ಅರಿವು ಮೂಡಿಸಲು ಬಂದವನನ್ನೇ ಕೊಂದರು
Team Udayavani, Jun 30, 2018, 6:00 AM IST
ಅಗರ್ತಲಾ: ಮಕ್ಕಳ ಕಳ್ಳರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಸುಳ್ಳು ಸಂದೇಶಗಳ ಬಗ್ಗೆ ಅರಿವು ಮೂಡಿಸಲು ನೇಮಿಸಲ್ಪಟ್ಟಿದ್ದ ಸರ್ಕಾರಿ ಸಿಬ್ಬಂದಿಯೊಬ್ಬರನ್ನೇ ಮಕ್ಕಳ ಕಳ್ಳರೆಂದು ಅನುಮಾನಿಸಿ, ಅವರನ್ನೇ ಥಳಿಸಿ ಕೊಂದು ಹಾಕಿರುವ ಪ್ರಕರಣ ತ್ರಿಪುರಾದಲ್ಲಿ ನಡೆದಿದೆ.
ಸುಕಾಂತ ಚಕ್ರಬರ್ತಿ (33) ಮೃತ ದುರ್ದೈವಿ. ಸುಳ್ಳು ಸುದ್ದಿಗಳ ವ್ಯಾಪಕ ಹರಡುವಿಕೆಯಿಂದ ಉಂಟಾಗುತ್ತಿರುವ ಅವಘಡಗಳನ್ನು ತಪ್ಪಿಸಲು ತ್ರಿಪುರಾ ಸರ್ಕಾರ ತಂಡವೊಂದನ್ನು ನೇಮಿಸಿತ್ತು. ಸುಕಾಂತ ಅವರು ಆ ತಂಡದ ಸದಸ್ಯರಾಗಿದ್ದರು. ಸುಳ್ಳು ಸುದ್ದಿಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಇತ್ತೀಚೆಗೆ ದಕ್ಷಿಣ ತ್ರಿಪುರಾದ ಕಲಾಚ್ಚರಾಕ್ಕೆ ಅವರು ಭೇಟಿ ನೀಡಿದ್ದರು. ಆದರೆ ಅವರನ್ನೇ ಮಕ್ಕಳ ಕಳ್ಳನೆಂದು ಭಾವಿಸಿದ ಜನರು ಅವರನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಕೀಯ ತಿರುವು: ಘಟನೆ ಬಗ್ಗೆ ಖೇದ ವ್ಯಕ್ತ ಪಡಿಸಿರುವ ಮುಖ್ಯ ಮಂತ್ರಿ ಬಿಪ್ಲಬ್ ದೇವ್, ತ್ರಿಪುರಾದಲ್ಲಿ ಮಕ್ಕಳ ಕಳ್ಳರಿಲ್ಲವೆಂದು ಅಭಯ ನೀಡಿದ್ದಾರೆ. ಜತೆಗೆ, ಘಟನೆಗೆ ಸಿಪಿಎಂ ಕಾರಣವೆಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