ಮಣಿಪಾಲದಿಂದ ಬೆಂಗಳೂರು: ಅಂಗಾಂಗ ರವಾನೆ


Team Udayavani, Jun 27, 2018, 4:40 AM IST

organ-donation-26-6.jpg

ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರ್ಕಳ ತೆಳ್ಳಾರಿನ ನಿರ್ಮಲಾ ಭಟ್‌ (51) ಅವರ ಹೃದಯದ ಕವಾಟಗಳನ್ನು (ಹಾರ್ಟ್‌ ವಾಲ್ವ್) ಮಂಗಳವಾರ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಮತ್ತು ಪಿತ್ತಜನಕಾಂಗವನ್ನು ಬಿಜಿಎಸ್‌ ಆಸ್ಪತ್ರೆಗೆ ಯಶಸ್ವಿಯಾಗಿ ರವಾನಿಸಲಾಯಿತು. ಮಧ್ಯಾಹ್ನದ ವೇಳೆಗೆ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ರವಾನಿಸುವುದೆಂದು ನಿರ್ಧರಿಸಲಾಗಿತ್ತಾದರೂ ಪ್ರತಿಕೂಲ ಹವಾಮಾನದ ಕಾರಣ ರಸ್ತೆ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೊಂಡೊಯ್ದು, ಅನಂತರ ವಿಮಾನದಲ್ಲಿ ಬೆಂಗಳೂರಿಗೆ ಸಾಗಿಸಲಾಯಿತು.

ಗ್ರೀನ್‌ ಕಾರಿಡಾರ್‌ 
ಅಪರಾಹ್ನ 3.30ಕ್ಕೆ ಮಣಿಪಾಲದಿಂದ ಆ್ಯಂಬುಲೆನ್ಸ್‌ನಲ್ಲಿ ಅಂಗಾಂಗಗಳನ್ನು ಕೊಂಡೊಯ್ಯಲಾಯಿತು. ಈ ಸಂದರ್ಭ ಪೊಲೀಸರು ರಸ್ತೆಯುದ್ದಕ್ಕೂ ಇತರ ವಾಹನಗಳ ಓಡಾಟವನ್ನು ನಿರ್ಬಂಧಿಸಿ ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆಗೊಳಿಸಿದ್ದರು. ಬೆಂಗಳೂರಿಗೆ ಹೋಗಬೇಕಾದ ಹೃದಯದ ಕವಾಟಗಳನ್ನು ಒಂದು ಆ್ಯಂಬುಲೆನ್ಸ್‌ನಲ್ಲಿಯೂ ಮಂಗಳೂರು ಕೆಎಂಸಿಗೆ ಕೊಂಡೊಯ್ಯಬೇಕಾಗಿದ್ದ ಕಿಡ್ನಿಯನ್ನು ಇನ್ನೊಂದು ಆ್ಯಂಬುಲೆನ್ಸ್‌ನಲ್ಲಿಯೂ ಸಾಗಿಸಲಾಯಿತು.

ನಡೆದು ಹೋಗುತ್ತಿದ್ದಾಗ ದುರ್ಘ‌ಟನೆ
ನಿರ್ಮಲಾ ಭಟ್‌ ಅವರು ಜೂ. 22ರಂದು ರಾತ್ರಿ 7.30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ ಢಿಕ್ಕಿ ಹೊಡೆದು ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಆದರೆ ಜೂ.25ರಂದು ಮಧ್ಯಾಹ್ನ 12.30ಕ್ಕೆ ಅವರ ಮಿದುಳು ನಿಷ್ಕ್ರಿಯವಾಗಿರುವುದನ್ನು ವೈದ್ಯರ ತಂಡ ಘೋಷಿಸಿತು. ಅವರ ಪತಿ ವಾಸುದೇವ ಭಟ್‌ ಹಾಗೂ ಕುಟುಂಬದ ಸದಸ್ಯರು ಅಂಗಾಂಗ ದಾನಕ್ಕೆ ಇಚ್ಛೆ ವ್ಯಕ್ತಪಡಿಸಿದರು. ಅದರಂತೆ ಟ್ರಾನ್ಸ್‌ಪ್ಲಾಂಟ್‌ ಅಥಾರಿಟಿಯವರ ಉಪಸ್ಥಿತಿಯಲ್ಲಿ ಅಂಗಾಂಗ ದಾನಕ್ಕೆ ವ್ಯವಸ್ಥೆ ಮಾಡಲಾಯಿತು.

ನಮಿಸಿ ಬೀಳ್ಕೊಟ್ಟ ಮನೆಮಂದಿ

ಉಮ್ಮಳಿಸಿ ಬರುತ್ತಿದ್ದ ದುಃಖವನ್ನು ತಡೆದು ನಿಂತಿದ್ದ ಪತಿ ವಾಸುದೇವ ಭಟ್‌, ಪುತ್ರ ಅಶ್ವಿ‌ನ್‌ ಭಟ್‌ ಹಾಗೂ ಮನೆಮಂದಿ ಅಂಗಾಂಗಗಳನ್ನು ಆ್ಯಂಬುಲೆನ್ಸ್‌ನಲ್ಲಿ ಒಯ್ಯುವಾಗ ಆ್ಯಂಬುಲೆನ್ಸ್‌ ಸನಿಹಕ್ಕೆ ಬಂದು ನಮಿಸಿ ಬೀಳ್ಕೊಟ್ಟರು. ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು, ವೈದ್ಯರು ಸ್ಥಳದಲ್ಲಿದ್ದರು.

