ಕರಾವಳಿ ಬೈಪಾಸ್‌: ವಾಹನ ಸವಾರರಿಗೆ ಹೈವೇ ದಾಟುವುದೇ ಸಾಹಸ


Team Udayavani, Jun 26, 2018, 6:00 AM IST

2406mle1c.jpg

ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಕರಾವಳಿ ಬೈಪಾಸ್‌ ಜಂಕ್ಷನ್‌ನಲ್ಲಿ ನಡೆಯುವ ಫ್ಲೈಓವರ್‌ ಕಾಮಗಾರಿ ನಿಧಾನಗತಿಯಲ್ಲಿ ಆಗುತ್ತಿರುವುದರಿಂದ ಮಲ್ಪೆ ಕಡೆಯ ವಾಹನ ಸವಾರರು ಹೈರಾಣಾಗಿದ್ದಾರೆ. 

ಕಿರಿದಾದ ಸರ್ವಿಸ್‌ ರಸ್ತೆಯಲ್ಲೇ ಎಲ್ಲ ವಾಹನಗಳೂ ಸಾಗುವುದಿಂದ ಟ್ರಾಫಿಕ್‌ ಜಾಮ್‌ ಇಲ್ಲಿನ ದಿನನಿತ್ಯದ ಗೋಳಾಗಿದೆ. ಇದೀಗ ಮಳೆಗಾಲದಲ್ಲಿ  ರಸ್ತೆಯಲ್ಲಿ ಅಲ್ಲಲ್ಲಿ ಹೊಂಡ ಬಿದ್ದು ಮಳೆನೀರು ನಿಂತು ಇನ್ನಷ್ಟು ಸಮಸ್ಯೆಯನ್ನು ತಂದೊಡ್ಡುತ್ತಿದೆ.

ಮಲ್ಪೆ, ಉಡುಪಿ ನಗರ, ಮಂಗಳೂರು, ಕುಂದಾಪುರ ಈ ನಾಲ್ಕು ಪ್ರದೇಶಗಳಿಗೂ ಪ್ರಮುಖ ಸಂಪರ್ಕ ಕೇಂದ್ರವಾದ ಕರಾವಳಿ ಬೈಪಾಸ್‌ನಲ್ಲಿ ಫ್ಲೈಓವರ್‌ ಕಾಮಗಾರಿ 2015ರಲ್ಲಿ ಆರಂಭಗೊಂಡಿದ್ದು ಎರಡು ವರ್ಷ ಕಳೆದಿದೆ. ಆದರೆ ಇನ್ನೂ ಸಂಚಾರಕ್ಕೆ ಮುಕ್ತವಾಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಟ್ರಾಫಿಕ್‌ ಕಿರಿಕ್‌ 
ಉಡುಪಿ, ಮಂಗಳೂರು, ಮಲ್ಪೆ, ಕುಂದಾಪುರ ಸಂಚಾರ ಕೇಂದ್ರೀಕರಿಸಿ ವಾಹನಗಳು ಇಲ್ಲಿ ಸಂಚರಿಸುವುದರಿಂದ ಟ್ರಾಫಿಕ್‌ ಸಮಸ್ಯೆ ಅಧಿಕವಾಗಿದೆ. ಬಹುತೇಕ ಬಸ್ಸುಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಹತ್ತಿಸುವುದರಿಂದಲೂ ಸಮಸ್ಯೆ ಉಲ್ಬಣಿಸುತ್ತಿದ್ದಾರೆ.

ಕುಂದಾಪುರ ಕಡೆಗೆ ಹೋಗುವ ಬಸ್ಸುಗಳು ಈ ಜಂಕ್ಷನ್‌ನಲ್ಲೇ ಬಸ್ಸನ್ನು ನಿಲ್ಲಿಸುವುದರಿಂದ ಆದಿವುಡುಪಿ ಕಡೆಯಿಂದ ಬರುವ ವಾಹನಗಳಿಗೆ ಮುಂದೆ ಹೋಗಲಾಗದೆ ಟ್ರಾಫಿಕ್‌ ಜಾಮ್‌ ಸಮಸ್ಯೆಯಾಗುತ್ತಿದೆ. ಜತೆಗೆ ಕೆಲವೊಮ್ಮೆ ಇಲ್ಲಿ ಕೆಲವು ಅಪಘಾತಗಳೂ ಸಂಭವಿಸಿವೆ. 

