ಕರಾವಳಿ: ಉತ್ತಮ ಮಳೆ; ಗುಡ್ಡ  ಕುಸಿತ, ಮನೆ ಕುಸಿದು ಮಹಿಳೆಗೆ ಗಾಯ


Team Udayavani, Jun 28, 2018, 10:18 AM IST

rain.png

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿ ಗೆದರಿವೆ. ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಜಿಲ್ಲೆಯ ಅನೇಕ ಕಡೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಸುಬ್ರಹ್ಮಣ್ಯ ಪರಿಸರದಲ್ಲಿ ಬೆಳಗ್ಗಿನಿಂದಲೇ ಸುರಿದ ಭಾರೀ ಮಳೆಗೆ ಕುಮಾರಧಾರಾ ನದಿ ತುಂಬಿ ಹರಿದು ನೆರೆಯಿಂದಾಗಿ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಗೊಂಡಿದೆ.

ಮಂಗಳೂರು, ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ವೇಣೂರು, ಪುಂಜಾಲಕಟ್ಟೆ, ವಿಟ್ಲ, ಮಡಂತ್ಯಾರು, ಕಿನ್ನಿಗೋಳಿ, ಹಳೆ ಯಂಗಡಿ, ಸುರತ್ಕಲ್‌, ಮೂಲ್ಕಿ, ಉಡುಪಿ, ಮಣಿಪಾಲ, ಕುಂದಾ ಪುರ, ಬೈಂದೂರು, ಕಾಪು, ಪಡುಬಿದ್ರಿ, ಶಿರ್ವ, ಉಪ್ಪುಂದ, ತೆಕ್ಕಟ್ಟೆ ಯಲ್ಲಿ ಉತ್ತಮ ಮಳೆಯಾಗಿದೆ. 

ಬುಧವಾರ ರಾತ್ರಿ ಕೆರೆಬೈಲು ಗುಡ್ಡೆಯಲ್ಲಿ ಮನೆ ಕುಸಿದು ಶಾರದಾ (50) ಗಾಯಗೊಂಡಿದ್ದಾರೆ. ಅವರನ್ನು ದೇರಳಕಟ್ಟೆ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಕುಸಿದು ಪಕ್ಕದ ಸಿರಾಜ್‌ ಅವರ ಮನೆಗೂ ಭಾಗಶಃ ಹಾನಿಯಾಗಿದೆ.

ಭಾರೀ ಗಾಳಿ – ಹಾನಿ
ಬುಧವಾರ ಸಂಜೆ ಭಾರೀ ಗಾಳಿಗೆ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿ ಗೋಳಿ
ಬಸ್‌ ತಂಗುದಾಣದ ಛಾವಣಿಯ ಶೀಟ್‌ಗಳು  ಹಾರಿ ಹೋಗಿದ್ದು, ದಿನೇಶ್‌ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನವೊಂದಕ್ಕೆ ಹಾನಿಯಾಗಿದೆ.

ಕುಂದಾಪುರ ರಸ್ತೆಗುರುಳಿದ ಮರ, ವಿದ್ಯುತ್‌ ಕಂಬಗಳು
ಕುಂದಾಪುರ: ತಾಲೂಕಿನೆಲ್ಲೆಡೆ ಬುಧವಾರ ದಿನವಿಡೀ ನಿರಂತರವಾಗಿ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಗಾಳಿ- ಮಳೆಯಿಂದಾಗಿ ಹಾನಿಯಾಗಿದೆ.

ಹಕ್ಲಾಡಿಯಲ್ಲಿ ಬುಧವಾರ ಸಂಜೆ ಮನೆಯೊಂದಕ್ಕೆ ಸಿಡಿಲು ಬಡಿದು ಇಬ್ಬರು ಗಾಯಗೊಂಡಿದ್ದಾರೆ. ನೂಜಾಡಿಯಲ್ಲಿ ಸಿಡಿಲು ಬಡಿದು ಕರುವೊಂದು ಸಾವನ್ನಪ್ಪಿದೆ. ರಾಷ್ಟ್ರೀಯ ಹೆದ್ದಾರಿ 66ರ ವಿನಾಯಕ ಚಿತ್ರಮಂದಿರದ ಬಳಿಯಿಂದ ತ್ರಾಸಿ ವರೆಗೆ ಹಲವು ಕಡೆಗಳ ಹೊಂಡಗಳಲ್ಲಿ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು.

