ಕೆರೆಯಲ್ಲಿ ನೀರಿದ್ದರೂ ದಾಹ ನೀಗ್ತಿಲ್ಲ !


Team Udayavani, Jun 29, 2018, 4:23 PM IST

dvg-6.jpg

ಬಳ್ಳಾರಿ: ಗಣಿನಗರಿ ಬಳ್ಳಾರಿ ನಗರಕ್ಕೆ ನೀರು ಸರಬರಾಜು ಮಾಡುವ ಪಾಲಿಕೆಯ ಸಮರ್ಪಕ ನಿರ್ವಹಣೆಯ ಕೊರತೆಯೋ ಗೊತ್ತಿಲ್ಲ. ಆದರೆ, ನಗರದ ಜನತೆಗೆ ಕುಡಿವ ನೀರು ಪೂರೈಸುವ ಅಲ್ಲೀಪುರ, ಮೋಕಾ ಕೆರೆಗಳಲ್ಲಿ ಸಮರ್ಪಕ ನೀರು ಸಂಗ್ರಹವಿದ್ದರೂ, ನಗರದ ಜನರು 10-12 ದಿನಗಳಿಗೊಮ್ಮೆ ಕುಡಿವ ನೀರು ಪಡೆಯುವ ಸಮಸ್ಯೆಯಿಂದ ಮಾತ್ರ ಮುಕ್ತಗೊಂಡಿಲ್ಲ. ಚುನಾವಣೆಯಲ್ಲಿ ಗೆದ್ದರೆ 5 ದಿನಕ್ಕೊಮ್ಮೆ ನೀರು ಬಿಡುವುದಾಗಿ ಹೇಳಿದ್ದ ನಗರ ಶಾಸಕ ಜಿ.ಸೋಮಶೇಖರರೆಡ್ಡಿಯವರು ಭರವಸೆಯೂ ಈಡೇರಿಲ್ಲ.

ಹೌದು….! ತುಂಗಭದ್ರಾ ಜಲಾಶಯ ರಾಜ್ಯದ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆ ಸೇರಿ ನೆರೆಯ ಆಂಧ್ರಪ್ರದೇಶ,
ತೆಲಂಗಾಣ ರಾಜ್ಯಗಳ ಅನಂತಪುರ, ಕರ್ನೂಲ್‌ ಜಿಲ್ಲೆಗಳ ಜೀವನಾಡಿ. ಜಲಾಶಯದಿಂದ ನೀರು ಪಡೆಯುವ ಆಂಧ್ರದ ಅನಂತಪುರ ಜಿಲ್ಲೆಯಲ್ಲಿ ಪ್ರತಿ ಎರಡು ದಿನಕ್ಕೊಮ್ಮೆ ಕುಡಿವ ನೀರು ಪೂರೈಸಲಾಗುತ್ತದೆ. ಕುಡಿವ ನೀರಿನ ಸಮಸ್ಯೆ ತಲೆದೋರದಂತಹ ರೀತಿಯಲ್ಲಿ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡಲಾಗುತ್ತದೆ ಎನ್ನಲಾಗುತ್ತಿದೆ.

ಆದರೆ, ಬಳ್ಳಾರಿ ನಗರಕ್ಕೆ ಅಂದಾಜು 70 ಕಿ.ಮೀ. ದೂರದಲ್ಲಿ ತುಂಗಭದ್ರಾ ಜಲಾಶಯವಿದೆ. ಜತೆಗೆ ನೀರು ಸಂಗ್ರಹಿಸಲು ನಗರದಲ್ಲಿ ಬೃಹದಾಕಾರದ ಎರಡು ಕೆರೆಗಳಿದ್ದು, ಅವುಗಳಲ್ಲಿ ಸದ್ಯ ಸಮರ್ಪಕ ನೀರೂ ಸಂಗ್ರಹವಿದೆ. ಆದರೂ, ಜನರಿಗೆ ಮಾತ್ರ ಕನಿಷ್ಠ ವಾರಕ್ಕೊಮ್ಮೆ ನೀರು ಸರಬರಾಜು  ಮಾಡುವಲ್ಲಿ ಪಾಲಿಕೆ ವಿಫಲವಾಗಿದೆ. ಜಿಲ್ಲಾ ಕೇಂದ್ರದಲ್ಲೇ ಕುಡಿವ ನೀರಿನ ಸಮಸ್ಯೆ ಗಂಭೀರವಾಗಿದ್ದರೂ, ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನದಿರುವುದು ವಿಪರ್ಯಾಸ.

