ಬಜೆಟ್ ಮಂಡನೆ ಬಗ್ಗೆ ಗೊತ್ತಿಲ್ಲ; HDK, ದೇವೇಗೌಡರು ಹೇಳೋದೇನು?
Team Udayavani, Jun 25, 2018, 5:11 PM IST
ಬೆಂಗಳೂರು/ಉತ್ತರಕನ್ನಡ: ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಹಾಲಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಜಂಗೀಕುಸ್ತಿ ಮುಂದುವರಿದಿರುವ ನಡುವೆಯೇ ಬಜೆಟ್ ಮಂಡನೆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸೋಮವಾರ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಏತನ್ಮಧ್ಯೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಕುಮಾರಸ್ವಾಮಿಯವರೇ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಸಹಕಾರಿ ಸಂಘಗಳ ಬ್ಯಾಂಕ್ ಅಧ್ಯಕ್ಷರು, ಅಧಿಕಾರಿಗಳ ಜತೆ ಸಭೆ ನಡೆಸಿದ್ದ ಕುಮಾರಸ್ವಾಮಿಯವರು, ಬಜೆಟ್ ಮಂಡನೆ ಬಗ್ಗೆ ನನಗೇನೂ ಗೊತ್ತಿಲ್ಲ. ಲೋಕಸಭಾ ಚುನಾವಣೆ ನಂತರ ಬಜೆಟ್ ಮಂಡಿಸಲಿ ಅಂತ ಕೆಲವರು ಸಲಹೆ ಕೊಟ್ಟಿದ್ದಾರೆ. . ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಬಜೆಟ್ ಮುಂದುವರಿಸೋದು ಕಷ್ಟ. ಅಂದು ಅನುಮೋದನೆ ನೀಡಿದ್ದ ಸುಮಾರು 100 ಮಂದಿ ಶಾಸಕರು ಸೋತಿದ್ದಾರೆ. ಈಗ ಅದಕ್ಕೆ ಹೊಸ ಶಾಸಕರು ಒಪ್ಪಿಗೆ ಕೊಡುತ್ತಾರಾ? ಎಂದು ಪ್ರಶ್ನಿಸಿದ್ದರು.
ಜುಲೈ 5ರಂದು ಬಜೆಟ್ ಮಂಡಿಸುತ್ತಾರೆ: ದೇವೇಗೌಡರು
ಉತ್ತರಕನ್ನಡ ಇಡಗುಂಜಿಗೆ ಆಗಮಿಸಿದ್ದ ಎಚ್.ಡಿ.ದೇವೇಗೌಡರು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಜುಲೈ 5ರಂದು ಕುಮಾರಸ್ವಾಮಿಯೇ ಬಜೆಟ್ ಮಂಡಿಸಲಿದ್ದಾರೆ. ಎರಡೂ ಪಕ್ಷದವರು ಹೊಂದಾಣಿಕೆಯಿಂದ ಸರ್ಕಾರ ನಡೆಸುತ್ತಿದ್ದಾರೆ. ನೀವು ಊಹಿಸಿದಂತೆ ಏನೂ ಆಗಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