ಮರ ಬಿದ್ದು  ಸಂಚಾರ ಸ್ಥಗಿತ
ಕುಂದಾಪುರ – ಶಿವಮೊಗ್ಗ ರಾಜ್ಯ ಹೆದ್ದಾರಿಯ ಬಸ್ರೂರ್  ಸಮೀಪದ ಪಾನಕದಕಟ್ಟೆ ಬಳಿ ಭಾರೀ ಗಾಳಿ-ಮಳೆ ಯಿಂದಾಗಿ ಬುಧವಾರ ಸಂಜೆ ಬೃಹತ್‌ ಗಾತ್ರದ ಮರವೊಂದು ರಸ್ತೆಗೆ ಬಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತು. ಇದರಿಂದ ಕೆಲ ಕಾಲ ವಾಹನಗಳ ದಟ್ಟಣೆಯಾಯಿತು. ಸ್ಥಳೀಯರು ಸೇರಿ, ಮರದ ಗೆಲ್ಲುಗಳನ್ನು ತೆರವು ಮಾಡಿದ ಬಳಿಕ ಸಂಚಾರ ಪ್ರಾರಂಭಗೊಂಡಿತು.

ಧರೆಗುರುಳಿದ ವಿದ್ಯುತ್‌ ಕಂಬಗಳು
ಕೋಟೇಶ್ವರ – ಶಿವಮೊಗ್ಗ ರಾಜ್ಯ ಹೆದ್ದಾರಿಯ ಸಳ್ವಾಡಿಯಲ್ಲಿ 6- 7 ವಿದ್ಯುತ್‌ ಕಂಬಗಳು ಮುರಿದು ಬಿದ್ದು, ವಿದ್ಯುತ್‌ ತಂತಿಗಳು ನೆಲದಲ್ಲಿ ಜೋತು ಬಿದ್ದಿವೆ. ಅಲ್ಲೇ ಸಮೀಪ ಗಾಳಿ ಮರ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಮನೆ ಮೇಲೆ ಬಿದ್ದ ಮರ
ಶಂಕರನಾರಾಯಣ ಗ್ರಾಮದ ಮೋಹನ ಕೊರಗ ಅವರ ಮನೆ ಮೇಲೆ ಮರ ಬಿದ್ದು, 10 ಸಾವಿರ ರೂ. ನಷ್ಟ ಉಂಟಾಗಿದೆ.
 ಮುಖ್ಯರಸ್ತೆ ಜಲಾವೃತ
ಗಂಗೊಳ್ಳಿ ಪೇಟೆಯ ಮುಖ್ಯ ರಸ್ತೆ ಹಾಗೂ ಮ್ಯಾಂಗನೀಸ್‌ ರಸ್ತೆಯಲ್ಲಿ ಮಳೆ ನೀರು ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ನೀರೆಲ್ಲ ರಸ್ತೆಯಲ್ಲೇ ಹರಿದು ಹೊಳೆ ಸದೃಶ ವಾತಾವರಣ ಸೃಷ್ಟಿಯಾಗಿತ್ತು. ವಿದ್ಯಾರ್ಥಿಗಳು, ವಾಹನ ಸವಾರರು ತೊಂದರೆ ಅನುಭವಿಸಿದರು.

