ರಂಗಭೂಮಿ ದಾರ್ಶನಿಕ ಸಿಜಿಕೆ: ಡಿಂಗ್ರಿ ನರೇಶ್


Team Udayavani, Jun 29, 2018, 10:59 AM IST

bid-1.jpg

ಬೀದರ: ಚಳ್ಳಿಕೇರೆ ಗೋವಿಂದನಾಯಕ ಕೃಷ್ಣಸ್ವಾಮಿ (ಸಿಜಿಕೆ) ಬೀದಿ ನಾಟಕಗಳ ಮಹಾನ್‌ ಕಲಾವಿದ, ರಂಗಭೂಮಿಯ ದಾರ್ಶನಿಕರಾಗಿದ್ದರು. ಅವರು ಅಂಗವೈಕಲ್ಯದಿಂದ ಬಳಲುತ್ತಿರುವ ಸಂದರ್ಭದಲ್ಲಿ ಕೂಡ ಜೀವನದಲ್ಲಿ ದೊಡ್ಡಮಟ್ಟದ ಸಾಧನೆ ಮಾಡಿ ಇಂದು ಪ್ರತಿಯೊಬ್ಬರು ಸ್ಮರಿಸುವಂತೆ ಮಾಡಿದ್ದಾರೆ ಎಂದು ರಂಗಭೂಮಿ ಕಲಾವಿದ ಡಿಂಗ್ರಿ ನರೇಶ ಹೇಳಿದರು.

ನಗರದ ರಂಗ ಮಂದಿರದಲ್ಲಿ ಕರ್ನಾಟಕ ಬೀದಿ ನಾಟಕ ಅಕಾಡೆಮಿ, ಆರ್ಟ್‌ ಫೌಂಡೇಶನ್‌ ಅವಿರತ ಪುಸ್ತಕ ಬೆಂಗಳೂರು, ಜಿಲ್ಲಾ ಜಾನಪದ ಕಲಾವಿದರ ಬಳಗ ಮತ್ತು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಸಂಯುಕ್ತಾಶ್ರಯದಲ್ಲಿ ನಡೆದ ನಾಟಕ ಕಲಾವಿದ, ಸಹ ಶಿಕ್ಷಕ ಎಂ.ಎಸ್‌. ಮನೋಹರ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ರಂಗಭೂಮಿ ಸಂಘಟನೆ ಹಾಗೂ ಚಳವಳಿಯಲ್ಲಿ ಸಿಜಿಕೆ ಪಾತ್ರ ಮಹತ್ತರವಾಗಿದೆ. ಬೀದಿ ನಾಟಕಗಳ ಮೂಲಕ ಪ್ರೇಕ್ಷಕರನ್ನು ಸಂಘಟಿಸಿದ ಕಲಾಜೀವಿ ಸಿಜಿಕೆ. ಅವರು ಇಲ್ಲದಿದ್ದರೆ, ಬೀದಿ ನಾಟಕ ಬೆಳೆಯುತ್ತಿರಲಿಲ್ಲ. ಕವಿ ಸಿದ್ಧಲಿಂಗಯ್ಯ, ಚಿತ್ರನಟಿ ಉಮಾಶ್ರೀ, ನಾಟಕಕಾರ ನಾಗರಾಜ ಅವರ ಪರಿಚಯವೇ ರಾಜ್ಯಕ್ಕೆ ಆಗುತ್ತಿರಲಿಲ್ಲ. ರಂಗಭೂಮಿ, ಕಲೆ, ಸಾಹಿತ್ಯ, ನಾಟಕಗಳ ಬೆಳವಣಿಗೆಯಲ್ಲಿ ಸಿಜಿಕೆ ಅವರ ಪಾತ್ರ ಮಹತ್ತರವಾಗಿದೆ ಎಂದರು. 

