ಭುವನೇಶ್ವರದಲ್ಲಿ ಕರ್ಲಾನ್‌ ಘಟಕಕ್ಕೆ ಶಿಲಾನ್ಯಾಸ


Team Udayavani, Jun 24, 2018, 11:05 AM IST

bhuvaneshwar.jpg

ಬೆಂಗಳೂರು: ಭಾರತದ ಮುಂಚೂಣಿ ಮ್ಯಾಟ್ರೆಸ್‌, ಸೋಫಾ ಮತ್ತು ಪೀಠೊಪಕರಣಗಳ ತಯಾರಿಕಾ ಸಂಸ್ಥೆಯಾಗಿರುವ ಕರ್ಲಾನ್‌, ಒಡಿಶಾದ ಭುವನೇಶ್ವರದಲ್ಲಿ ಇತೀ¤ಚೆಗೆ ನೂತನ ತಯಾರಿಕಾ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ಲಾನ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಧಾಕರ್‌ ಪೈ ಅವರು, ನಮ್ಮ ಮ್ಯಾಟ್ರೆಸ್‌, ಸೋಫಾ ಮತ್ತು ಪೀಠೊಪಕರಣಗಳಿಗೆ ಕಳೆದ ಹಲವು ವರ್ಷಗಳಿಂದ ನಿರೀಕ್ಷೆ ಮೀರಿ ಬೇಡಿಕೆ ಬರುತ್ತಿದ್ದು, ಸಂಸ್ಥೆ ಪ್ರಗತಿಯತ್ತ ಸಾಗಿದೆ. ಪೂರ್ವ ಹಾಗೂ ಈಶಾನ್ಯ ಪ್ರದೇಶದಲ್ಲಿ ನಮ್ಮ ಎಲ್ಲ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

ಬೇಡಿಕೆಯನ್ನು ಪೂರೈಸುವ ಉದ್ದೇಶದಿಂದ ಈ ಹೊಸ ಘಟಕ ಸ್ಥಾಪಿಸುತ್ತಿದ್ದೇವೆ. ಒಡಿಶಾ ಸರ್ಕಾರದ ಬೆಂಬಲದಿಂದಾಗಿ ನಮಗೆ ಸುಲಭವಾಗಿ ಭೂಮಿ ದೊರೆತಿದೆ. ಜತೆಗೆ ಮೂಲ ಸೌಕರ್ಯಗಳೂ ಸುಲಭವಾಗಿ ದೊರೆಯುವ ಕಾರಣ ನೂತನ ಘಟಕ ಸ್ಥಾಪನೆಗೆ ಭುವನೇಶ್ವರವನ್ನು ಆಯ್ಕೆ ಮಾಡಿಕೊಳ್ಳಲಾಯಿತು ಎಂದು ತಿಳಿಸಿದರು.

150 ಕೋಟಿ ರೂ. ವೆಚ್ಚ: ನೂತನ ಘಟಕವನ್ನು 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಈ ಹಣವನ್ನು ಕಂಪನಿ ತನ್ನ ಆಂತರಿಕ ಸಂಪನ್ಮೂಲಗಳಿಂದ ಹೂಡಿಕೆ ಮಾಡುತ್ತಿದೆ. ಈ ಹೊಸ ಘಟಕ 20 ಎಕರೆಗೂ ಅಧಿಕ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದು, 2019ರ ಮಾರ್ಚ್‌ ವೇಳೆಗೆ ಉತ್ಪನ್ನಗಳ ತಯಾರಿಕೆಯನ್ನು ಆರಂಭಿಸಲಿದೆ.

ಹೊಸ ಘಟಕದೊಂದಿಗೆ ಕರ್ಲಾನ್‌ ಭಾರತದಲ್ಲಿ ಒಟ್ಟು 10 ತಯಾರಿಕಾ ಘಟಕಗಳನ್ನು ಹೊಂದಿದಂತಾಗಲಿದೆ. ಇಲ್ಲಿ ಸಂಪೂರ್ಣವಾಗಿ ಆಟೋಮ್ಯಾಟಿಕ್‌ ಸ್ಪ್ರಿಂಗ್‌ ಮ್ಯಾಟ್ರೆಸ್‌ ತಯಾರಿಕಾ ಘಟಕ ತಲೆ ಎತ್ತಲಿದ್ದು, ದೇಶದ ಪೂರ್ವ ಮತ್ತು ಈಶಾನ್ಯ ಪ್ರದೇಶಗಳಲ್ಲಿ ಕರ್ಲಾನ್‌ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಭುವನೇಶ್ವರದಲ್ಲಿ ಈ ಘಟಕ ಆರಂಭಿಸಲಾಗುತ್ತಿದೆ.

ಈ ಪ್ರದೇಶದಲ್ಲಿ ಕರ್ಲಾನ್‌ ಪ್ರಸ್ತುತ 157 ಮಳಿಗೆಗಳನ್ನು ಹೊಂದಿದ್ದು, 2019ರ ಮಾರ್ಚ್‌ ವೇಳೆಗೆ ಇವುಗಳ ಸಂಖ್ಯೆ 300ಕ್ಕೆ ಹೆಚ್ಚಿಸುವ ಗುರಿ ಹೊಂದಿದೆ. ದೇಶಾದ್ಯಂತ 10,000 ಕ್ಕೂ ಹೆಚ್ಚು ಡೀಲರ್‌ಗಳ ಜಾಲ, 72 ಶಾಖೆಗಳು ಮತ್ತು 9 ಗೋದಾಮುಗಳನ್ನು ಕರ್ಲಾನ್‌ ಹೊಂದಿದೆ. ಕರ್ನಾಟಕ, ಒಡಿಶಾ, ಮಧ್ಯಪ್ರದೇಶ, ಉತ್ತರಾಂಚಲ ಮತ್ತು ಗುಜರಾತ್‌ ರಾಜ್ಯಗಳಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.