ಸಿಡಿಲು ಬಡಿದು ಗಾಯ
ಹಕ್ಲಾಡಿ ಗ್ರಾ.ಪಂ. ವ್ಯಾಪ್ತಿಯ ಹೊಳ್ಮಗೆ ನಿವಾಸಿ ಗುರುವ ಪೂಜಾರಿ ಅವರ ಮನೆಗೆ ಬುಧವಾರ ಸಂಜೆ ಸಿಡಿಲು ಬಡಿದು ಮನೆಯ ವಿದ್ಯುತ್‌ ಪರಿಕರಗಳೆಲ್ಲ ಸುಟ್ಟು ಕರಕಲಾಗಿದ್ದು, ಮನೆಯ ಗೋಡೆ ಬಿರುಕುಬಿಟ್ಟಿದೆ. ಸಿಡಿಲಿನ ಆಘಾತದಿಂದ ಗುರುವ ಅವರ ಪತ್ನಿ ಹಾಗೂ ಪುತ್ರಿಗೆ ಗಾಯವಾಗಿದೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬಂಟ್ವಾಳ: ಗುಡ್ಡ  ಕುಸಿತ; 16 ಮನೆಗಳಿಗೆ ನುಗ್ಗಿದ ನೀರು
ಬಂಟ್ವಾಳ: ಭಾರೀ ಮಳೆಯಿಂದಾಗಿ ಬಿ. ಮೂಡ ಗ್ರಾಮದ ಅಗ್ರಾರ್‌ ನೇರಂಬೋಲುನ‌ಲ್ಲಿ ಗುಡ್ಡ ಕುಸಿದು ರಸ್ತೆಯ ಒಂದು ಪಾರ್ಶ್ವದಲ್ಲಿ ಮಣ್ಣು ರಾಶಿಯಾಗಿದ್ದು ಮರಗಳು ಅಡ್ಡಬಿದ್ದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಆಗಿದೆ. ಲೊರೆಟ್ಟೊ ಕಮಾಲ್‌ ಕಟ್ಟೆಯಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು ಸ್ಥಳೀಯರು ಮಣ್ಣು , ಮರವನ್ನು ತೆರವು ಮಾಡಿದ್ದಾರೆ.
ಭಂಡಾರಿಬೆಟ್ಟು ತಗ್ಗು ಪ್ರದೇಶದ ವಸತಿ ಸಮುಚ್ಚಯದ 16 ಮನೆಗಳಿಗೆ ನೀರು ನುಗ್ಗಿದ್ದು  ಮಾಹಿತಿ ಪಡೆದ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಮತ್ತು ಸದಸ್ಯರು ಅಗ್ನಿಶಾಮಕ ದಳದ ನೆರವು ಪಡೆದು, ಜೆಸಿಬಿ ಬಳಸಿ ತೋಡು ಮಾಡುವ ಮೂಲಕ ಅದನ್ನು ತೆರವು ಮಾಡಿದ್ದಾಗಿ ತಿಳಿಸಿದ್ದಾರೆ. ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು 6 ಮೀಟರ್‌ ನಲ್ಲಿ ಹರಿಯುತ್ತಿದೆ. ಇಲ್ಲಿ 9 ಮೀಟರ್‌ ಅಪಾಯ ಮಟ್ಟವಾಗಿದೆ.

ಭಾರೀ ಮಳೆಯ ಕಾರಣ ಯಾವುದೇ ಅಪಾಯ ಸಂದರ್ಭ ಎದುರಾದರೆ ಪರಿಹಾರ ಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಂಪರ್ಕದಲ್ಲಿ ಇರುವಂತೆ ಸೂಚನೆ ನೀಡಿದ್ದಾಗಿ ತಹಶೀಲ್ದಾರ್‌ ಕಚೇರಿ ಮಾಹಿತಿ ತಿಳಿಸಿದೆ.

ಶೆಡ್‌ಗಳಿಗೆ ಹಾನಿ: ಕೊಡ್ಮಣ್‌ ಗ್ರಾಮದ ಕೊಟ್ಟಿಂಜದಲ್ಲಿ ಭಾರೀ ಮಳೆಗೆ ಜೂ. 27ರಂದು ಗುಡ್ಡದ ಮಣ್ಣು ಜರಿದು ವಾಸ್ತವ್ಯ ರಹಿತ ಮೂರು ಶೆಡ್‌ಗಳು ಧ್ವಂಸವಾಗಿವೆ. ಅಮ್ಮೆಮಾರ್‌ – ಮಲ್ಲೂರು ರಸ್ತೆ ಸಂಚಾರಕ್ಕೆ ಇದರಿಂದ ಸ್ವಲ್ಪ ಹೊತ್ತು ಅಡಚಣೆ ಉಂಟಾಗಿತ್ತು. ಗ್ರಾ.ಪಂ.ನಿಂದ ಜೆಸಿಬಿ ಬಳಸಿ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಮೂಲಕ ಸಂಚಾರ ಅಡಚಣೆ ನಿವಾರಿಸಲಾಗಿದೆ.

ಕೊಲ್ಲೂರಿನಲ್ಲಿ  ಭಾರೀ ಮಳೆ
ಕೊಲ್ಲೂರು: ಕೊಲ್ಲೂರಿನಲ್ಲಿ ಬುಧವಾರ ಭಾರೀ ಮಳೆಯಾಗಿದ್ದು , ಸೌಪರ್ಣಿಕಾ ಹಾಗೂ ಕಾಶಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಜಡ್ಕಲ್‌, ಮುದೂರು ಸಹಿತ ವಂಡ್ಸೆ ಆಸುಪಾಸಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಕೃಷಿ ಭೂಮಿ ಜಲಾವೃತಗೊಂಡಿದೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.