ಹಿರಿಯ ಕಲಾವಿದ ಚಂದ್ರಗುಪ್ತ ಚಾಂದಕವಠೆ ಮಾತನಾಡಿ, ಸಿಜಿಕೆ ರಂಗ ಪುರಸ್ಕಾರಕ್ಕೆ ಎಂ.ಎಸ್‌. ಮನೋಹರ ಅವರನ್ನು ಆಯ್ಕೆ ಮಾಡಿರುವುದು ಸಂತೋಷ ತಂದಿದೆ. ಎಂ.ಎಸ್‌. ಮನೋಹರ ಅವರು 25 ವರ್ಷಗಳಿಂದ ರಂಗ ಚಟುವಟಿಕೆಗಳಲ್ಲಿ ಶ್ರಮಿಸಿದ್ದಾರೆ. ಇಂತಹ ವ್ಯಕ್ತಿಗೆ ಇಂದು ಗೌರವ ದೊರೆಯುತ್ತಿರುವುದು ಹರ್ಷದ ವಿಷಯವಾಗಿದೆ ಎಂದರು. 

ಸಮುದಾಯ ತಂಡ ರಚಿಸಿಕೊಂಡು ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಬೀದರ ಜಿಲ್ಲೆಯ ಪ್ರತಿಯೊಂದು ಗ್ರಾಮಗಳಿಗೆ ಸಂಚರಿಸಿ ಮೌಡ್ಯ, ಭಾನಾಮತಿ ಮುಂತಾದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಪುರಸ್ಕಾರ ಪಡೆದ ಎಂ.ಎಸ್‌. ಮನೋಹರ ಮಾತನಾಡಿ, 1985ರಿಂದ ಶಂಭುಲಿಂಗ ವಾಲದೊಡ್ಡಿ ಮತ್ತು ಚಂದ್ರಪ್ಪ ಹೆಬ್ಟಾಳಕರ ಅವರ ಜೊತೆ ಸಕ್ರಿಯವಾಗಿ ಪಾಲ್ಗೊಂಡು ವಿವಿಧ ಕಾರ್ಯಕ್ರಮಗಳನ್ನು ನೀಡಿದ್ದೇನೆ. 22 ವರ್ಷಗಳಿಂದ ರಂಗಭೂಮಿಯಲ್ಲಿ ಅವಿರತವಾಗಿ ಭಾಗವಹಿಸುತ್ತಿದ್ದೇನೆ. ಮೊಟ್ಟ ಮೊದಲು ಬೀದಿ ನಾಟಕದಲ್ಲಿ ಹುಚ್ಚ ಮಾಸ್ತರನ ಪಾತ್ರ ಮಾಡಿ ಗುರುತಿಸಿಕೊಂಡ ನನ್ನನ್ನು ಇಂದಿಗೂ ಕೂಡ ಕಲಾವಿದ ಎಂದೇ ಜನರು ಗುರುತಿಸುತ್ತಾರೆ. ನನ್ನ ಕಲೆಗೆ ಗೌರವಿಸಿ ಇಂದು ನೀಡಿದ ಪುರಸ್ಕಾರ ಹರ್ಷ ತಂದಿದೆ ಎಂದರು.
 
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಎಸ್‌.ವಿ. ಕಲ್ಮಠ, ಬಯಲಾಟ ಅಕಾಡೆಮಿ ಸದಸ್ಯ ಸಂಜೀವಕುಮಾರ
ಜುಮ್ಮಾ, ಕರ್ನಾಟಕ ಚಿತ್ರಕಲಾ ಅಕಾಡೆಮಿ ಸದಸ್ಯ ಯೋಗೀಶ ಮಠ, ಕನ್ನಡ ಸಹಿತ್ಯ ಪರಿಷತ್‌ ಜಿಲ್ಲಾ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಬಸವರಾಜ ಬಲ್ಲೂರ, ರಂಗನಟ ಎಸ್‌.ಸಿ. ಗಿರೀಶ, ದಲಿತ ಮುಖಂಡ ಮಾರುತಿ ಬೌದ್ಧೆ, ಫರ್ನಾಂಡೀಸ್‌ ಹಿಪ್ಪಳಗಾಂವ, ವಿಜಯಕುಮಾರ ಸೋನಾರೆ, ರಾಜೇಂದ್ರಕುಮಾರ ಗಂದಗೆ, ರಾಜಕುಮಾರ ಮಾಳಗೆ, ಪಾರ್ವತಿ ಸೋನಾರೆ, ರಾಜಶೇಖರ ವಟಗೆ, ಸಂಗಮೇಶ ಅಂಗಡಿ, ದೇವಿದಾಸ ಜೋಶಿ, ಯೇಸುದಾಸ ಅಲಿಯಂಬುರೆ ಇದ್ದರು. 

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.