ಮದ್ದುಗುಡ್ಡೆ: ತೋಡಿನಂತಾದ ರಸ್ತೆ, ಸಂಚಾರಕ್ಕೆ ತೊಂದರೆ


Team Udayavani, Jun 27, 2018, 2:30 AM IST

water-road-26-6.jpg

ಕುಂದಾಪುರ: ಪುರಸಭೆ ವ್ಯಾಪ್ತಿಯ ಮದುಗುಡ್ಡೆ ವಾರ್ಡಿನ ರಸ್ತೆಯೊಂದರಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿಯಿಲ್ಲದ ಕಾರಣ ಮಳೆ ನೀರೆಲ್ಲ ರಸ್ತೆಯಲ್ಲಿಯೇ ಹರಿದು ಹೋಗುತ್ತಿರುವುದರಿಂದ ಶಾಲಾ ಮಕ್ಕಳ ವಾಹನ ಸೇರಿದಂತೆ ಈ ಭಾಗದ ಅನೇಕ ಮಂದಿ ತೊಂದರೆ ಅನುಭವಿಸಿದ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಕುಂದಾಪುರದೆಲ್ಲಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮದ್ದುಗುಡ್ಡೆ ರಸ್ತೆಯಲ್ಲಿ ತೋಡು ಹಾಗೂ ರಸ್ತೆಯ ಅಂತರ ತಿಳಿಯದೇ ವಾಹನದ ಚಕ್ರ ತೋಡಿಗೆ ಬಿದ್ದಿದೆ. ಅದಲ್ಲದೆ ಶಾಲಾ ಮಕ್ಕಳ ವಾಹನವು ಈ ರಸ್ತೆಯಲ್ಲಿ ಮುಂದಕ್ಕೆ ಚಲಿಸಲಾಗದೆ ನಿಂತಿತ್ತು.

ಆ ಬಳಿಕ ಪರಿಸ್ಥಿತಿಯನ್ನು ಗಮನಿಸಿದ ಸ್ಥಳೀಯರಾದ ಸುರೇಶ್‌ ಖಾರ್ವಿಯವರು ಪುರಸಭೆಯ ನಾಮ ಸದಸ್ಯ ಕೇಶವ್‌ ಭಟ್‌ ಅವರಿಗೆ ವಿಷಯ ತಿಳಿಸಿದ್ದು, ಅವರು ತತ್‌ ಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯ ಗಂಭೀರತೆ ಅರಿತು, ಪುರಸಭೆಯ ಮುಖ್ಯಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಮುಖ್ಯಾಧಿಕಾರಿ ಕೆ. ಗೋಪಾಲಕೃಷ್ಣ ಶೆಟ್ಟಿ ಅವರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಮಳೆ ನೀರು ಹರಿದು ಹೋಗಲು ತುರ್ತು ಕ್ರಮ ಕೈಗೊಂಡಿದ್ದಾರೆ. ಆ ಬಳಿಕವಷ್ಟೇ ಸಂಚಾರ ವ್ಯವಸ್ಥೆ ಸುಗಮಗೊಂಡಿತು. ಸುಗಮ ಸಂಚಾರ ವ್ಯವಸ್ಥೆ ಮಾಡುವಲ್ಲಿ ಕಾರ್ಯ ನಡೆಯುವಾಗ, ಪುರಸಭೆಯ ಅಧಿಕಾರಿಗಳು, ಸಿಬಂದಿ, ಪೌರ ಕಾರ್ಮಿಕರು, ಸ್ಥಳೀಯರು, ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಸಿಬಂದಿ ಸಹಕರಿಸಿದರು.

ಎಚ್ಚರಿಸಿತ್ತು ಉದಯವಾಣಿ

ಮದ್ದುಗುಡ್ಡೆ ವಾರ್ಡಿನಲ್ಲಿ ಚರಂಡಿಯಿಲ್ಲದೆ ಮಳೆಗಾಲದಲ್ಲಿ ನೀರು ಹರಿದು ಹೋಗಲು ಸಮಸ್ಯೆಯಾಗಲಿದೆ ಎನ್ನುವ ಕುರಿತು ‘ಉದಯವಾಣಿ’ ಪತ್ರಿಕೆಯು ತನ್ನ ವಾರ್ಡಿನಲ್ಲಿ ಮಳೆಗಾಲ ಎನ್ನುವ ಸರಣಿ ಅಭಿಯಾನದಲ್ಲಿ ಜೂ. 10 ರಂದು ವರದಿ ಪ್ರಕಟಿಸಿ, ಎಚ್ಚರಿಸಿತ್ತು. ಆದರೆ ಆಗ ಎಚ್ಚೆತ್ತುಕೊಳ್ಳದೇ, ಅನಾಹುತ ಸಂಭವಿಸಿದ ಅನಂತರ ಎಚ್ಚೆತ್ತುಕೊಂಡಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.