ಸುತ್ತುಬಳಸಿ ಹೋಗಬೇಕು
ಬೈಪಾಸ್‌ ಪ್ರದೇಶದಲ್ಲಿ ಒಟ್ಟು 400 ಮೀಟರ್‌ ನಷ್ಟು ರಸ್ತೆ ಕಾಮಗಾರಿಗಾಗಿ ಬಳಸಿಕೊಂಡಿದ್ದು ಅದರಲ್ಲಿ 300 ಮೀಟರ್‌ ಅಳತೆಯಲ್ಲಿ ಫ್ಲೈಓವರ್‌ ನಿರ್ಮಾಣವಾಗಲಿದೆ. ಇದರಿಂದ ವಾಹನ ಸವಾರರು ಸುತ್ತು ಬಳಸಿ ಹೋಗಬೇಕಾಗಿದೆ. 
ಉಡುಪಿಯಿಂದ ಮಲ್ಪೆ ಕಡೆಗೆ ಸಾಗಬೇಕಿರುವ ವಾಹನ ಚಾಲಕರು, ದ್ವಿಚಕ್ರ ಸವಾರರು ಜಂಕ್ಷನ್‌ನಲ್ಲಿ ಎಡಕ್ಕೆ ತಿರುಗಿ 200 ಮೀಟರ್‌ ಸಾಗಿ ಪೆಟ್ರೊಲ್‌ ಬಂಕ್‌ ಸಮೀಪ ಬಲಕ್ಕೆ ತಿರುಗಿ ಮಲ್ಪೆಗೆ ಸಾಗಬೇಕಾಗುತ್ತದೆ. ಅದೇ ರೀತಿ ಮಲ್ಪೆಯಿಂದ ಉಡುಪಿ ಕಡೆಗೆ ಸಾಗಬೇಕಿದ್ದಲ್ಲಿ  ಜಂಕ್ಷನ್‌ನಲ್ಲಿ ಎಡಕ್ಕೆ ತಿರುಗಿ 200 ಮೀಟರ್‌ ಸಾಗಿ ಶಾರದಾ ಹೊಟೇಲ್‌ ಬಳಿ ಬಲಕ್ಕೆ ತಿರುವು ಪಡೆದು ಉಡುಪಿ ಕಡೆಗೆ ಸಾಗಬೇಕಾಗುತ್ತದೆ. ಈ ಮಧ್ಯೆ ಟ್ರಾಫಿಕ್‌ನಲ್ಲಿ ಸಿಲುಕುವುದು, ಹೊಂಡ ಇತ್ಯಾದಿಗಳ ಕಿರಿಕಿರಿಯಿಂದ ಸವಾರರು ಬೇಸತ್ತಿದ್ದಾರೆ.    

ಹೆದ್ದಾರಿಯಲ್ಲಿ  ಹೊಂಡಗಳು
ಮಲ್ಪೆಯಿಂದ ಉಡುಪಿ ಕಡೆ ಸಂಚರಿಸುವಾಗ ಬೈಪಾಸ್‌ನಿಂದ ಮುಂದೆ ಹೋಗಿ ಶಾರದಾ ಹೊಟೇಲ್‌ ಬಳಿ ಬಲಕ್ಕೆ ತಿರುವು ಪಡೆಯುವಾಗ ಹೆದ್ದಾರಿ ಬದಿಯಲ್ಲಿ  ಹೊಂಡ ಇರುವ ಕಾರಣ ವಾಹನ ಚಾಲಕರಿಗೆ  ಅರಿವಿಲ್ಲದೆ ಅಪಾಯ ತಂದೊಡ್ಡುವ ಸಾಧ್ಯತೆ ಇದೆ.  ಅದೇ ರೀತಿ ಉಡುಪಿಯಿಂದ ಮಲ್ಪೆ ಕಡೆಗೆ ಸಾಗುವ ವಾಹನಗಳು ಬಲಕ್ಕೆ ತಿರುಗಿದಾಗ ರಿಕ್ಷಾ ಸ್ಟಾಂಡ್ ಬಳಿಕ ದೊಡ್ಡ ಹೊಂಡ ಸೃಷ್ಟಿಯಾಗಿದೆ.  ಹೆದ್ದಾರಿಯಲ್ಲೆ ಇಷ್ಟು ದೊಡ್ಡ ಹೊಂಡ ಸೃಷ್ಟಿಯಾಗಿದ್ದರೂ ಇಲಾಖೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಶೀಘ್ರ ಕಾಮಗಾರಿ ಮುಗಿಸಲು ಸೂಚನೆ
ಹೆದ್ದಾರಿಯಲ್ಲಿ ಅಪಘಾತಗಳ ಸಾಧ್ಯತೆ, ಸಂಚಾರ ಅವ್ಯವಸ್ಥೆಯ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಜಿಲ್ಲಾಧಿಕಾರಿಗಳು ಮೊನ್ನೆ ನಡೆದ ಸಭೆಯಲ್ಲಿ ಹೆದ್ದಾರಿ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಸೂಚನೆಯನ್ನು ನೀಡಿದ್ದಾರೆ. ಮುಂದೆ ಹೆದ್ದಾರಿಯಲ್ಲಿ ಅಪಘಾತಗಳು ನಡೆದರೆ ಕಾಮಗಾರಿ ನಡೆಸುವ ಸಂಬಂಧಪಟ್ಟ ಸಂಸ್ಥೆಯೇ ಅದಕ್ಕೆ ಹೊಣೆಗಾರರಾಗುತ್ತಾರೆ.  ಈ ಬಗ್ಗೆ ಇಲಾಖೆ ವತಿಯಿಂದ ಅವರಿಗೆ ನೋಟಿಸನ್ನು ಜಾರಿ ಮಾಡಲಾಗುತ್ತಿದೆ.
– ಕುಮಾರಚಂದ್ರ, 
ಹೆಚ್ಚುವರಿ ಪೊಲೀಸ್‌ಅಧೀಕ್ಷಕರು

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.