ಮಧ್ಯರಾತ್ರಿ ಸಿಕ್ಕ ಸ್ವಾತಂತ್ರ್ಯಕ್ಕೆ ಸೌದಿ ಮಹಿಳೆಯರ ಚಿಯರ್ಸ್‌


Team Udayavani, Jun 25, 2018, 9:10 AM IST

ban-25-6.jpg

ರಿಯಾದ್‌: ‘ರಾತ್ರಿ 12 ಹೊಡೆಯಲೆಂದು ಗಡಿಯಾರದ ಮುಳ್ಳನ್ನೇ ದಿಟ್ಟಿಸಿಕೊಂಡು ಕುಳಿತಿದ್ದೆ. ಕ್ಷಣ ಕ್ಷಣಕ್ಕೂ ಎದೆಬಡಿತ ಜೋರಾಗುತ್ತಿತ್ತು. 12 ಹೊಡೆದಿದ್ದೇ ತಡ, ಮಹಡಿಯಿಂದ ಇಳಿದು ಬಂದು ಪಾರ್ಕಿಂಗ್‌ ಲಾಟ್‌ ನಲ್ಲಿ ನಿಂತಿದ್ದ ನನ್ನ ಬಿಳಿ ಬಣ್ಣದ ಜಿಎಂಸಿ ಕಾರನ್ನೇರಿ ಹೊರಟೇಬಿಟ್ಟೆ. ಡ್ರೈವರ್‌ ಸೀಟಿನಲ್ಲಿ ಕುಳಿತು ನಾನು ಹುಟ್ಟಿ, ಬೆಳೆದ ನಗರದಲ್ಲೊಂದು ಸುತ್ತು ಹಾಕುವುದು ನನ್ನ ಬಹುವರ್ಷಗಳ ಕನಸಾಗಿತ್ತು. ಆ ಆಸೆ ಇಂದು ಈಡೇರಿತು. ಕಿಂಗ್‌ ಫ‌ಹದ್‌ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಂತೆ ಮೈಯೆಲ್ಲಾ ರೋಮಾಂಚನದ ಅನುಭವ. ಜೀವನದಲ್ಲಿ ಒಮ್ಮೆಯೂ ಈ ರಸ್ತೆಯಲ್ಲಿ ಡ್ರೈವ್‌ ಮಾಡುವ ಅವಕಾಶ ಸಿಗುತ್ತದೆಂದು ಕಲ್ಪಿಸಿಯೂ ಇರಲಿಲ್ಲ’.

ಖಟ್ಟರ್‌ ಸಂಪ್ರದಾಯವಾದಿ ರಾಷ್ಟ್ರವಾದ ಸೌದಿ ಅರೇಬಿಯಾದಲ್ಲಿ ಶನಿವಾರ ಮೊತ್ತಮೊದಲ ಬಾರಿಗೆ ಕಾರು ಚಲಾಯಿಸಿದ ಟಿವಿ ಆ್ಯಂಕರ್‌, ಮೂರು ಮಕ್ಕಳ ತಾಯಿ ಸಮರ್‌ ಅವರ ಸಂತಸದ ನುಡಿಗಳಿವು. ಶನಿವಾರ ಮಧ್ಯರಾತ್ರಿ ಸಿಕ್ಕ ಸ್ವಾತಂತ್ರ್ಯವನ್ನು ಬಳಸಿಕೊಂಡ ಅನೇಕ ಮಹಿಳೆಯರ ಅಭಿಪ್ರಾಯವೂ ಇದೇ ಆಗಿತ್ತು.