ಬಂದು ವಾಪಸಾದ ಹೆಲಿಕಾಪ್ಟರ್‌
ಹೃದಯದ ಕವಾಟಗಳನ್ನು ಸಾಗಿಸುವುದಕ್ಕಾಗಿ 3 ಗಂಟೆಯ ಸುಮಾರಿಗೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್‌ ಬಂದಿತ್ತು. ಆದರೆ ಮಳೆಯ ಕಾರಣ ಹೆಲಿಕಾಪ್ಟರ್‌ ಹಾರಾಟ ಅಸಾಧ್ಯ ಎಂಬ ಮಾಹಿತಿ ನೀಡಲಾಯಿತು. ಕೆಲವು ಸಮಯದ ಬಳಿಕ ಹೆಲಿಕಾಪ್ಟರ್‌ ವಾಪಸಾಯಿತು. 

ಏಳು ಮಂದಿಗೆ ಜೀವದಾನ 
ಅಂಗಾಂಗಗಳನ್ನು ನೀಡಿರುವುದರಿಂದ 7 ಮಂದಿಯ ಜೀವ ಉಳಿಸಿದಂತಾಗಿದೆ. ಕಳೆದ 15 ದಿನಗಳ ಹಿಂದೆ ಕೂಡ ಇದೇ ರೀತಿ ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಅಂಗಾಂಗ ರವಾನಿಸಲಾಗಿತ್ತು ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಹೇಳಿದ್ದಾರೆ. 

ಅಮ್ಮ ದೇಹದಾನಕ್ಕೆ ಅಂದೇ ನಿರ್ಧರಿಸಿದ್ದಳು’
ಅಮ್ಮ ತನ್ನ ದೇಹದಾನಕ್ಕೆ ಅಂದೇ ನಿರ್ಧರಿಸಿದ್ದಳು. ಅದಕ್ಕೆ ಅರ್ಜಿಫಾರಂಗಳನ್ನು ಕೂಡ ಸಿದ್ಧಪಡಿಸಿದ್ದಳು. ಈ ಬಗ್ಗೆ ಒಮ್ಮೆ ನನ್ನ ಬಳಿ ಹೇಳಿದ್ದಳು ಕೂಡ. ಆದರೆ ಇಷ್ಟು ಬೇಗ ನಮ್ಮನ್ನು ಅಗಲುತ್ತಾಳೆ ಎಂದು ಗೊತ್ತಿರಲಿಲ್ಲ ಎನ್ನುತ್ತಿದ್ದಂತೆಯೇ ಪುತ್ರ ಅಶ್ವಿ‌ನ್‌ ಅವರ ದುಃಖದ ಕಟ್ಟೆಯೊಡೆಯಿತು. ವೈದ್ಯರು ತಾಯಿಯ ದೇಹದ ಅಂಗಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯುವ ಪ್ರಕ್ರಿಯೆಯಲ್ಲಿ ತೊಡಗಿದ್ದಾಗ ಹೊರಗಡೆ ದುಃಖವನ್ನು ತಡೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಅಶ್ವಿ‌ನ್‌ ‘ತಾಯಿಯಿಂದ ಹಲವರಿಗೆ ಜೀವ ಸಿಗುತ್ತಿದೆ…’ ಎಂದು ಮೌನವಾದರು. ಅಶ್ವಿ‌ನ್‌ ಭಟ್‌ ಇತ್ತೀಚೆಗಷ್ಟೇ ಉದ್ಯೋಗಕ್ಕೆ ಸೇರಿದ್ದಾರೆ. ತಂಗಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

– ಒಂದು ಹೃದಯದ ಕವಾಟ ಬೆಂಗಳೂರು ನಾರಾಯಣ ಹೃದಯಾಲಯದ ಮಗುವಿಗೆ, ಇನ್ನೊಂದು ಅದೇ ಆಸ್ಪತ್ರೆಯ ಬೇರೊಬ್ಬ ವ್ಯಕ್ತಿಗೆ.

– ಒಂದು ಕಿಡ್ನಿ ಮಂಗಳೂರು ಕೆಎಂಸಿ ರೋಗಿಗೆ, ಇನ್ನೊಂದು ಕಿಡ್ನಿ ಮಣಿಪಾಲ ಕೆಎಂಸಿ ರೋಗಿಗೆ.

– ಕಣ್ಣುಗುಡ್ಡೆಗಳು (ಕಾರ್ನಿಯಾ) ಮಣಿಪಾಲ ಕೆಎಂಸಿಯ ಇಬ್ಬರು ರೋಗಿಗಳಿಗೆ

– ಒಂದು ಲಿವರ್‌ ಬೆಂಗಳೂರು ಬಿಜಿಎಸ್‌ ಆಸ್ಪತ್ರೆ ರೋಗಿಗೆ.

ಟಾಪ್ ನ್ಯೂಸ್

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.