ನಾಳೆ ವಿಲನ್‌ ಟೀಸರ್‌


Team Udayavani, Jun 27, 2018, 10:56 AM IST

villian.jpg

ಶಿವರಾಜಕುಮಾರ್‌ ಹಾಗೂ ಸುದೀಪ್‌ ಅಭಿಮಾನಿಗಳು, ನಿರ್ದೇಶಕ ಪ್ರೇಮ್‌ ಅವರಲ್ಲಿ ಅದೆಷ್ಟು ಬಾರಿ “ಟೀಸರ್‌ ಬಿಡುಗಡೆ ಯಾವಾಗ’ ಎಂದು ಕೇಳಿದ್ದರೋ ಲೆಕ್ಕವಿಲ್ಲ. ಆದರೆ, ಪ್ರೇಮ್‌ “ವೆರಿ ಸೂನ್‌ ಬಾಸ್‌’ ಎನ್ನುತ್ತಲೇ ತಮ್ಮ ಕೆಲಸದಲ್ಲಿ ಬಿಝಿಯಾಗಿದ್ದರು. ಅಂತಿಮವಾಗಿ ಈಗ ಟೀಸರ್‌ ಬಿಡುಗಡೆಯ ದಿನಾಂಕವನ್ನು ಪ್ರೇಮ್‌ ಘೋಷಿಸಿದ್ದು, ಜುಲೈ 28 ರಂದು ಅಂದರೆ ನಾಳೆ “ದಿ ವಿಲನ್‌’ ಚಿತ್ರದ ಟೀಸರ್‌ ಬಿಡುಗಡೆಯಾಗಲಿದೆ.

ನಗರದ ಜಿಟಿ ವರ್ಲ್ಡ್ ಮಾಲ್‌ನಲ್ಲಿ ಚಿತ್ರದ ಟೀಸರ್‌ ಬಿಡುಗಡೆಯಾಗಲಿದ್ದು, ತಮ್ಮ ನೆಚ್ಚಿನ ನಟರ ಗೆಟಪ್‌ ನೋಡಲು ಅಭಿಮಾನಿಗಳು ಕಾತುರರಾಗಿರುವುದಂತೂ ಸುಳ್ಳಲ್ಲ. “ದಿ ವಿಲನ್‌’ ಚಿತ್ರದ ಟೀಸರ್‌ ಬಿಡುಗಡೆಗೆ ಚಿತ್ರತಂಡ 500 ರೂಪಾಯಿ ಟಿಕೆಟ್‌ ದರ ನಿಗದಿ ಮಾಡಿದೆ. ನೀವು 500 ರೂಪಾಯಿ ಟಿಕೆಟ್‌ ಪಡೆದು ಟೀಸರ್‌ ವೀಕ್ಷಿಸಬಹುದು. ಎಲ್ಲಾ ಓಕೆ ಟೀಸರ್‌ ಬಿಡುಗಡೆಗೆ ಟಿಕೆಟ್‌ ಯಾಕೆ?

ಅದು ಕೂಡಾ 500 ರೂಪಾಯಿ ಎಂದು ನೀವು ಹುಬ್ಬೇರಿಸಬಹುದು. “ದಿ ವಿಲನ್‌’ ತಂಡ ಟೀಸರ್‌ಗೆ 500 ರೂಪಾಯಿ ನಿಗದಿ ಮಾಡಲು ಒಂದು ಕಾರಣವಿದೆ. ಅದು ಆರ್ಥಿಕ ಸಂಕಷ್ಟದಲ್ಲಿರುವ ನಿರ್ದೇಶಕರಿಗೆ ಸಹಾಯ ಮಾಡುವ ಉದ್ದೇಶ. ಕನ್ನಡ ಚಿತ್ರರಂಗಕ್ಕಾಗಿ ದುಡಿದ ಕೆಲವು ನಿರ್ದೇಶಕರು ಇಂದು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕೆಲವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಿಕಿತ್ಸೆಗೂ ಹಣವಿಲ್ಲದ ಸ್ಥಿತಿಯಲ್ಲಿದ್ದಾರೆ.

ಇದನ್ನು ಮನಗಂಡ ಚಿತ್ರತಂಡ ಟೀಸರ್‌ ಬಿಡುಗಡೆಗೆ ದರ ನಿಗದಿ ಮಾಡಿದೆ. ಇದರಿಂದ ಬಂದ ಹಣವನ್ನು ಆಯ್ದ ನಿರ್ದೇಶಕರಿಗೆ ಅಂದೇ ನೀಡುವ ಉದ್ದೇಶವಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಟೀಸರ್‌ ಬಿಡುಗಡೆ ಮಾಡಲಿದ್ದಾರೆ. ಜೊತೆಗೆ ಅಂದು ಸಂಗ್ರಹವಾದ ಹಣವನ್ನು ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ನೀಡಲಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ನಟ-ನಟಿಯರು, ನಿರ್ದೇಶಕರು, ನಿರ್ಮಾಪಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು, ವಿದೇಶದಲ್ಲಿ ಸುದೀಪ್‌ “ಕೋಟಿಗೊಬ್ಬ-3′ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಎಲ್ಲಾ ಓಕೆ, ಪ್ರೇಮ್‌ ಸಿನಿಮಾ ಯಾವಾಗ ಬಿಡುಗಡೆ ಮಾಡುತ್ತಾರೆಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಪ್ರೇಮ್‌ ಹೇಳುವಂತೆ, ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರ ಬಿಡುಗಡೆ ಮಾಡುವ ಉದ್ದೇಶವಿದೆ. ಆ ನಿಟ್ಟಿನಲ್ಲಿ ಭರದಿಂದ ಸಿನಿಮಾ ಕೆಲಸ ಸಾಗುತ್ತಿದೆ. ಸದ್ಯದಲ್ಲೇ ಚಿತ್ರದ ಆಡಿಯೋ ಬಿಡುಗಡೆ ಕೂಡಾ ನಡೆಯಲಿದೆ. ಚಿತ್ರವನ್ನು ಸಿ.ಆರ್‌.ಮನೋಹರ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.