ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಫಾರಿ: ಅರಣ್ಯ ಸಚಿವ ಶಂಕರ್
Team Udayavani, Jun 28, 2018, 7:40 PM IST
ಬೆಂಗಳೂರು : ಸರಕಾರಿ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಸಫಾರಿ, ವೈವಿಧ್ಯಮಯ ಜೀವ ಸಂಕುಲ ಪರಿಚಯ ಮಾಡಿಕೊಡುವ ವಿಶಿಷ್ಟ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅರಣ್ಯ ಸಚಿವ ಆರ್ ಶಂಕರ್ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಬ್ಬನ್ ಪಾರ್ಕ್ನಲ್ಲಿ ಏರ್ಪಟ್ಟ ಸಮಾರಂಭದಲ್ಲಿ ಅವರು ರಾಜ್ಯ ಪರಿಸರ ಪ್ರಶಸ್ತಿಯನ್ನು ಪ್ರದಾನಿಸಿದರು.
ಸಚಿವರು ಮಾತನಾಡಿ ಅರಣ್ಯ ಇಲಾಖೆಯಿಂದ ಈಗಾಗಲೇ ಮಗುವಿಗೊಂದು ಸಸಿ, ಶಾಲೆಗೊಂದು ವನ ಕಾರ್ಯಕ್ರಮ ಜಾರಿಯಲ್ಲಿದೆ ಎಂದು ಹೇಳಿದರು.