ರೈತ ಸಕಲ ಜೀವರಾಶಿಗೆ ಅನ್ನ ನೀಡುವ ದೇವರು


Team Udayavani, Jun 27, 2018, 3:58 PM IST

yadagiri.jpg

ಶಹಾಪುರ: ಪ್ರಾಮಾಣಿಕ ದುಡಿಮೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ವ್ಯಕ್ತಿಗಳ ದರ್ಶನದಿಂದ ಮನದ ಮೈಲಿಗೆ ತೊಳೆದು ಹೋಗುತ್ತದೆ ಎಂದು ಲಿಂಗಸೂಗೂರಿನ ಅನುಭಾವಿ ತಿಮ್ಮಗೌಡ ಚಿಲ್ಕಾರಾಗಿ ಹೇಳಿದರು.

ನಗರದ ಬಸವ ಮಾರ್ಗ ಪ್ರತಿಷ್ಠಾನ ಸತ್ಯಂಪೇಟೆ ಲಿಂಗಣ್ಣ ಸತ್ಯಂಪೇಟೆ ಅವರ ವೇದಿಕೆಯಲ್ಲಿ ಆಯೋಜಿಸಿದ್ದ ತಿಂಗಳ ಬಸವ ಬೆಳಕು -76ರ ಸಭೆಯಲ್ಲಿ ಲಿಂ. ಗುರಪ್ಪ ಯಜಮಾನ, ಶಿವಮ್ಮ ತಾಯಿ ಹಾಗೂ ಲಿಂಗಣ್ಣ ಸತ್ಯಂಪೇಟೆ ಅವರ ನೆನಪಿನಲ್ಲಿ ಜರುಗಿದ ಸಭೆಯಲ್ಲಿ ಬಸವ ಬೆಳಕಿನ ಹೊಳೆಯು ಎಂಬ ವಿಷಯ ಕುರಿತು ಅವರು ಮಾತನಾಡಿದರು.

ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ ಪಂಚರಾತ್ರಿ ಎಂದು ಊರೂರು ಸುತ್ತಿ ತತ್ವ ಪ್ರಸಾರ ಮಾಡುವ ಮಠಾಧೀಶರ ಕೊರತೆ ಪ್ರಸ್ತುತ ದಿನಗಳಲ್ಲಿ ಕಾಣುತ್ತಿದೆ. ಬಸವಾದಿ ಶರಣರ ವಚನಗಳ ಓದು ನಮಗರಿವಿಲ್ಲದೆ ಬದುಕು ಕಟ್ಟಿ ಕೊಡುತ್ತದೆ. ಪ್ರಾಮಾಣಿಕತೆಯಿಂದ ಇರುವಂತೆ ಪ್ರೇರೇಪಿಸುತ್ತದೆ. ನೇರ ನಿಷ್ಠುರವಾಗಿ ಬದುಕುವುದಲ್ಲದೆ ಇವನಮ್ಮವ ಇವ ನಮ್ಮವ ಎಂಬ ಭಾವನೆ ಮೊಳೆಯುವಂತೆ ಪ್ರೇರೇಪಿಸುವ ಅಗಾಧವಾದ ಶಕ್ತಿ ವಚನಗಳಲ್ಲಿದೆ ಎಂದರು.

ರೈತ ಸಂಘದ ನಾಗರತ್ನಾ ಪಾಟೀಲ ಮಾತನಾಡಿ, ರೈತ ದೇಶದ ಶಕ್ತಿ. ಸಕಲ ಜೀವರಾಶಿಗಳಿಗೂ ಅನ್ನ ನೀಡುವ ದೇವರು. ಆದರೆ ವಾಸ್ತವವಾಗಿ ಬಹುರಾಷ್ಟ್ರೀಯ ಕಂಪನಿಗಳು ಆತನ ಬದುಕನ್ನು ನುಂಗಿ ಹಾಕಿವೆ ಎಂದು ಬೇಸರ ವ್ಯಕ್ತಪಡಿಸಿದರು. ಬಸವ ಜ್ಯೋತಿ ಪ್ರಜ್ವಲನೆಯನ್ನು ನಿವೃತ್ತ ಶಿರಸ್ತೇದಾರ್‌ ನೀಲಾಂಬಿಕೆ ವಿಶ್ವಾರಾಧ್ಯ ಸತ್ಯಂಪೇಟೆ ವಹಿಸಿದ್ದರು.  

ಸಭೆಯ ಅಧ್ಯಕ್ಷತೆಯನ್ನು ಭಾರತಿ ಶರಣಬಸ್ಸಪ್ಪಗೌಡ ದರ್ಶನಾಪುರ ವಹಿಸಿದ್ದರು. ರಾಜು ಕುಂಬಾರ ಸ್ವಾಗತಿಸಿದರು. ಶಿವಣ್ಣ ಇಜೇರಿ ನಿರೂಪಿಸಿದರು. ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಕು. ವೀರಭದ್ರ, ಸಂಗೀತ ಕಲಾವಿದ ಚಂದ್ರಶೇಖರ ಗೋಗಿ ಅವರನ್ನು ಇದೇ ಸಂದರ್ಭದಲ್ಲಿ ಪ್ರತಿಷ್ಠಾನ ಸನ್ಮಾನಿಸಿತು.

ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾದೇವಪ್ಪ ಗಾಳೆನೋರ ಸ್ವಾಗತ ಗೀತೆ ಹಾಡಿದರು. ಕೊನೆಯಲ್ಲಿ ಚನ್ನಮಲ್ಲಿಕಾರ್ಜುನ ಗುಂಡಾನೋರ ವಂದಿಸಿದರು.

ಸಭೆಯಲ್ಲಿ ಅಡಿವೆಪ್ಪ ಜಾಕಾ, ಅಮರಣ್ಣ ಗುಡಗುಂಟಿ, ಮೋರೆಪ್ಪ ಕರಿಗೇರ, ಹೊನ್ನಾರೆಡ್ಡಿ ವಕೀಲರು, ಶಿವಯೋಗಪ್ಪ ಮುಡಬೂಳ, ಶಿವರುದ್ರ ಉಳ್ಳಿ, ಜಟ್ಟೆಪ್ಪ ಸತ್ಯಂಪೇಟೆ, ಪಂಪಣ್ಣಗೌಡ ಮಳಗ, ಮಲ್ಲಪ್ಪ ನಾಡಗೌಡ ಇದ್ದರು. 

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.