ಭೂಸ್ವಾಧೀನದಲ್ಲಿ  ಅಕ್ರಮ: ತನಿಖೆಗೆ ಆಗ್ರಹ


Team Udayavani, Jun 30, 2018, 12:25 PM IST

30-june-8.jpg

ಪೆರ್ಮುದೆ : ಪೆರ್ಮುದೆ, ಕುತ್ತೆತ್ತೂರು ಗ್ರಾಮದ ಎಂಆರ್‌ಪಿಎಲ್‌ ನ 4ನೇ ಹಂತದ ವಿಸ್ತರಣಾ ಘಟಕದ 1011 ಎಕ್ರೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮತ್ತು ಸಿಬಂದಿ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಪೆರ್ಮುದೆ ಹಾಗೂ ಕುತ್ತೆತ್ತೂರು ಗ್ರಾಮಸ್ಥರು ಪೆರ್ಮುದೆ ಗ್ರಾಮ ಸಭೆಯಲ್ಲಿ ಅಗ್ರಹಿಸಿದರು. ಪೆರ್ಮುದೆ ಗ್ರಾ. ಪಂ. ವ್ಯಾಪ್ತಿಯ ಪೆರ್ಮುದೆ ಮತ್ತು ಕುತ್ತೆತ್ತೂರು ಗ್ರಾಮಗಳ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾ. ಪಂ. ಅಧ್ಯಕ್ಷೆ ಸರೋಜಾ ಅವರ ಅಧ್ಯಕ್ಷತೆಯಲ್ಲಿ ಪೆರ್ಮುದೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಶುಕ್ರವಾರ ನಡೆಯಿತು.

ಭೂಸ್ವಾದೀನ ಪ್ರಕ್ರಿಯೆಯಲ್ಲಿ ಎಲ್ಲ ಭೂಮಾಲಕರಿಗೆ ನೋಟೀಸು ಜಾರಿ ಮಾಡಿಲ್ಲ. ವಿಚಾರಣ ಸಂದರ್ಭದಲ್ಲಿ ಕಚೇರಿಗೆ ಲಿಖೀತ ರೂಪದಲ್ಲಿ ಅಕ್ಷೇಪಣೆ ಕೊಡಲಾಗಿತ್ತು. ಆದರೆ ಅದನ್ನು ತಳ್ಳಿ ಹಾಕಲಾಗಿದೆ ಎಂದರು. ಒಪ್ಪಿಗೆ ಇಲ್ಲದ ರೈತರ ಜಾಗವನ್ನು ತನಿಖೆ ಮಾಡದೇ ಸುಳ್ಳು ವರದಿ ಮಾಡಲಾಗಿದೆ. ಕೆಐಎಡಿಬಿ ಕಾಯ್ದೆ ಕಲಂ 3(1),1(3), ಮತ್ತು 28 (1) ರಡಿ ಪ್ರಾಥಮಿಕ ಅಧಿಸೂಚನೆಗೆ ಪ್ರಸ್ತಾಪಿಸಿರುವ ಜಾಗಗಳಿಗೆ ಸಂಬಂಧಿಸಿದ ಚೆಕ್‌ಲಿಸ್ಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ಸರಕಾರವನ್ನು ದಾರಿ ತಪ್ಪಿಸುವ ಕಾರ್ಯ ಮಾಡಲಾಗಿದೆ. ಈ ಹಿಂದೆ 2 ಗ್ರಾಮ ಸಭೆಯಲ್ಲಿ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ, ಗ್ರಾಮ ಸಭೆಯಲ್ಲಿ ನಿರ್ಣಯ ತೆಗೆದುಕೊಂಡರೂ ಅದನ್ನು ಕಡೆಗಣಿಸಲಾಗಿದೆ. ಈ ಕೂಡಲೇ ಭೂ ಸ್ವಾಧೀನ ಪ್ರಕ್ರಿಯೆಯ ವಿರುದ್ಧ ನಿರ್ಣಯ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಮುಖ್ಯಮಂತ್ರಿ, ಕೆಐಎಡಿಬಿ, ವಿಶೇಷ ಜಿಲ್ಲಾಧಿಕಾರಿ ಬೆಂಗಳೂರು, ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡವಂತೆ ಗ್ರಾಮಸ್ಥರು ಸಭೆಯಲ್ಲಿ ಮನವಿ ಮಾಡಿದರು.

ಭೂಸ್ವಾಧೀನ ಪ್ರಕ್ರಿಯೆಯ ಮೊದಲೇ ಆರ್‌ಟಿಸಿಯಲ್ಲಿ ಭೂಸ್ವಾಧೀನ ಎಂದು ನಮೂದಿಸಲಾಗಿದೆ. ಈ ಬಗ್ಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನಮಗೆ ಯಾವುದೇ ಕೃಷಿ ಸಾಲ ಸಿಗದಂತಾಗಿದೆ ಎಂದು ರೈತರು ಅಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಗ್ರಾಮಕರಣಿಕ ಜಗದೀಶ್‌ ಜು.17ರಂದು ಬಜಪೆಯಲ್ಲಿ ನಡೆಯುವ ಕಂದಾಯ ಅದಾಲತ್‌ನಲ್ಲಿ ಅರ್ಜಿ ನೀಡಿ ಸರಿಪಡಿಸಬಹುದು ಎಂದರು.

