ಹೆದ್ದಾರಿ ಒತ್ತಡ ತಗ್ಗಿಸಲು ವರ್ತುಲ ರಸ್ತೆ ಡಿಪಿಆರ್‌ ಸಿದ್ಧ: ನಳಿನ್


Team Udayavani, Jun 28, 2018, 9:57 AM IST

nalin.png

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರದಿಂದ ಪ್ರಸ್ತಾಪಿಸಿರುವ ಒಟ್ಟು 2,800 ಕೋ.ರೂ. ವೆಚ್ಚದ ಚತುಷ್ಪಥ ಮಾದರಿಯ ವರ್ತುಲ ರಸ್ತೆಯ ಡಿಪಿಆರ್‌ (ವಿಸ್ತೃತ ಯೋಜನಾ ವರದಿ) ಅಂತಿಮ ಹಂತದಲ್ಲಿದೆ. ಮೂಲ್ಕಿಯಿಂದ ಕಿನ್ನಿಗೋಳಿ, ಕಟೀಲು, ಕೈಕಂಬ, ಪೊಳಲಿ, ಬಿ.ಸಿ. ರೋಡ್‌, ಮುಡಿಪು ರಸ್ತೆಯಾಗಿ ತೊಕ್ಕೊಟ್ಟು ಜಂಕ್ಷನನ್ನು ಈ ವರ್ತುಲ ರಸ್ತೆಯು ಸಂಪರ್ಕಿಸಲಿದೆ.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಕಚೇರಿಯಲ್ಲಿ ಬುಧವಾರ ಈ ಯೋಜನೆಯ ರೂಪುರೇಷೆ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಲಹೆಗಾರ ಸಂಸ್ಥೆಯಿಂದ ಸಂಸದರು ಮಾಹಿತಿ ಪಡೆದುಕೊಂಡರು. ಮೂರು ಹಂತಗಳಲ್ಲಿ ಈ ಯೋಜನೆಯು ಅನುಷ್ಠಾನಗೊಳ್ಳಲಿದೆ. ಯೋಜನೆಯ ಸಲಹೆಗಾರ ಸಂಸ್ಥೆ ಸ್ತೂಪ್‌ ಕನ್ಸಲ್ಟೆಂಟ್ಸ್‌ನ ರಾಜೀವ್‌ ಮಾತನಾಡಿ, ಮೊದಲ ಹಂತ ಮೂಲ್ಕಿಯ ಪಡುಪಣಂಬೂರು ಬಳಿಯಿಂದ ಪ್ರಾರಂಭಗೊಂಡು ಕಿನ್ನಿಗೋಳಿ ಮೂಲಕವಾಗಿ ಕಟೀಲಿಗೆ ಬರಲಿದೆ. ಕಿನ್ನಿಗೋಳಿಯಲ್ಲಿ ಪೇಟೆಗೆ ತೊಂದರೆಯಾಗದಂತೆ ಸುಮಾರು 1.5 ಕಿ.ಮೀ. ಉದ್ದದ ಫ್ಲೈಓವರ್‌ ಬೇಕಾಗಬಹುದು. ಮೂರುಕಾವೇರಿ ಜಂಕ್ಷನ್‌ನಲ್ಲಿ ಬಲಕ್ಕೆ ಹೊರಳಿ ರಸ್ತೆ ಮುಂದುವರಿಯಲಿದೆ. ಕಟೀಲಿನಲ್ಲಿ ಪ್ರತ್ಯೇಕ ಸೇತುವೆ ನಿರ್ಮಿಸಬೇಕಿದೆ. ಬಜಪೆಯಲ್ಲಿ ಫ್ಲೈಓವರ್‌ ಇರಲಿದೆ. ಅಲ್ಲಿಂದ ರಸ್ತೆಯು ಕೈಕಂಬಕ್ಕೆ ಬಂದು ಸೇರಲಿದೆ. ಕೈಕಂಬದಲ್ಲಿ ಎನ್‌ಎಚ್‌ 169ರ ಮೇಲ್ಸೇತುವೆಯೂ ಇರಲಿದೆ ಎಂದರು.