ಪ್ರಸಕ್ತ ವರ್ಷ ನಿರೀಕ್ಷಿತ ಪ್ರಮಾಣಕ್ಕಿಂತಲೂ ಹೆಚ್ಚು ಮಳೆಯಾಗಿದ್ದು, ಜಲಾಶಯದಲ್ಲೂ ನೀರು ಸಂಗ್ರಹವಾಗುತ್ತಿದೆ. ನಗರದ ಬಹುತೇಕ ಬಡಾವಣೆಗಳಿಗೆ ನೀರು ಪೂರೈಸುವ ಅಲ್ಲೀಪುರ ಕೆರೆಯ ನೀರಿನ ಸಂಗ್ರಹ ಸಾಮರ್ಥ್ಯ 8 ಮೀಟರ್‌ ಇದ್ದು, ಅದರಲ್ಲಿ 7.50 ಮೀಟರ್‌ ವರೆಗೂ ನೀರು ಸಂಗ್ರಹಿಸಲು ಅವಕಾಶವಿದೆ. ಸದ್ಯ 2 ಮೀಟರ್‌ಗೂ ಹೆಚ್ಚು ನೀರು ಸಂಗ್ರಹವಿದ್ದು, ಮುಂದಿನ ಒಂದು ತಿಂಗಳು ಅಂದರೆ ಎಚ್‌ ಎಲ್‌ಸಿ ಕಾಲುವೆಗೆ ಜಲಾಶಯದಿಂದ ನೀರು ಹರಿಸುವವರೆಗೂ ಸಮರ್ಪಕವಾಗಿ ಕುಡಿವ ನೀರನ್ನು ಪೂರೈಸಬಹುದು. ಈ ಕೆರೆಯಿಂದ ಪ್ರತಿದಿನ 55 ಎಂಎಲ್‌ಡಿ ನೀರನ್ನು ಶುದ್ಧಗೊಳಿಸಿ ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ. ಮುಂದಿನ ಅಂದಾಜು 30ಕ್ಕೂ ಹೆಚ್ಚು ದಿನಗಳವರೆಗೆ ನೀರು ಸರಬರಾಜು ಮಾಡಬಹುದು.

ಇನ್ನು ಮೋಕಾ ಕೆರೆಯಿಂದ ಪ್ರತಿದಿನ 15-20 ಎಂಎಲ್‌ಡಿ ನೀರನ್ನು ಶುದ್ಧಗೊಳಿಸಿ ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ. ಕೆರೆಗಳಲ್ಲಿ ಸಮರ್ಪಕ ನೀರು ಇದ್ದರೂ, ವಿತರಣೆಯಲ್ಲಿ ಲೋಪಗಳಿರುವುದರಿಂದ ನಗರದ ಜನರು ಮಾತ್ರ ಕುಡಿವ ನೀರಿನ ಸಮಸ್ಯೆಯಿಂದ ಮುಕ್ತಗೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ಬಳ್ಳಾರಿ ನಗರಕ್ಕೆ ಕುಡಿವ ನೀರು ಸರಬರಾಜು ಮಾಡುವ ಅಲ್ಲೀಪುರ, ಮೋಕಾ ಕೆರೆಯಿಂದ ಪ್ರತಿದಿನ 70 ರಿಂದ
75 ಎಂಎಲ್‌ಡಿ ನೀರನ್ನು ಸರಬರಾಜು ಮಾಡಿದರೂ, ಇಂದಿಗೂ ಹಳೆಯ ಪದ್ಧತಿಯನ್ನೇ ಅನುಸರಿಸುತ್ತಿರುವುದು
ಕುಡಿವ ನೀರಿನ ಸಮಸ್ಯೆಗೆ ಕಾರಣವಾಗಿದೆ. 

