ಕುಮಾರಸ್ವಾಮಿ ಕೆಳಗಿಳಿಸುವ ಹುನ್ನಾರ


Team Udayavani, Jun 28, 2018, 10:46 AM IST

bengaluru-rural.jpg

ದೇವನಹಳ್ಳಿ: ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕೆಲವರು ಹುನ್ನಾರ ನಡೆಸುತ್ತಿದ್ದು ಅಂತಹವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದು ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಕ್ಷೇತ್ರದ ನಂಜಾವಧೂತ ಸ್ವಾಮೀಜಿ ಎಚ್ಚರಿಕೆ ನೀಡಿದರು. 

ನಗರದ ಸರ್ಕಾರಿ ಪದವಿ ಪೂರ್ವಕಾಲೇಜು ಆಟದ ಮೈದಾನದಲ್ಲಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಕೆಂಪೇಗೌಡರ ವೇದಿಕೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 508ನೇ ಜಯಂತ್ಯುತ್ಸವದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕಾಲೆಳೆಯುವ ಕಾರ್ಯ: ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಸಮಿಶ್ರ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು,ಕೆಲವರು ಕಾಲೆಳೆಯುವ ಕೆಲಸ ಮಾಡುತ್ತಿದ್ದಾರೆ. ಸದಾನಂದಗೌಡರು ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ನಂತರ ಅದರ ಪರಿಣಾಮ ಬಿಜೆಪಿ 124 ಸ್ಥಾನ ಇದ್ದದ್ದು ಕೇವಲ 40 ಸ್ಥಾನಕ್ಕೆ ಬರುವ ಸ್ಥಿತಿಗೆ ಬಂದಿತ್ತು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಿಲ್ಲೆ ಎಂದು ನಾಮಕರಣ ಮಾಡಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿವಿಧ ರಾಜ್ಯ ಮತ್ತು ದೇಶವಿದೇಶಗಳ ಪ್ರಯಾಣಿಕರಿಗೆ ಕೆಂಪೇಗೌಡರ ಇತಿಹಾಸ ತಿಳಿಯಲು ಕೈಪಿಡಿ ನೀಡಬೇಕು. ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ ನಿರ್ಮಾಣವಾಗಬೇಕು. ಈ ಕುರಿತು ಸರ್ಕಾರ ಕೂಡಲೇ ಗಮನಹರಿಸಬೇಕೆಂದು ಒತ್ತಾಯಿಸಿದರು.

ಎತ್ತಿನಹೊಳೆ ಯೋಜನೆ ನೀರು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ನೀರಿನ ಹೊಳೆಯ ಬದಲು ಹಣದ ಹೊಳೆ ಹರಿಯುತ್ತಿದೆ. ಈ ಭಾಗದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜನರಿಗೆ ವ್ಯವಸಾಯ ತೋಟಗಳಿಗೆ ಸಮರ್ಪಕ ನೀರನ್ನು ನೀಡಿದರೆ ಚಿನ್ನದಂತಹ ಬೆಳೆ ಬೆಳೆಯುತ್ತಾರೆಂದರು.  ಹಾಪ್‌ಕಾಮ್ಸ್‌ ಉಪಾಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಮುನೇಗೌಡ, ಮಾಜಿ ಪ್ರಧಾನಿ ದೇವೇಗೌಡರು ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಇತರೆಗಳಲ್ಲಿ ಮೀಸಲಾತಿ ತರುವುದರ ಮೂಲಕ ಎಲ್ಲಾ ಜನಾಂಗಗಳನ್ನು ಗುರ್ತಿಸುವ ಕೆಲಸ
ಮಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬದಲಾಗಿ ಕೆಂಪೇಗೌಡ ಜಿಲ್ಲೆಯೆಂದು ನಾಮಕರಣ ಮಾಡಬೇಕು. ಈ ಕುರಿತು ಜಿಪಂ ಸದಸ್ಯರು ಧ್ವನಿ ಎತ್ತಬೇಕು ಎಂದು ಹೇಳಿದರು. ಸಮಾಜದ ಹಿರಿಯರಾದ ಆಂಜಿನಪ್ಪ, ಬೈರಪ್ಪ ಉದ್ಘಾಟಿಸಿದರು.

ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಶಾಸಕ ನಿಸರ್ಗ ಎಲ್‌.ಎನ್‌ .ನಾರಾಯಣಸ್ವಾಮಿ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ.ವೆಂಕಟೇಗೌಡ, ಜಿಪಂ ಸದಸ್ಯರಾದ ಜಿ.ಲಕ್ಷ್ಮೀನಾರಾಯಣ್‌, ಕೆ.ಸಿ.ಮಂಜುನಾಥ್‌, ಎಪಿಎಂಸಿ ಅಧ್ಯಕ್ಷೆ ಅಮರಾವತಿ, ತಾಪಂ ಅಧ್ಯಕ್ಷೆ ಭಾರತಿ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಬಿ.ಶ್ರೀನಿವಾಸ್‌, ಪಿಕಾರ್ಡ್‌
ಬ್ಯಾಂಕ್‌ ಅಧ್ಯಕ್ಷ ಆರ್‌.ಮುನೇಗೌಡ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಶ್ರೀನಿವಾಸ್‌ಗೌಡ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಎನ್‌.ಸೊಣ್ಣಪ್ಪ, ತಾಲೂಕು ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಶಿವರಾಮಯ್ಯ, ಎಪಿಎಂಸಿ ನಿರ್ದೇಶಕ ಕೆ.ವಿ.ಮಂಜುನಾಥ್‌, ಶಶಿಕಲಾ ಇದ್ದರು. ಸಮಾರಂಭಕ್ಕೂ ಮುನ್ನ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಿಂದ ಪಟ್ಟಣದ ರಾಜಬೀದಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಅಲ್ಲದೆ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು  ಕಪಡೆದ
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕುಮಾರಸ್ವಾಮಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ಸಿದ್ದರಾಮಯ್ಯ ಆಗಲಿ, ಪ್ರಧಾನಿ ನರೇಂದ್ರ ಮೋದಿಯೇ ಆಗಲಿ ಅವರನ್ನು ಕೆಳಗಿಳಿಸುವ ಪ್ರಯತ್ನಕ್ಕೆ ಕೈಹಾಕಿದರೆ ಒಕ್ಕಲಿಗ ಸಮುದಾಯ ಅಂತಹವರನ್ನು ಗುರುತು ಮಾಡಿ ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತದೆ. 

ನಂಜಾವಧೂತ ಸ್ವಾಮೀಜಿ, ಸ್ಫಟಿಕಪುರಿ ಕ್ಷೇತ್ರ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.