“ಅಧಿಕಾರಿಗಳಿಂದ ಮತ್ತೆ ಮರಳು ಸಮಸ್ಯೆ’


Team Udayavani, Jul 1, 2018, 6:00 AM IST

23.jpg

ಉಡುಪಿ: ಮರಳು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಪ್ರಯತ್ನಿಸದೆ ಉಲ್ಬಣಕ್ಕೆ ಕಾರಣವಾಗುತ್ತಿದ್ದಾರೆಂದು ಶಾಸಕರಾದ
ಕೆ. ರಘುಪತಿ ಭಟ್‌ ಮತ್ತು ಪ್ರತಾಪಚಂದ್ರ ಶೆಟ್ಟಿ ಶನಿವಾರ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಆ. 7ಕ್ಕೆ ಈ ವರ್ಷದ ಸಿಆರ್‌ಝೆಡ್‌ ಮರಳುಗಾರಿಕೆ ಅನುಮತಿ (ಲೀಸ್‌) ಅವಧಿ ಮುಕ್ತಾಯವಾಗುತ್ತದೆ. ಅನಂತರ ಮತ್ತೆ ಅನುಮತಿ ನೀಡಬೇಕು. ಅನುಮತಿ ನೀಡಬೇಕಾದರೆ ಮೊದಲೇ ಮರಳುದಿಬ್ಬಗಳನ್ನು ಗುರುತಿಸಬೇಕು. ಈ ಕೆಲಸವನ್ನು ಮಾಡಿಲ್ಲ. ಹಾಗಾಗಿ ಮತ್ತೆ ಮುಂದಿನ ಹಲವು ತಿಂಗಳುಗಳ ಕಾಲ ಮರಳಿನ ಸಮಸ್ಯೆ ಉಲ್ಬಣವಾಗುವ ಆತಂಕ ಇದೆ ಎಂದರು. ಫೆಬ್ರವರಿ-ಮಾರ್ಚ್‌ನಲ್ಲಿಯೇ ಹೊಸ ಮರಳು ದಿಬ್ಬಗಳನ್ನು ಗುರುತಿಸುವ ಕೆಲಸ ಮಾಡಬೇಕಿತ್ತು ಎಂದು ಜಿ.ಪಂ. ಸದಸ್ಯ ಪ್ರತಾಪ್‌ ಹೆಗ್ಡೆ ಮಾರಾಳಿ ಹೇಳಿದರು. 

ಲೇಡಿಗೋಷನ್‌ನಂತೆ ಉಡುಪಿ ಆಸ್ಪತ್ರೆ: ಈಗ ಖಾಸಗಿಯವರಿಂದ ನಿರ್ಮಿಸಲ್ಪಟ್ಟ ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತವಾಗಿ ಚಿಕಿತ್ಸೆ ದೊರೆಯಬೇಕಾದರೆ ಅದರ ಮೇಲೆ ಸರಕಾರದ ನಿಯಂತ್ರಣ ಅತ್ಯಗತ್ಯ. ಈಗ ಇರುವ ಹೆಂಗಸರ ಮತ್ತು ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿರುವ ವೈದ್ಯರು, ದಾದಿಯರು, ಸಿಬಂದಿಯನ್ನು ಹೊಸದಾಗಿ ನಿರ್ಮಾಣವಾದ 200 ಬೆಡ್‌ಗಳ ಆಸ್ಪತ್ರೆಗೆ ನಿಯೋಜಿಸಬೇಕು. ಅಲ್ಲಿ ಸರಕಾರಿ ಮತ್ತು ಖಾಸಗಿ ವೈದ್ಯರು, ಸಿಬಂದಿ, ತಜ್ಞರಿರಬೇಕು. ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಯಲ್ಲಿರುವಂತೆ ಪ್ರತ್ಯೇಕ ಯುನಿಟ್‌ಗಳಿರಬೇಕು.  ಈಗ ಒಡಂಬಡಿಕೆ ಆಗಿದೆ.  ಕೆಲವು ಷರತ್ತುಗಳನ್ನು ವಿಧಿಸಿಯೇ ಅಂತಿಮ ಒಪ್ಪಿಗೆ ನೀಡಬೇಕು. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುತ್ತೇನೆ ಎಂದು ಭಟ್‌ ಹೇಳಿದರು.

ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್‌. ಮೆಂಡನ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ, ಉದಯ ಕೋಟ್ಯಾನ್‌, ಶಶಿಕಾಂತ್‌ ಪಡುಬಿದ್ರಿ, ಸಿಇಒ ಶಿವಾನಂದ ಕಾಪಶಿ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್‌, ಉಪಕಾರ್ಯದರ್ಶಿ ನಾಗೇಶ್‌ ರಾಯ್ಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.