ಸೆ.16ರೊಳಗೆ 94ಸಿಸಿ ಅರ್ಜಿ ನೀಡಿ
ಸರಕಾರಿ ಜಾಗದಲ್ಲಿ ಜ.1 2015ರ ಮುಂಚೆ ಮಾಡಿ ಅರ್ಜಿ ಸಲ್ಲಿಸದವರು ಸೆ.16ರೊಳಗೆ 94ಸಿಸಿ ಅರ್ಜಿ ನೀಡಬೇಕು ಎಂದು ಜಗದೀಶ್‌ ಹೇಳಿದರು.

ಪಡುಪೆರಾರ, ಕೊಳಂಬೆಯಲ್ಲಿ 4ಮಂದಿಗೆ ಮಲೇರಿಯಾ
ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಪಡುಪೆರಾರ ಮತ್ತು ಕೊಳಂಬೆಯಲ್ಲಿ ಒಟ್ಟು 4ಮಂದಿಗೆ ಮಲೇರಿಯಾ ಪತ್ತೆಯಾಗಿದೆ. ಈ ಬಗ್ಗೆ ಗ್ರಾಮಸ್ಥರು ಪರಿಸರದಲ್ಲಿ ನೀರು ನಿಲ್ಲದಂತೆ, ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಸಭೆಯಲ್ಲಿ ತಿಳಿಸಿದರು. 

ಪೋಷಕಾಂಶದ ಕೊರತೆ
ಹುಣ್ಸೆಕಟ್ಟೆಯಲ್ಲಿ 4ವರ್ಷದ ಮಗುವನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸದೇ ಪೋಷಕಾಂಶದ ಕೊರತೆ ಎದುರಿಸುತ್ತಿದೆ. ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಪೋಷಕರು ಕಳುಹಿಸಿ ಎಂದು ಮೇಲ್ವಿಚಾರಕಿ ಸಭೆಯಲ್ಲಿ ತಿಳಿಸಿದರು. ಮಂಗಳೂರು ತಾಲೂಕು ಪಂಚಾಯತ್‌ ಮುಖ್ಯ ಕಾರ್ಯಾನಿರ್ವಹಣಾಧಿಕಾರಿ ಸದಾನಂದ ಅವರು ನೋಡೆಲ್‌ ಅಧಿಕಾರಿಯಾಗಿದ್ದರು. 

ಗ್ರಾ.ಪಂ. ಉಪಾಧ್ಯಕ್ಷ ಕಿಶೋರ್‌, ತಾ.ಪಂ. ಸದಸ್ಯೆ ಶಶಿಕಲಾ ಶೆಟ್ಟಿ, ಜಿ.ಪಂ. ಸದಸ್ಯೆ ವಸಂತಿ ಕಿಶೋರ್‌, ಗ್ರಾ. ಪಂ. ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ನಾಗೇಶ್‌ ಅವರು ವಾರ್ಡ್‌ ಸಭೆಯ ನಡವಳಿ ವಾಚಿಸಿದರು. ಪಿಡಿಒ ಹಸನಬ್ಬ ನಿರ್ವಹಿಸಿದರು.

ಸರಕಾರಿ ಬಸ್‌ ಕಲ್ಪಿಸಿ
ಕುತ್ತೆತ್ತೂರು ಪ್ರದೇಶಕ್ಕೆ ಬರುವ ಕೆಲ ಖಾಸಗಿ ಬಸ್‌ಗಳು ಸಂಚಾರ ಮೊಟಕುಗೊಳಿಸುತ್ತಿದ್ದು, ಅಂತಹ ಬಸ್‌ಗಳ ಪರ್ಮಿಟ್‌ ಅನ್ನು ರದ್ದುಗೊಳಿಸಬೇಕು. ಕೂಡಲೇ ಇಲ್ಲಿಗೆ 2 ಸರಕಾರಿ ಬಸ್‌ ಗಳನ್ನು ನಿಯೋಜಿಸಬೇಕು ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗುವುದು ಎಂದು ನಿರ್ಣಯ ತೆಗೆದುಕೊಂಡರು.

ಪ್ರಾಕೃತಿಕ ವಿಕೋಪ: 48ಗಂಟೆಯಲ್ಲಿ ಪರಿಹಾರ 
ಎಲ್ಲಿಯಾದರೂ ಪ್ರಾಕೃತಿಕ ವಿಕೋಪಕ್ಕೆ ಹಾನಿಯಾದರೆ ಗ್ರಾಮ ಕರಣಿಕ ಅಥವಾ ತಾಲೂಕು ಪ್ರಾಕೃತಿಕ ವಿಕೋಪ ಕೇಂದ್ರಕ್ಕೆ ಮನವಿ ಮಾಡಿ 48 ಗಂಟೆಯೊಳಗೆ ಪರಿಹಾರ ಸಿಗಲಿದೆ ಎಂದು ಗ್ರಾಮ ಕರಣಿಕ ಜಗದೀಶ್‌ ಸಭೆಯಲ್ಲಿ ತಿಳಿಸಿದರು. 

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.