 
ಎರಡನೇ ಹಂತದಲ್ಲಿ ಅಡೂರಿನಿಂದ ಪ್ರಾರಂಭಗೊಂಡು ಪೊಳಲಿ ಮೂಲಕ ಬಿ.ಸಿ.ರೋಡ್‌ನ‌ ಹೊಸ ಸೇತುವೆಯ ಬಳಿ ಎನ್‌ಎಚ್‌ 66ಕ್ಕೆ ಟ್ರಂಪೆಟ್‌ ಇಂಟರ್‌ಚೇಂಜ್‌ ಶೈಲಿಯಲ್ಲಿ ಸೇರ್ಪಡೆಗೊಳ್ಳಲಿದೆ. ಈ ಹಂತದಲ್ಲಿ ರಸ್ತೆ ಎನ್‌ಎಚ್‌ 264ನ್ನು ಹಾಯುವಲ್ಲಿ ಅಂಡರ್‌ ಪಾಸ್‌ ನಿರ್ಮಿಸಬೇಕಾಗುತ್ತದೆ.

ಮೂರನೇ ಹಂತವು ಮೆಲ್ಕಾರ್‌ನಿಂದ ಆರಂಭವಾಗಿ ಮುಡಿಪುವಿಗೆ ಬರಲಿದೆ. ಆದರೆ ಈಗಿರುವ ಮುಡಿಪು ಕ್ರಾಸ್‌ಗೆ ಮೊದಲೇ ಇರುವ ಗುಳಿಗದ್ದೆ ಅರ್ಕಾನ ಎಂಬ ಕಚ್ಚಾ ರಸ್ತೆಯನ್ನೇ ಬೈಪಾಸ್‌ ರಸ್ತೆಗೆ ಬಳಸಿಕೊಳ್ಳುವ ಮೂಲಕ ವೆಚ್ಚ ಇಳಿಕೆ ಮಾಡಬಹುದು, ಅಲ್ಲಿಂದ ರಸ್ತೆ ತೊಕ್ಕೊಟ್ಟು ಅಥವಾ ಕೋಟೆಕಾರಿಗೆ ಬಂದು ಸೇರಬಹುದು ಎಂದವರು ಹೇಳಿದರು. 

ಕನಿಷ್ಠ ಭೂಸ್ವಾಧೀನದ ಗುರಿ
ಈ ವರ್ತುಲ ರಸ್ತೆಯ ಉದ್ದ ಒಟ್ಟು 91 ಕಿ.ಮೀ. ಆದರೂ, ಅದರಲ್ಲಿ ರಾಷ್ಟ್ರೀಯ ಹೆದ್ದಾರಿ 169 ಅಗಲೀಕರಣದ ಭಾಗ, ಬಿ.ಸಿ.ರೋಡ್‌-ಅಡ್ಡಹೊಳೆ ಕಾಂಕ್ರೀಟ್‌ ಚತುಷ್ಪಥ ಭಾಗವೂ ಬರುವುದರಿಂದ ಅದನ್ನು ಬಿಟ್ಟು ಸುಮಾರು 74 ಕಿ.ಮೀ. ಮಾತ್ರವೇ ಅಭಿವೃದ್ಧಿ ಪಡಿಸಬೇಕಾಗುತ್ತದೆ. ಹಾಲಿ ಇರುವ ರಸ್ತೆಯನ್ನೇ ಆದಷ್ಟೂ ಬಳಸಿಕೊಳ್ಳಲಾಗುವುದು, ಆದರೆ ಜನದಟ್ಟಣೆ, ಜನವಸತಿ ಪ್ರದೇಶ, ವಾಣಿಜ್ಯ ಪ್ರದೇಶ ಹೆಚ್ಚಿರುವಲ್ಲಿ ಮಾತ್ರವೇ ಫ್ಲೈಓವರ್‌ ಅಥವಾ ಅಂಡರ್‌ ಪಾಸ್‌ ನಿರ್ಮಿಸಲಾಗುವುದು. ಕನಿಷ್ಠ ಭೂಸ್ವಾಧೀನವಾಗುವ ರೀತಿಯಲ್ಲಿ ಈ ರಸ್ತೆ ನಿರ್ಮಾಣಗೊಳ್ಳಲಿದೆ ಎಂದರು. 
ಈಗಿರುವ ರಸ್ತೆ ಇಂಡಿಯನ್‌ ರೋಡ್‌ ಕಾಂಗ್ರೆಸ್‌ನ ಗುಣಮಟ್ಟದ ಮಾದರಿಯಲ್ಲಿಲ್ಲ. ಅಲ್ಲದೆ ಅದಕ್ಕೆ ಯಾವುದೇ ಜ್ಯಾಮಿಟ್ರಿಯೂ ಇಲ್ಲದ ಕಾರಣ ಹಲವೆಡೆ ಸುಧಾರಣೆಗೊಳಪಡಿಸ ಬೇಕಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಲಭ ಸಂಪರ್ಕ ಸಾಧ್ಯ ವಾಗುವ ರೀತಿಯಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ರಿಂಗ್‌ ರಸ್ತೆ ವಿಮಾನ ನಿಲ್ದಾಣದ ಮುಂಭಾಗ ದಲ್ಲೇ ಹಾದು ಹೋಗ ಲಿದ್ದು ಇದರಿಂದ ಆ ಭಾಗದಲ್ಲಿನ ಸಂಚಾರಿ ದಟ್ಟಣೆ ಹಗುರ ಗೊಳ್ಳುವ ನಿರೀಕ್ಷೆ ಇದೆ. ಎಲ್ಲೆಲ್ಲಿ ಆವಶ್ಯಕವೋ ಅಲ್ಲೆಲ್ಲ ಅಂಡರ್‌ ಪಾಸ್‌ ಅಥವಾ ಮೇಲ್ಸೇತುವೆ ನಿರ್ಮಿಸಲಾಗುವುದು ಎಂದವರು ಹೇಳಿದರು. ಶಾಸಕರಾದ ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾಯಕ್‌ ಉಳಿಪಾಡಿ ಉಪಸ್ಥಿತರಿದ್ದರು. 

