ಪುಂಜಾಲಕಟ್ಟೆ: ಸಾಮೂಹಿಕ ವಿವಾಹ ದಂಪತಿಗೆ ಪ್ರೋತ್ಸಾಹಧನ ವಿತರಣೆ
Team Udayavani, Jun 28, 2018, 11:01 AM IST
ಪುಂಜಾಲಕಟ್ಟೆ : ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ 10ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾಗಿರುವ ವಧುಗಳಿಗೆ ರಾಜ್ಯ ಸರಕಾರ ಮತ್ತು ಕ್ಲಬ್ ವತಿಯಿಂದ ತಲಾ 50,000 ರೂ. ಸಹಾಯಧನದ ಬಾಂಡ್ ವಿತರಣೆ ಕಾರ್ಯಕ್ರಮ ಪುಂಜಾಲಕಟ್ಟೆ ನಂದಗೋಕುಲ ಸಭಾಭವನದಲ್ಲಿ ಬುಧವಾರ ಜರಗಿತು. ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ನೂತನ ಜೋಡಿಗಳಿಗೆ ಸಹಾಯಧನವನ್ನು ವಿತರಿಸಿ, ಶುಭ ಹಾರೈಸಿದರು.
ಈ ಸಂದರ್ಭ ಕ್ಲಬ್ನ ಗೌರವಾಧ್ಯಕ್ಷ, ಸಂಗಬೆಟ್ಟು ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಕುಮಂಗಿಲ, ನಂದಗೋಕುಲ ಸಭಾಭವನದ ಮಾಲಕ ಪ್ರಕಾಶ್ ಭಟ್, ವಾಮದಪದವು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ, ತಾ.ಪಂ. ಸದಸ್ಯ ರಮೇಶ್ ಕುಡ್ಮೇರು, ಹಾಪ್ ಕಾಮ್ಸ್ ನ ಸದಸ್ಯ ವಿಜಯ ರೈ ಆಲದಪದವು ಉಪಸ್ಥಿತರಿದ್ದರು.
ಕ್ಲಬ್ನ ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ಪ್ರಸ್ತಾವಿಸಿದರು. ಶಾಸಕರನ್ನು ಕ್ಲಬ್ ವತಿಯಿಂದ ಸಮ್ಮಾನಿಸಲಾಯಿತು. ರಾಜೇಶ್ ಪುಳಿಮಜಲು ಸ್ವಾಗತಿಸಿ, ಲತಾ ಎಸ್. ವಂದಿಸಿದರು. ಅಮೃತಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್