ಪ್ರತಿದಿನ ಅಥವಾ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡುವ ಕುರಿತು ಹೊಸ ಪದ್ಧತಿಗಳ ಬಗ್ಗೆ ಯಾರೊಬ್ಬರೂ ಚಿಂತನೆ ನಡೆಸುತ್ತಿಲ್ಲ. ನೀರು ಸರಬರಾಜಿನಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಯಾರೊಬ್ಬರೂ ಚಿಂತನೆ ನಡೆಸುತ್ತಿಲ್ಲ. ರೈಸಿಂಗ್‌ ಪೈಪ್‌, ಒಎಚ್‌ಟಿ ಟ್ಯಾಂಕ್‌ಗಳಿಗೆ ಲೀಕೇಜ್‌ ಸಮಸ್ಯೆಯಿಂದಾಗಿ
ಅವು ಬಳಕೆಯಾಗುತ್ತಿಲ್ಲ. ಇದರಿಂದ ಬೆಳೆಯುತ್ತಿರುವ ನಗರದಲ್ಲಿ ಬಡಾವಣೆಗಳು ವಿಸ್ತಾರಗೊಂಡಿದ್ದು, ಒಂದು ಬಡಾವಣೆಗೆ ಸುಮಾರು 5-6 ತಾಸು ಅಥವಾ ಒಂದು ದಿನ, ಒಂದು ರಾತ್ರಿ ಕಾಲ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ನೀರು ಪೋಲಾಗುವುದೇ ಹೆಚ್ಚಾಗಿದೆ.  ಅಲ್ಲದೇ, ನಗರದಲ್ಲಿ ಕಟ್ಟಡ ನಿರ್ಮಾಣಕ್ಕೂ
ಅಕ್ರಮ ಸಂಪರ್ಕಗಳನ್ನು ಪಡೆದು ಕುಡಿವ ನೀರನ್ನೇ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿ ಬರುತ್ತಿದ್ದು,
ಅಧಿಕಾರಿಗಳು, ಜನಪ್ರತಿನಿಧಿಗಳು ಗೊತ್ತು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಈಡೇರದ ಶಾಸಕರ ಭರವಸೆ ಚುನಾವಣಾ ಪೂರ್ವದಲ್ಲಿ ನಗರದ ಜನರಿಗೆ ಕೊಟ್ಟಿದ್ದ ಮಾತಿನಂತೆ ಇತ್ತೀಚೆಗೆ ಅಲ್ಲೀಪುರ ಕೆರೆಗೆ ಭೇಟಿ ನೀಡಿದ್ದ ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಸಂಬಂಧಪಟ್ಟ ಪಾಲಿಕೆ, ಜಲಮಂಡಳಿ ಅಧಿಕಾರಿಗಳಿಂದ ಮಾಹಿತಿ ಪಡೆದು ಪ್ರತಿ ಐದು ದಿನಕ್ಕೊಮ್ಮೆ ಕುಡಿವ ನೀರು ಪೂರೈಸುವುದಾಗಿ ಭರವಸೆ ನೀಡಿದ್ದರು. ಇದರಿಂದ ನಗರದ ಜನರೂ ಕುಡಿವ ನೀರಿನ ಸಮಸ್ಯೆ ಬಗೆಹರಿಯಬಹುದು ಎಂದು ಭಾವಿಸಿದ್ದರು. ಆದರೆ, ಶಾಸಕರು ಭರವಸೆ ನೀಡಿ ತಿಂಗಳಾಗುತ್ತಿದ್ದರೂ, ಸಮಸ್ಯೆ ಮಾತ್ರ ಇತ್ಯರ್ಥವಾಗಿಲ್ಲ. ಇಂದಿಗೂ 10-12 ದಿನಕ್ಕೊಮ್ಮೆ ಕುಡಿವ ನೀರು ಪೂರೈಸಲಾಗುತ್ತಿದೆ. ಹೀಗಾಗಿ ಇನ್ನಾದರೂ, ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಂಡು ಕುಡಿವ ನೀರಿನ ಸಮಸ್ಯೆಯಿಂದ ಮುಕ್ತಗೊಳಿಸಬೇಕಾಗಿದೆ.

24ಗಿ7ಯೋಜನೆ ಮತ್ತೆ ವಿಳಂಬ ನಗರಕ್ಕೆ ದಿನದ 24 ಗಂಟೆಯೂ ಕುಡಿವ ನೀರು ಪೂರೈಸುವ ಸಲುವಾಗಿ 24ಗಿ7
ಕುಡಿವ ನೀರಿನ ಯೋಜನೆ ಜಾರಿಗೆ ತರಲಾಗಿದ್ದು, ಕಳೆದ 2015ರಲ್ಲಿ ಕಾಮಗಾರಿ ಚಾಲನೆ ಪಡೆದುಕೊಂಡಿತ್ತು. 2017 ಆಗಸ್ಟ್‌ ತಿಂಗಳಿಗೆ ಪೂರ್ಣಗೊಳ್ಳಬೇಕಿದ್ದ ಈ ಯೋಜನೆ ಇದೀಗ ಪುನಃ ವಿಳಂಬವಾಗಿದ್ದು, 2018 ಡಿಸೆಂಬರ್‌ ತಿಂಗಳಲ್ಲಿ
ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಹೇಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಡಿವ ನೀರಿನ ಸಮಸ್ಯೆ ಜೀವಂತವಾಗಿರಲು ಕಾರಣವಾಗಿದ್ದು, ನಂತರವಾದರೂ ಸಮಸ್ಯೆಯಿಂದ ಜನರು ಮುಕ್ತಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.