2021ಕ್ಕೆ  ರಾಷ್ಟ್ರೀಯ ಹೆದ್ದಾರಿ ಕಾರ್ಯ ಪೂರ್ಣ ಗುರಿ
ಕೇಂದ್ರ ಸರಕಾರದ ನಿಯಮಾನುಸಾರ ಎಲ್ಲೆಲ್ಲಿ ಭೂಸ್ವಾಧೀನ ಬೇಕಾಗುತ್ತದೋ ಅಲ್ಲಿ ಅಗತ್ಯ ಪರಿಹಾರ ನೀಡಿ ಭೂಸ್ವಾಧೀನ ಕೈಗೊಳ್ಳಲಾಗುವುದು. 2021ರ ವೇಳೆಗೆ ಈ ಹೆದ್ದಾರಿ ಕಾರ್ಯ ಮುಗಿಯಬೇಕು ಎನ್ನುವುದು ನಮ್ಮ ಲೆಕ್ಕಾಚಾರ. ಇದಕ್ಕಾಗಿ ಎರಡೂವರೆ ವರ್ಷ ಸಮಯ ನಿಗದಿಪಡಿಸಲಾಗಿದೆ. ಇದರ ಜತೆಗೆ ಭಾರತ್‌ ಮಾಲಾ ಯೋಜನೆಯಡಿ ಬಿ.ಸಿ.ರೋಡ್‌-ಸುರತ್ಕಲ್‌ ಮಧ್ಯೆ ಷಟ್ಪಥ ನಿರ್ಮಾಣದ ಬಗ್ಗೆಯೂ ಡಿಪಿಆರ್‌ ಕೆಲಸ ನಡೆಯಲಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದರು. 

