“ಮೀನುಮಾರುಕಟ್ಟೆಗಳಲ್ಲಿ ತಾಜಾ ಮೀನು ಲಭ್ಯ: ಆತಂಕ ಬೇಡ’


Team Udayavani, Jun 29, 2018, 6:30 AM IST

fish.jpg

ಮಲ್ಪೆ: ಕರಾವಳಿ ಜಿಲ್ಲೆಗಳಲ್ಲಿ ವಿವಿಧ ಮೀನುಗಾರಿಕಾ ಬಂದರುಗಳಿಂದ ನೇರವಾಗಿ ಮೀನು ಮಾರುಕಟ್ಟೆಗಳಿಗೆ ಅತೀ ಶೀಘ್ರವಾಗಿ ತಂದು ಮಾರಾಟ ಮಾಡುತ್ತಿರುವುದರಿಂದ ಯಾವುದೇ ರಾಸಾಯನಿಕ ಬಳಕೆಯ ಅಗತ್ಯತೆ ಇರುವುದಿಲ್ಲ. 

ಮಳೆಗಾಲದಲ್ಲಿ ಇದೀಗ ಹೆಚ್ಚಿನ  ಎಲ್ಲ ಮೀನು ಮಾರುಕಟ್ಟೆಗಳಲ್ಲಿ ತಾಜಾ ಮೀನು ದೊರೆಯುತ್ತಿರುವುದರಿಂದ ಗ್ರಾಹಕರಿಗೆ ಯಾವುದೇ ಸಂದೇಹ ಬೇಡ ಎಂದು ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್‌. ಸಾಲ್ಯಾನ್‌ ತಿಳಿಸಿದ್ದಾರೆ.

ಕರಾವಳಿಯ ಎಲ್ಲಾ ಮೀನು ಮಾರುಕಟ್ಟೆಯಲ್ಲಿ ಮಹಿಳೆಯರು ಸಾಂಪ್ರಾದಾಯಿಕ ರೀತಿಯಲ್ಲಿ ಮೀನು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದು, ಎಲ್ಲಾ ಮೀನು ಮಾರುಕಟ್ಟೆಗಳಲ್ಲಿ ತಾಜಾ ಮೀನು ವ್ಯಾಪಾರ ಸರಾಗವಾಗಿ ನಡೆಯುತ್ತಿದೆ. ಅನಾದಿಕಾಲದಿಂದಲೂ ಮೀನು ಮಾರುಕಟ್ಟೆಗಳಲ್ಲಿ ಸಾಂಪ್ರಾದಾಯಿಕ ಪದ್ಧತಿಯಲ್ಲಿ ಮಹಿಳೆಯರು ಮೀನು ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಯಾವುದೇ ರಾಸಾಯನಿಕ ಬಳಸಿದ ಮೀನುಗಳಿಗೆ ಉತ್ತೇಜನ ನೀಡುತ್ತಿಲ್ಲ. ಹಾಗಾಗಿ ಗ್ರಾಹಕರು ಮೀನುಮಾರುಕಟ್ಟೆಗಳ ಮಹಿಳೆಯರಲ್ಲಿ ದೊರೆಯುವ ತಾಜಾ ಮೀನಿನ ಬಗ್ಗೆ ಭರವಸೆ ಹೊಂದಿದ್ದಾರೆ.

ಕರಾವಳಿಯ ಬೇರೆ ಬೇರೆ ಕಡೆಗಳಲ್ಲಿ ಮೀನಿನ ಅಂಗಡಿಗಳಲ್ಲಿ ಹಾಗೂ ವಿವಿಧ ಮಾಲ್‌ಗ‌ಳಲ್ಲಿ ಮಾರಾಟ ಮಾಡಲಾಗುತ್ತಿರುವ ಶೀತಲೀಕೃತ ಮೀನುಗಳನ್ನು ಖರೀದಿಸುವ ಬದಲು ಮೀನು ಮಾರುಕಟ್ಟೆಗಳಲ್ಲಿ ಪ್ರತಿದಿನ ಶೇಖರಣೆ ಮಾಡುವ ಮೀನಿಗೆ ಹೆಚ್ಚಿನ ಬೇಡಿಕೆಯಿದೆ.

ಸೂಕ್ತ ಕ್ರಮ ಕೈಗೊಳ್ಳಬೇಕು
ಮೀನಿನ ಅಂಗಡಿಗಳಲ್ಲಿ ಕೆಲವು ದಿನಗಳ ಕಾಲ ಶೀತಲೀಕರಣ ಮಾಡಿ ಕಾಪಿಡುವ ಮೀನುಗಳ ಬಗ್ಗೆ ಗ್ರಾಹಕರ ಎಚ್ಚರ ವಹಿಸಬೇಕು. ಕರಾವಳಿಯ ಮೀನು ಮಾರಾಟಗಾರರ ಮಹಿಳೆಯರು ಪ್ರಾರಂಭದಿಂದಲೂ ಶೀತಲಿಕೃತ ಮೀನಿನ ಅಂಗಡಿಗಳನ್ನು ವಿರೋಧಿಸುತ್ತಾ ಬಂದಿರುವುದು ಇದೇ ಕಾರಣಕ್ಕಾಗಿ. ಈಗಲಾದರೂ ಸಂಬಂಧಪಟ್ಟ ಜಿಲ್ಲಾಡಳಿತ ಇಂತಹ ಮೀನಿನಂಗಡಿಗಳ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಮತ್ತು ಅನಧೀಕೃತವಾಗಿ ಕಾರ್ಯಾಚರಿಸುತ್ತಿರುವ ಶೀತಲೀಕರಣ ಮೀನಿನಂಗಡಿಗಳನ್ನು ನಿಷೇಧಿಸಬೇಕು. ಗ್ರಾಹಕರು ಕೂಡಾ ವಿವಿಧ ರಾಸಾಯನಿಕಗಳನ್ನು ಬಳಕೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಬೇಕು.

ಬೇರೆ ಬೇರೆ ಮೀನಿನ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಿದ್ದು, ನಮ್ಮ ಎಲ್ಲ ಮೀನು ಮಾರುಕಟ್ಟೆಗಳಲ್ಲಿ ಸಮುದ್ರದಿಂದ ತಂದಿರುವ ಮತ್ತು ಹೊಳೆಯಿಂದ ಹಿಡಿದ ತಾಜಾ ಮೀನು ಮಾರಾಟ ಮಾಡಲಾಗುತ್ತದೆ ಎಂದು ಬೇಬಿ ಸಾಲ್ಯಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.