ಮಂಗಳೂರಿನಲ್ಲಿ ಮೊದಲ ಬಾರಿಗೆ ರಸ್ತೆಗಿಳಿಯಲಿದೆ ಬೈಕ್‌ ಆ್ಯಂಬುಲೆನ್ಸ್‌


Team Udayavani, Jun 29, 2018, 11:58 AM IST

29-june-7.jpg

ಮಹಾನಗರ: ನಗರದಲ್ಲಿ ಉದ್ಭವಿಸಿರುವ ಟ್ರಾಫಿಕ್‌ ಜಾಂ ಸಮಸ್ಯೆಯಿಂದ ಆ್ಯಂಬುಲೆನ್ಸ್‌ಗಳು ಸರಿಯಾದ ಸಮಯಕ್ಕೆ ತಲುಪದೆ ಕೆಲವೊಮ್ಮೆ ರೋಗಿಗಳ ಸ್ಥಿತಿಯೂ ಅಯೋಮಯವಾಗುವುದಿದೆ. ಇದಕ್ಕಾಗಿ ನಗರದ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆ ಹೊಸ ದಾರಿಯೊಂದನ್ನು ಕಂಡುಕೊಂಡಿದೆ. ಅದೆಂದರೆ ಬೈಕ್‌ ಆ್ಯಂಬುಲೆನ್ಸ್‌ ಸೇವೆ.

ಜೀವ ರಕ್ಷಣೆಗಾಗಿ ತುರ್ತು ಪರಿಸ್ಥಿತಿಯಲ್ಲಿ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಆಸ್ಪತ್ರೆಯು ಮಂಗಳೂರಿನಲ್ಲೇ ಮೊದಲ ಬಾರಿಗೆ ಬೈಕ್‌ ಆ್ಯಂಬುಲೆನ್ಸ್‌ ಸೇವೆಯನ್ನು ರೋಗಿಗಳಿಗೆ ಕಲ್ಪಿಸುತ್ತಿದೆ. ನಗರದೊಳಗೆ ಕರೆ ಬಂದ ಕಡೆಗೆ ತೆರಳಿ ರೋಗಿಗೆ ತತ್‌ಕ್ಷಣಕ್ಕೆ ಬೇಕಾದ ಪ್ರಾಥಮಿಕ ಚಿಕಿತ್ಸೆ ಕೊಡಿಸುವುದು ಈ ಹೊಸ ಯೋಜನೆಯ ಉದ್ದೇಶ. ಮುಖ್ಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಮತ್ತು 15 ನಿಮಿಷದೊಳಗೆ ಪ್ರಥಮ ಚಿಕಿತ್ಸೆ ಅಗತ್ಯವಾದ ರೋಗಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಸೇವೆಯನ್ನು ಪರಿಚಯಿಸಲಾಗಿದೆ.

ಸೈರನ್‌ ಹಾಕಲಿದೆ ಬೈಕ್‌
ಬೈಕ್‌ ಆ್ಯಂಬುಲೆನ್ಸ್‌ ಇತರ ಬೈಕ್‌ಗಳ ಮಾದರಿಯಲ್ಲೇ ಇರುತ್ತದೆ. ಸೈರನ್‌ ವ್ಯವಸ್ಥೆ ಇದ್ದು, ಬೈಕಿನ ಮೇಲ್ಭಾಗದಲ್ಲಿ ಸೈರನ್‌ ದೀಪವನ್ನು ಕೂಡ ಅಳವಡಿಸಲಾಗಿದೆ. ಬೈಕ್‌ನಲ್ಲಿ ಸುಮಾರು ಮೂರು ಬಾಕ್ಸ್‌ಗಳಿದ್ದು, ಇವುಗಳಲ್ಲಿ ಪ್ರಥಮ ಚಿಕಿತ್ಸೆಯ ಕಿಟ್‌, ಏರ್‌ ಬ್ಯಾಗ್‌ ಮತ್ತು ಎಲ್ಲ ಅವಶ್ಯ ಔಷಧಗಳಿರುತ್ತವೆ. ಅಡ್ವಾನ್ಸ್‌ ಕಾರ್ಡಿಯಾಕ್‌ ಲೈಫ್‌ ಸಪೋರ್ಟ್‌ (ಎಸಿಎಲ್‌ಎಸ್‌), ಬೇಸಿಕ್‌ ಲೈಫ್‌ ಸಪೋರ್ಟ್‌ (ಬಿಸಿಎಸ್‌) ತರಬೇತಿ ಹೊಂದಿದ ಇಬ್ಬರು ನರ್ಸಿಂಗ್‌ ಸಿಬಂದಿಯನ್ನು ಬೈಕ್‌ ಆ್ಯಂಬುಲೆನ್ಸ್‌ ಸೇವೆಗಾಗಿ ನಿಯೋಜಿಸಲಾಗಿದ್ದು, ಕರೆ ಬಂದಲ್ಲಿಗೆ ತೆರಳಿ ತತ್‌ಕ್ಷಣಕ್ಕೆ ಬೇಕಾದ ಚಿಕಿತ್ಸೆಗಳನ್ನು ನೀಡುತ್ತಾರೆ.

