್ದವರಿಗೆ ಪೊಲೀಸ್‌ ಸಹಾಯ
ವಿದೇಶಕ್ಕೆ ಹೋಗಬೇಕಿದ್ದ ವ್ಯಕ್ತಿಯೊಬ್ಬರು ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿದ್ದು, ಅವರ ಪ್ರಯಾಣಕ್ಕೆ ಪೊಲೀಸ್‌ ಸಿಬಂದಿ ಸೂಕ್ತ ವ್ಯವಸ್ಥೆ ಮಾಡಿದರು.  

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.