ಷಟ್ಪಥ ರಸ್ತೆ ಬಳಿಕ ಟೋಲ್‌ಗೇಟ್‌ ವಿಲೀನ
ಸುರತ್ಕಲ್‌: ರಾಷ್ಟ್ರೀಯ ಹೆದ್ದಾರಿ 66ರ ಬಿ.ಸಿ.ರೋಡ್‌ನಿಂದ ಸುರತ್ಕಲ್‌ ಮುಕ್ಕವರೆಗೆ ಷಟ್ಪಥ ರಸ್ತೆ ಕಾಮಗಾರಿ ಪ್ರಕ್ರಿಯೆ ಸಂಪೂರ್ಣಗೊಂಡು ಟೆಂಡರ್‌ ಹಂತದಲ್ಲಿದೆ. ಬಿ.ಸಿ.ರೋಡ್‌ನಿಂದ ಗುಂಡ್ಯ, ಬೆಂಗಳೂರು ತನಕ ಹೆದ್ದಾರಿ ವಿಸ್ತರಣೆ, ಕಾಂಕ್ರಿಟೀಕರಣ ನಡೆಯಲಿದ್ದು ಬಳಿಕ ಇಲ್ಲಿನ ಟೋಲ್‌ ಗೇಟ್‌ಗಳು ವಿಲೀನವಾಗುವ ಸಾಧ್ಯತೆಯಿದೆ ಎಂದು ಸಂಸದ ನಳಿನ್‌ಕುಮಾರ್‌ ಕಟೀಲು ಹೇಳಿದರು.

ಬುಧವಾರ ಸುರತ್ಕಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರತ್ಕಲ್‌ ಟೋಲ್‌ಗೇಟ್‌ ಟೆಂಡರ್‌ ಅವಧಿ ಇನ್ನೂ ಇದ್ದು ಕಾನೂನು ಪ್ರಕಾರ ನಡೆಯುತ್ತಿದೆ ಏಕಾಏಕಿ ನಿಲ್ಲಿಸಲು ಸಾಧ್ಯವಿಲ್ಲ. ಕುಂದಾಪುರ – ತಲಪಾಡಿ ನಡುವಣ ರಸ್ತೆ ನವಯುಗ್‌ ಮಾಡಿರುವುದರಿಂದ ಎರಡೂ ಕಡೆ ಟೋಲ್‌ಗೇಟ್‌ ಗುತ್ತಿಗೆ ನಿರ್ವಹಣೆಯೂ ಬೇರೆಯಿದೆ ಎಂದರು.

ಸೇತುವೆಗಳ ಪರೀಕ್ಷೆಗೆ ಎನ್‌ಐಟಿಕೆಗೆ ಮನವಿ
ಹಳೆಯ ಸೇತುವೆಗಳು ದುಃಸ್ಥಿತಿಯ ಹಂತದಲ್ಲಿದ್ದು ಇದರ ಸಾಮರ್ಥ್ಯದ ಕುರಿತಾಗಿ ಸಮರ್ಪಕ ವರದಿ ನೀಡುವಂತೆ ಸುರತ್ಕಲ್‌ ಎನ್‌ಐಟಿಕೆ ಸಂಸ್ಥೆಯನ್ನು ಕೇಳಿಕೊಳ್ಳಲಾಗಿದೆ. ವಿಮಾನ ನಿಲ್ದಾಣ ವ್ಯಾಪ್ತಿಯಲ್ಲೂ ಗುಡ್ಡ ಜರಿತ ಸಮಸ್ಯೆಯಾಗಿದ್ದು ಈ ಕುರಿತೂ ಗಂಭೀರವಾಗಿ ಚಿಂತಿಸಲಾಗಿದೆ. ಮಳೆಗಾಲ ಮುಗಿದ ಕೂಡಲೇ ಗುರುಪುರ ಸೇತುವೆ ಕಾಮಗಾರಿ ಆರಂಭಗೊಳ್ಳಲಿದೆ. ಅಲ್ಲಿಯವರೆಗೆ ಸಂಚಾರಕ್ಕೆ ಯೋಗ್ಯವಾಗಿಡುವ ಕೆಲಸ ನಡೆಯಲಿದೆ ಎಂದರು. ಶಾಸಕ ಡಾ| ವೈ. ಭರತ್‌ ಶೆಟ್ಟಿ, ಗಣೇಶ್‌ ಹೊಸಬೆಟ್ಟು, ಪೂಜಾ ಪೈ, ಗುಣಶೇಖರ ಶೆಟ್ಟಿ, ಸುಮಿತ್ರಾ ಕರಿಯಾ, ಅಶೋಕ ಕೃಷ್ಣಾಪುರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.