ವಸತಿ ಯೋಜನೆ ಮನೆ ಶೀಘ್ರ ನಿರ್ಮಿಸಿ


Team Udayavani, Jun 26, 2018, 12:19 PM IST

chitradurga-2.jpg

ನಾಯಕನಹಟ್ಟಿ: ವಸತಿ ಯೋಜನೆ ಫಲಾನುಭವಿಗಳು ತಕ್ಷಣ ಮನೆ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಡಿ. ಭೂತಪ್ಪ ಹೇಳಿದರು.

ಸೋಮವಾರ ನಡೆದ ಪಪಂ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ವಸತಿ ಯೋಜನೆಯಡಿ 516 ಜನರಿಗೆ ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ ಕೇವಲ 372 ಜನರು ಮಾತ್ರ ನಿರ್ಮಾಣ ಕಾರ್ಯ ಆರಂಭಿಸಿದ್ದಾರೆ. ಉಳಿದವರು ದಾಖಲೆಗಳನ್ನು ಒದಗಿಸಲು ಹಾಗೂ ಬುನಾದಿ ನಿರ್ಮಾಣಕ್ಕೆ ಆಸಕ್ತಿ ವಹಿಸುತ್ತಿಲ್ಲ. ಒಮ್ಮೆಲೆ ಎಲ್ಲ ಮನೆಗಳಿಗೆ ಹಣ ಮಂಜೂರು ಮಾಡಲಾಗುತ್ತಿದ್ದು, ಮನೆ ನಿರ್ಮಾಣ ಮಾಡಿಕೊಳ್ಳದೇ ಇರುವುದರಿಂದ ಹಣ ಮಂಜೂರಾತಿ ವಿಳಂಬವಾಗಿದೆ. 

ಪಪಂ ಸದಸ್ಯರು ತಮ್ಮ ವ್ಯಾಪ್ತಿಯ ಫಲಾನುಭವಿಗಳಿಗೆ ಈ ಬಗ್ಗೆ ತಿಳಿ ಹೇಳಬೇಕು. ಮನೆ ನಿರ್ಮಾಣ ಸಾಧ್ಯವಾಗದೇ
ಇರುವ ವ್ಯಕ್ತಿಗಳು ಸೌಲಭ್ಯ ಹಿಂಪಡೆಯುವ ಪತ್ರ ನೀಡಬೇಕು. ಹೀಗಾದಲ್ಲಿ ಇದರ ಅವಕಾಶವನ್ನು ಇತರೆ ಫಲಾನುಭವಿಗಳಿಗೆ ನೀಡಬಹುದು ಎಂದರು.ಸರ್ಕಾರ ಹೊಸದಾಗಿ 300 ಮನೆಗಳಿಗೆ ಮಂಜೂರಾತಿ ನೀಡಿದೆ. ಇದರಲ್ಲಿ 250 ಎಸ್ಟಿ ಹಾಗೂ 50 ಎಸ್ಸಿ ಗುಂಪುಗಳಿಗೆ ನೀಡಲಾಗುವುದು. ಇದರ ಆಯ್ಕೆ ಪ್ರಕ್ರಿಯೆ ತಕ್ಷಣ ಆರಂಭವಾಗಲಿದೆ ಎಂದು ತಿಳಿಸಿದರು.

ಅಂಬೇಡ್ಕರ್‌ ಭವನಕ್ಕೆ ಹಿಂದಿನ ಸರಕಾರ 50 ಲಕ್ಷ ರೂ. ಬಿಡುಗಡೆ ಮಾಡಿದೆ. ಅನುದಾನ ದೊರೆತು ಎರಡು ವರ್ಷ ಕಳೆದರೂ ಹಣ ಬಳಕೆಯಾಗಿಲ್ಲ. ತಕ್ಷಣ ನಿರ್ಮಾಣ ಆರಂಭಿಸಬೇಕು ಎಂದು ಪಪಂ ಸದಸ್ಯೆ ಮಂಜುಳಾ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ, ಎರಡು ನಿವೇಶನಗಳಿದ್ದು, ಎಲ್ಲಿ ನಿರ್ಮಿಸಬೇಕು ಎಂಬ ಗೊಂದಲದಿಂದ ವಿಳಂಬವಾಗಿತ್ತು. ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಅಂಬೇಡ್ಕರ್‌ ಕಾಲೋನಿಯ ಭಜನಾ ಮಂದಿರದ ಬಳಿ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದರು.

ಸರ್ವೆ ನಂ 191 ರಲ್ಲಿನ ನಿವಾಸಿಗಳಿಗೆ ಖಾತೆಗಳನ್ನು ನೀಡಬೇಕೆಂದು ಪಪಂ ಸದಸ್ಯೆ ಷನುಪ್ತ ಯಾಸ್ಮಿನ್‌ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕಂದಾಯ ನಿರೀಕ್ಷಕ ಶಿವಕುಮಾರ್‌, ಸರ್ಕಾರದ ಆದೇಶದಂತೆ ಸದರಿ ಪ್ರದೇಶದ ನಿವೇಶನಗಳನ್ನು ನೀಡುವುದಕ್ಕೆ ಸಂಬಂಧಿಸಿದ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ
ಸ್ಥಳೀಯ ಗ್ರಾಪಂ ಅನುಮತಿ ನೀಡಿದೆ. ಸರ್ಕಾರದ ಸ್ಪಷ್ಟ ಸೂಚನೆಯಂತೆ ಇಂತಹ ಪ್ರಕರಣಗಳಲ್ಲಿ ನಿರ್ಮಿಸಿದ ಮನೆಗಳಿಗೆ ಖಾತೆ ಮಾಡಲು ಸಾಧ್ಯವಿಲ್ಲ ಎಂದರು. ಮುಖ್ಯಾಧಿಕಾರಿ ಮಾತನಾಡಿ, ಈ ಬಗ್ಗೆ ನಮಗೆ ಗೊಂದಲವಿದೆ. ಇದನ್ನು ಪರಿಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.

ಪಪಂ ಸದಸ್ಯ ಮನ್ಸೂರ್‌ ಶುದ್ಧ ಕುಡಿಯುವ ನೀರಿನವ್ಯವಸ್ಥೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಾಧಿಕಾರಿ ಭೂತಪ್ಪ, ಪಟ್ಟಣಕ್ಕೆ ವಾಣಿವಿಲಾಸ ಸಾಗರದ ನೀರು ಪೂರೈಕೆಯಾಗುತ್ತಿದೆ. ಆದರೆ ಇದಕ್ಕೆ ಸೂಕ್ತವಾದ ಶುದ್ಧೀಕರಣ ಘಟಕವಿಲ್ಲ. ಆದ್ದರಿಂದ ಶುದ್ಧ ಕುಡಿಯುವ ನೀರು ಪೂರೈಕೆ 1.5 ಕೋಟಿ ರೂ.ಗಳ ಟೆಂಡರ್‌ ಕರೆಯಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದರು.

ಪಪಂ ಅಧ್ಯಕ್ಷೆ ನೀಲಮ್ಮ, ಸದಸ್ಯರಾದ ಮಂಜುಳಾ,ಬೋರಮ್ಮ, ನಾಗರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.