ದೋಹಾ ಪ್ರಯಾಣಿಕರಿಗೆ ಬದಲಿ ವಿಮಾನ ವ್ಯವಸ್ಥೆ
Team Udayavani, Jun 30, 2018, 8:36 AM IST
ಮಂಗಳೂರು: ತಾಂತ್ರಿಕ ದೋಷದಿಂದಾಗಿ ಗುರುವಾರ ರದ್ದುಗೊಂಡಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಮಂಗಳೂರಿನಿಂದ ದೋಹಾಕ್ಕೆ ಪ್ರಯಾಣಿಸಬೇಕಾಗಿದ್ದ ಪ್ರಯಾಣಿಕರನ್ನು ಶುಕ್ರವಾರ ಬದಲಿ ವಿಮಾನದ ಮೂಲಕ ಕಳುಹಿಸಿ ಕೊಡಲಾಗಿದೆ.
ತಾಂತ್ರಿಕ ದೋಷಕ್ಕೆ ಒಳಗಾಗಿದ್ದ ವಿಮಾನವನ್ನು ಗುರುವಾರ ರಾತ್ರಿಯೇ ದುರಸ್ತಿಗೊಳಿಸಲಾಗಿದ್ದು, ಆ ಬಳಿಕ ಅದು ಪ್ರಯಾಣಿಕರಿಲ್ಲದೆ ಮುಂಬಯಿ ವಿಮಾನ ನಿಲ್ದಾಣಕ್ಕೆ ತೆರಳಿದೆ. ಮಂಗಳೂರಿನಿಂದ ದೋಹಾಕ್ಕೆ ತೆರಳಬೇಕಾಗಿದ್ದ, ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ದೋಷದಿಂದಾಗಿ ಗುರುವಾರ ರದ್ದುಗೊಂಡಿತ್ತು. ಆ ದಿನ ಸಂಜೆ 5.35ಕ್ಕೆ ಈ ವಿಮಾನವು ಮಂಗಳೂರಿನಿಂದ ಹೊರಡಬೇಕಾಗಿತ್ತು. ಆದರೆ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ವಿಮಾನದ ಹಾರಾಟವನ್ನೇ ರದ್ದುಗೊಳಿಸಿ, ಆ ವಿಮಾನದಲ್ಲಿ ಪ್ರಯಾಣಿಸಬೇಕಾಗಿದ್ದ ಎಲ್ಲ 140 ಮಂದಿ ಪ್ರಯಾಣಿಕರಿಗೆ ನಗರದ ಹೊಟೇಲ್ವೊಂದರಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಈ ಪ್ರಯಾಣಿಕರನ್ನು ಶುಕ್ರವಾರ ಬೆಳಗ್ಗೆ ಕೊಚ್ಚಿಯಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ನ ಮತ್ತೂಂದು ವಿಮಾನದಲ್ಲಿ ಮುಂಜಾನೆ 5 ಗಂಟೆಗೆ ದೋಹಾಕ್ಕೆ ಕಳುಹಿಸಿ ಕೊಡಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