ಪ್ರಾಥಮಿಕ ಚಿಕಿತ್ಸೆಗೆ ಸುಲಭ
ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆಯಿಂದಾಗಿ ಆ್ಯಂಬುಲೆನ್ಸ್‌ ಗಳಿಗೂ ಕೆಲವೊಮ್ಮೆ ಕಾಲಕ್ಕೆ ತಲುಪಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಬೈಕ್‌ ಆ್ಯಂಬುಲೆನ್ಸ್‌ ಸೇವೆಯನ್ನು ಪರಿಚಯಿಸಲಾಗಿದೆ. ಬೈಕ್‌ ಆ್ಯಂಬುಲೆನ್ಸ್‌ ಶೀಘ್ರ ತೆರಳುತ್ತದೆಯಾದ್ದರಿಂದ ಪ್ರಾಥಮಿಕ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ. ಬಳಿಕ ಆಸ್ಪತ್ರೆಯಿಂದ ಆ್ಯಂಬುಲೆನ್ಸ್‌ ಕೂಡಾ ತೆರಳಿ ರೋಗಿಯನ್ನು ಆಸ್ಪತ್ರೆಗೆ ಕರೆ ತರಲಾಗುತ್ತದೆ ಎಂದು ಫಾ| ಮುಲ್ಲರ್‌ ಮೆಡಿಕಲ್‌ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ಫಾ| ರುಡಾಲ್ಫ್ ರವಿ ಡೇಸಾ ತಿಳಿಸಿದ್ದಾರೆ.

ಶೀಘ್ರ ಸೇವೆ ಆರಂಭ
ಸಾರಿಗೆ ಇಲಾಖೆಯ ನಿಯಮಗಳ ಪ್ರಕಾರವೇ ಬೈಕ್‌ ಆ್ಯಂಬುಲೆನ್ಸ್‌ನ್ನು  ಪರಿಚಯಿಸಲಾಗುತ್ತಿದೆ. ಈಗಾಗಲೇ ಬೈಕ್‌ ನೋಂದಣಿ ಕಾರ್ಯ ಮುಗಿದಿದ್ದು, ಆ್ಯಂಬುಲೆನ್ಸ್‌ ಸೇವೆಗಾಗಿ ಉಪಯೋಗಿಸುವುದರಿಂದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ವಿಶೇಷ ಅನುಮತಿ ಬೇಕಾಗುತ್ತದೆಯೋ ಎಂಬುದಾಗಿ ವಿಚಾರಿಸಲಾಗುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ತತ್‌ ಕ್ಷಣವೇ ಬೈಕ್‌ ಆ್ಯಂಬುಲೆನ್ಸ್‌ ರಸ್ತೆ ಗಿಳಿಯಲಿದೆ ಎನ್ನುತ್ತಾರೆ ಫಾ| ರುಡಾಲ್ಫ್ ರವಿ ಡೇಸಾ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ (0824-2238333, 2238332)ಗೆ ಕರೆ ಮಾಡಬಹುದು. 

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.