ಅಮ್ಮಿನಬಾವಿ ಗ್ರಾಮದೇವಿ ಜಾತ್ರೆ ಶುರು


Team Udayavani, Jun 29, 2018, 4:31 PM IST

29-june-19.jpg

ಧಾರವಾಡ: ತಾಲೂಕಿನ ಅಮ್ಮಿನಬಾವಿ ಗ್ರಾಮದ ಗ್ರಾಮದೇವತೆಯರ 11 ದಿನಗಳ ಜಾತ್ರಾ ಮಹೋತ್ಸವ ಗುರುವಾರ ಪ್ರಾತಃಕಾಲ ಗ್ರಾಮದ ಪಂಚಗೃಹ ಹಿರೇಮಠದ ಆವರಣದಿಂದ ವಿದ್ಯುಕ್ತವಾಗಿ ಚಾಲನೆ ದೊರೆಯಿತು.

ಗ್ರಾಮದೇವತೆಯರಾದ ದ್ಯಾಮವ್ವ ಹಾಗೂ ದುರ್ಗಾಮಾತೆಯರ ನೂತನ ಕಾಷ್ಠ ಶಿಲ್ಪಗಳಿಗೆ (ಕಟ್ಟಿಗೆಯ ಮೂರ್ತಿಗಳಿಗೆ) ಮೂರ್ತಿಕಾರರು ನೇತ್ರೋನ್ಮಿಲನ (ದೃಷ್ಟಿ ಬರೆಯುವ) ಕಾರ್ಯಕ್ರಮ ನೆರವೇರಿಸುತ್ತಿದ್ದಂತೆ ಅಮ್ಮಿನಬಾವಿ ಪಂಚಗೃಹ ಹಿರೇಮಠದಿಂದ ಉಭಯ ಗ್ರಾಮದೇವಿಯರಿಗೆ ನೂತನಾಂಬರ ಧಾರಣೆ ಮಾಡಲಾಯಿತು. ಶ್ರೀಮಠದ ಹಿರಿಯಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಹಾಗೂ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಸಾಂಪ್ರದಾಯಕ ಪ್ರಥಮ ಉಡಿ ತುಂಬಿದರು.

ಮಾಂಗಲ್ಯ ಧಾರಣೆ: ಪಂಚಗೃಹ ಹಿರೇಮಠದಿಂದ ಗ್ರಾಮದೇವಿ ದೇವಾಲಯದ ಪ್ರಾಂಗಣಕ್ಕೆ ಉತ್ಸವದ ಮೂಲಕ ಉಭಯ ಗ್ರಾಮದೇವಿಯರ ಮೂರ್ತಿಗಳನ್ನು ತರಲಾಯಿತು. ಜಾತ್ರೆಯ ಪರಂಪರೆಯ ನಿಯಮಗಳಂತೆ ಪಂಚಗೃಹ ಹಿರೇಮಠದ ಶ್ರೀಗಳ ಸಾನ್ನಿಧ್ಯದಲ್ಲಿ ದ್ಯಾಮವ್ವ ತಾಯಿಗೆ ವಿಜಯಾನಂದ ದೇಸಾಯಿ ಮಾಂಗಲ್ಯ ಧಾರಣೆ ಮಾಡಿದರು. ದುರ್ಗಾಮಾತೆಗೆ ಕೃಷ್ಣರಂಗರಾವ್‌ ದೇಶಪಾಂಡೆ ಮಾಂಗಲ್ಯ ಧಾರಣೆ ಮಾಡಿದರು. ಈ ಮಾಂಗಲ್ಯ ಧಾರಣೆ ಆಗುತ್ತಿದ್ದಂತೆ ಭಕ್ತ ಗಣದಿಂದ ಶಕ್ತಿ ಮಾತೆಯ ನಿರಂತರ ಜಯಘೋಷ ಮೊಳಗಿತು.

