200 ಕಂಪನಿಗಳ ಮೇಲೆ ಹದ್ದಿನ ಕಣ್ಣು
Team Udayavani, Jul 1, 2018, 6:00 AM IST
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಂಡು ಒಂದು ವರ್ಷ ಪೂರೈಸುತ್ತಿದ್ದು, ಆರಂಭದಲ್ಲಿನ ತೊಡಕುಗಳು ನಿವಾರಣೆಯಾಗಿ ಸುಸ್ಥಿರವಾಗುತ್ತಿದ್ದಂತೆಯೇ ಇದೀಗ ಜಿಎಸ್ಟಿ ಪಾವತಿ ಉಲ್ಲಂಘನೆಯನ್ನು ಕಂಡುಹಿಡಿಯುವುದರ ಮೇಲೆ ಕೇಂದ್ರೀಯ ತೆರಿಗೆ ಮಂಡಳಿ ತನ್ನ ಗಮನ ಕೇಂದ್ರೀಕರಿಸಿದೆ. ಇದರ ಮೊದಲ ಹಂತವಾಗಿ 200 ಕಂಪನಿಗಳಿಗೆ ನೋಟಿಸ್ ನೀಡಲಾಗಿದೆ.
ಈ ಕಂಪನಿಗಳು ನಗದು ಮೂಲಕ ಗ್ರಾಹಕರಿಗೆ ಸಾಮಗ್ರಿಗಳನ್ನು ವಿತರಿಸುತ್ತಿದ್ದು, ಉತ್ಪನ್ನದ ಮೌಲ್ಯ ಮತ್ತು ಉತ್ಪನ್ನದ ಖರೀದಿ ಹಾಗೂ ಮಾರಾಟ ವಿವರಗಳು ಹೋಲಿಕೆಯಾಗುತ್ತಿಲ್ಲ. ಹೀಗಾಗಿ ಈ ಕಂಪನಿಗಳಿಗೆ ನೋಟಿಸ್ ನೀಡಲಾಗಿದೆ.
ಸಾಮಾನ್ಯವಾಗಿ ತೆರಿಗೆ ತಪ್ಪಿಸುವುದಕ್ಕಾಗಿ ಹೆಚ್ಚಿನ ಬೆಲೆಯಲ್ಲಿ ಉತ್ಪನ್ನಗಳನ್ನು ಖರೀದಿಸಿ, ಕಡಿಮೆ ಬೆಲೆಗೆ ಮಾರಾಟ ಮಾಡಿರುವುದಾಗಿ ಉಲ್ಲೇಖೀಸಲಾಗುತ್ತದೆ. ಕೆಲವು ಕಂಪನಿಗಳು ಉತ್ಪನ್ನದ ಮೌಲ್ಯದ ಶೇ.5 ರಷ್ಟು ಬೆಲೆಯ ಮೇಲೆ ಮಾತ್ರವೇ ತೆರಿಗೆ ಪಾವತಿ ಮಾಡಿವೆ. ಸಾಮಾನ್ಯವಾಗಿ ದಾಖಲೆಯಲ್ಲಿ ಕಡಿಮೆ ಬೆಲೆಗೆ ಮಾರಲಾಗಿದೆ ಎಂದು ಉಲ್ಲೇಖೀಸಿ, ಉಳಿದ ಮೊತ್ತವನ್ನು ನಗದು ರೂಪದಲ್ಲಿ ವ್ಯಾಪಾರಿಗಳು ಪಡೆದಿರುತ್ತಾರೆ.
ಆದರೆ ಎಲ್ಲ ಕಂಪನಿಗಳೂ ಅಕ್ರಮದಲ್ಲಿ ಭಾಗಿಯಾಗಿವೆ ಎಂದು ಹೇಳಲಾಗದು. ಕೆಲವು ವ್ಯಾಪಾರಿಗಳು ಪೂರೈಕೆ ಮಾಡಿದ ಸಾಮಗ್ರಿಗಳನ್ನು ಜಿಎಸ್ಟಿ ಅಡಿಯಲ್ಲಿ ದಾಖಲಿಸಿರುವುದಿಲ್ಲ. ಇದರಿಂದಾಗಿಯೂ ಸಮಸ್ಯೆ ಉದ್ಭವವಾಗಿರಬಹುದು ಎಂದು ಹೇಳಲಾಗಿದೆ. ಈ ಕಂಪನಿಗಳು ಪ್ರತಿಕ್ರಿಯೆ ನೀಡಿದ ನಂತರದಲ್ಲಿ ಸಿಬಿಡಿಟಿ ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸುವ ಸಾಧ್ಯತೆಯಿವೆ. ಇನ್ನೊಂದೆಡೆ ನೋಟಿಸ್ ಪಡೆದ ಈ ಕಂಪನಿಗಳು ತೆರಿಗೆ ಇಲಾಖೆ ವಿರುದ್ಧ ಮೊಕದ್ದಮೆ ಹೂಡುವ ಸಾಧ್ಯತೆಯೂ ಇದೆ.
ಜುಲೈ 1 ಜಿಎಸ್ಟಿ ದಿನ
ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜುಲೈ 1 ಅನ್ನು ಜಿಎಸ್ಟಿ ದಿನ ಎಂದು ಪರಿಗಣಿಸಲು ನಿರ್ಧರಿಸಲಾಗಿದೆ. ಈ ಸಂಭ್ರಮಾಚರಣೆಗೆ ಬೃಹತ್ ಕಾರ್ಯಕ್ರಮವನ್ನು ನವದೆಹಲಿ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹಣಕಾಸು ಖಾತೆ ಸಹಾಯಕ ಸಚಿವ ಶಿವಪ್ರತಾಪ್ ಶುಕ್ಲಾ ಗೌರವ ಅತಿಥಿಯಾಗಿರಲಿದ್ದಾರೆ. ಅಲ್ಲದೆ ಉದ್ಯಮಿಗಳು, ವ್ಯಾಪಾರಿಗಳು ಮತ್ತು ತೆರಿಗೆ ಅಧಿಕಾರಿಗಳು ಇರಲಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ ಎಂದು ಕೇಂದ್ರ ವಿತ್ತ ಸಚಿವಾಲಯ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