ದಿನಸಿ ಅಂಗಡಿಗೆ, ಕಚೇರಿಗೆ, ಸಂಬಂಧಿಗಳು -ಗೆಳೆಯರ ಮನೆಗೆ ಅಥವಾ ಮಕ್ಕಳನ್ನು ಶಾಲೆಗೆ ಬಿಡಲು ಹೋಗುವುದಿದ್ದರೂ ಮಹಿಳೆಯರಿಗೆ ಹಿಂಬದಿ ಸೀಟೇ ಕಾಯಂ ಎಂಬಂತಿದ್ದ ಸೌದಿಯಲ್ಲಿ ಶನಿವಾರದಿಂದ ಮಹಿಳೆಯರಿಗೆ ಚಾಲನಾ ನಿಷೇಧ ತೆರವಾಗಿದೆ. ಬೆರಳೆಣಿಕೆಯಷ್ಟು ಮಹಿಳೆಯರು ಮಧ್ಯರಾತ್ರಿಯೇ ಕಾರು ಚಲಾಯಿಸಿ ಖುಷಿ ಪಟ್ಟಿದ್ದಾರೆ. ವಿಶೇಷವೆಂದರೆ, ಬಹುತೇಕ ಪುರುಷರೂ ಇದನ್ನು ಸ್ವಾಗತಿಸಿದ್ದಾರೆ.

ಹರ್ಷೋದ್ಗಾರ: ಹೆದ್ದಾರಿಯಲ್ಲಿದ್ದ ಕೆಲವು ಯುವಕರು, ಪೊಲೀಸ್‌ ಸಿಬಂದಿ ಕೂಡ ನಮ್ಮನ್ನು ನೋಡಿ ಹರ್ಷೋದ್ಗಾರ ಮಾಡಿದರು. ಥಂಬ್ಸ್ ಅಪ್‌ ಮಾಡಿ ಬೆಂಬಲ ನೀಡಿದರು. ನನಗೆ ಮಾತುಗಳೇ ಹೊರಡುತ್ತಿಲ್ಲ. ಎಷ್ಟು ಖುಷಿಯಾಗುತ್ತಿದೆಯೆಂದರೆ… ಇದು ಕನಸಾ, ನನಸಾ ಎಂದು ಗೊತ್ತಾಗುತ್ತಿಲ್ಲ ಎನ್ನುತ್ತಾರೆ ತಹ್ಲಿಯಾದ ಬೀದಿಯಲ್ಲಿ ಲೆಕ್ಸಸ್‌ ಕಾರನ್ನು ಚಲಾಯಿಸಿದ ಹೆಸ್ಸಾಹ್‌ ಅಲ್‌-ಅಜಾಜಿ.

ಹೋರಾಟಕ್ಕೆ ಸಿಕ್ಕ ಜಯ: 1990ರಲ್ಲಿ ಕೆಲವು ಸಾಮಾಜಿಕ ಕಾರ್ಯಕರ್ತರು ಮಹಿಳೆಯರಿಗೂ ವಾಹನ ಚಾಲನೆಗೆ ಅವಕಾಶ ನೀಡಬೇಕೆಂದು ಹೋರಾಟ ಆರಂಭಿಸಿದ್ದರು. ಈ ಹೋರಾಟಕ್ಕೆ ಶಿಕ್ಷೆಯಾಗಿ ಹಲವು ಕೆಲಸ ಕಳೆದುಕೊಂಡರು, ನಿಂದನೆಗೆ ಗುರಿಯಾದರು ಮಾತ್ರವಲ್ಲ, ಇವರಿಗೆ ಒಂದು ವರ್ಷ ಕಾಲ ವಿದೇಶ ಪ್ರಯಾಣಕ್ಕೂ ನಿಷೇಧ ಹೇರಲಾಯಿತು. ಕಳೆದ ವರ್ಷ ಭಾವೀ ದೊರೆ ಸಲ್ಮಾನ್‌ ಮಹಿಳೆಯರಿಗೆ ಚಾಲನಾ ಪರವಾನಗಿ ನೀಡುವ ಘೋಷಣೆ ಮಾಡುತ್ತಿದ್ದಂತೆ, ಅದಕ್ಕಿದ್ದ ಎಲ್ಲ ವಿರೋಧಗಳೂ ತಣ್ಣಗಾದವು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.