ಹೊನ್ನಾಟ ಆರಂಭ: ಅಮ್ಮಿನಬಾವಿ ಪಂಚಗೃಹ ಹಿರೇಮಠವು ಉಭಯ ಗ್ರಾಮದೇವಿಯರ ತವರುಮನೆ ಎಂದೇ ಬಿಂಬಿತವಾಗಿದ್ದು, ಮಾಂಗಲ್ಯ ಧಾರಣೆಯ ನಂತರ ತವರು ಮನೆಯ ಮೊದಲ ಉಡಿಯನ್ನು ಸ್ವೀಕರಿಸಲು ಉಭಯ ದೇವತೆಯರು ಮರಳಿ ಪಂಚಗೃಹ ಹಿರೇಮಠಕ್ಕೆ ಬರುವ ಸಂಪ್ರದಾಯವಿದೆ. ಶ್ರೀಮಠದ ಮುಖಮಂಟಪದಲ್ಲಿ ದ್ಯಾಮವ್ವತಾಯಿಗೆ ಹಿರಿಯ ಶ್ರೀಗಳಾದ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಹಾಗೂ ದುರ್ಗಾಮಾತೆಗೆ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಉಡಿಗಳನ್ನು ತುಂಬಿದರು. ಸಂಪ್ರದಾಯದಂತೆ ಸರಕಾರದ ಪರವಾಗಿ ತಹಶೀಲ್ದಾರರು ಗ್ರಾಪಂ ಕಟ್ಟಡದಲ್ಲಿ ದೇವತೆಯರಿಗೆ ಉಡಿ ತುಂಬಿದರು. ನಂತರ ಕ್ರಮವಾಗಿ ಗ್ರಾಮದ ಭುಜಬಲಿ ದೇಸಾಯಿ ಅವರ ಮನೆಯಲ್ಲಿ ದೇಶಪಾಂಡೆ ಅವರ ವಾಡೆಯಲ್ಲಿ, ಕಟ್ಟಿಮನಿ ಮನೆತನದ ಕುಟುಂಬಗಳಾದ ಕಡ್ಲೆಪ್ಪನವರ ಹಾಗೂ ಮೇಟಿ ಮನೆತನಗಳ ವತಿಯಿಂದ ಉಡಿತುಂಬುವ ಕಾರ್ಯಕ್ರಮ ಜರುಗಿತು. ಇಲ್ಲಿಂದ ಆರಂಭಗೊಳ್ಳುವ ಹೊನ್ನಾಟವು ಇಡೀ ಗ್ರಾಮದ ಎಲ್ಲ ಬೀದಿ ಬಡಾವಣೆಗಳಲ್ಲಿ ನಿರಂತರ ನಡೆಯಿತು.

ಗ್ರಾಮವೆಲ್ಲ ಭಂಡಾರಮಯ: ಭಂಡಾರದಲ್ಲಿಯ ಅರಿಷಿಣ ಬಣ್ಣವು ಅಭಿವೃದ್ಧಿಯ ಸಂಕೇತ. ಭಂಡಾರವನ್ನೇ ಬಂಗಾರವೆಂದು ಭಾವಿಸಿ ಅದನ್ನು ಹೊನ್ನಾಟದ ಉದ್ದಕ್ಕೂ ಎಲ್ಲೆಡೆ ವ್ಯಾಪಕವಾಗಿ ಸಿಂಚನ ಮಾಡಲಾಗುತ್ತದೆ. ಈ ನಂಬಿಕೆಯಿಂದಾಗಿ ಅಖಂಡ ಭಂಡಾರದ ಸಿಂಚನದಿಂದಾಗಿ ಇಡೀ ಅಮ್ಮಿನಬಾವಿ ಗ್ರಾಮೆಲ್ಲವೂ ಭಂಡಾರಮಯವಾಗಿತ್ತು. ಎಲ್ಲಿ ನೋಡಿದಲ್ಲಿ ಜನವೋ ಜನ. ಗ್ರಾಮದೇವಿಯರ ಹೆಸರಿನೊಂದಿಗೆ ಉಧೋ….ಉಧೋ… ಎನ್ನುವ ಜಯಘೋದ ನಾಮಸ್ಮರಣೆ ಗ್ರಾಮದೆಲ್ಲೆಡೆ ಝೇಂಕರಿಸಿತು.

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.